BREAKING NEWS

ಕಾಂಗ್ರೆಸ್ ಸೇರ್ಪಡೆ ಖಚಿತಪಡಿಸದ ಜಗದೀಶ ಶೆಟ್ಟರ್: ಬೆಂಗಳೂರಿನತ್ತ ಪ್ರಯಾಣ

ಹುಬ್ಬಳ್ಳಿ: ಬಿಜೆಪಿ ಟಿಕೆಟ್ ವಂಚಿತ ಶಾಸಕ ಜಗದೀಶ ಶೆಟ್ಟರ್ ಅವರು, ಕಾಂಗ್ರೆಸ್ ಸೇರ್ಪಡೆ ಕುರಿತು ಇನ್ನೂ ಖಚಿತಪಡಿಸಿಲ್ಲ.

ಶಾಸಕ ಸ್ಥಾನಕ್ಕೆ ಶಿರಸಿಯಲ್ಲಿ ರಾಜೀನಾಮೆ ಸಲ್ಲಿಸಿ ಹುಬ್ಬಳ್ಳಿಗೆ ವಾಪಸ್ಸಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿಗೆ ತೆರಳಿದ ಬಳಿಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದರ ಬಗ್ಗೆ ಮತ್ತು ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ ಕೈಗೊಳ್ಳುವೆ ಎಂದರು.

ಕಡೆ ಗಳಿಗೆಯಲ್ಲಿ ನನಗೆ ಕರೆ ಮಾಡಿದ್ದ ಪಕ್ಷದ ವರಿಷ್ಠರು ರಾಜ್ಯಸಭಾ ಸ್ಥಾನಕ್ಕೆ ಆಯ್ಕೆ ಮಾಡುವುದಾಗಿ ಹೇಳಿದ್ದರು. ಆರು ಸಲ ಶಾಸಕನಾದವನು ರಾಜ್ಯಸಭಾ ಸದಸ್ಯನಾಗಿ ಮೂಲೆಯಲ್ಲಿ ಕೂರಲು ಸಾಧ್ಯವೇ? ಒಂದು ಟಿಕೆಟ್ ಕೊಡಲು ಇಷ್ಟೆಲ್ಲಾ ಸತಾಯಿಸುತ್ತಿರುವುದು ನೋವು ತಂದಿದೆ. ನಾನು ಚುನಾವಣೆಗೆ ಸ್ಪರ್ಧಿಸುವುದಂತೂ ಖಚಿತ. ಪಕ್ಷೇತರವೋ ಅಥವಾ ಕಾಂಗ್ರೆಸ್ ನಿಂದಲೋ ಎಂಬುದನ್ನು ಬೆಂಗಳೂರಿನಲ್ಲಿ ತಿಳಿಸುವೆ ಎಂದು ಹೇಳಿದರು.

ಎಷ್ಟು ದಿನ ಹಿಡಿದಿಟ್ಟುಕೊಳ್ಳಲು ಸಾಧ್ಯ: ಶೆಟ್ಟರ್ ಅವರು ಶಿರಸಿಗೆ ತೆರಳಿದ ಬೆನ್ನಲ್ಲೇ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಶೆಟ್ಟರ್ ಬೆಂಬಲಿಗರ ಜೊತೆ ಸಭೆ ನಡೆಸಿ ಎಚ್ಚರಿಕೆ ನೀಡಿರುವುದೆರ ಕುರಿತು ಪ್ರತಿಕ್ರಿಯಿಸಿದ ಅವರು, ಅವರೆಲ್ಲರೂ ನಾನು ಬೆಳೆಸಿದ ಹುಡುಗರು. ದೈಹಿಕವಾಗಿ ಹಿಡಿದಿಟ್ಟುಕೊಳ್ಳಬಹುದೇ ಹೊರತು ಮಾನಸಿಕವಾಗಿ ಅಲ್ಲ. ಆದರೂ, ಎಷ್ಟು ದಿನ ಹಿಡಿದಿಟ್ಟುಕೊಳ್ಳಲು ಸಾಧ್ಯ ಎಂದರು. ನಂತರ ಬೆಂಗಳೂರಿಗೆ ಹೊರಟರು.

andolanait

Recent Posts

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

4 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

6 hours ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

6 hours ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

6 hours ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

7 hours ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

8 hours ago