BREAKING NEWS

ಕಾಂಗ್ರೆಸ್ ಸೇರ್ಪಡೆ ಖಚಿತಪಡಿಸದ ಜಗದೀಶ ಶೆಟ್ಟರ್: ಬೆಂಗಳೂರಿನತ್ತ ಪ್ರಯಾಣ

ಹುಬ್ಬಳ್ಳಿ: ಬಿಜೆಪಿ ಟಿಕೆಟ್ ವಂಚಿತ ಶಾಸಕ ಜಗದೀಶ ಶೆಟ್ಟರ್ ಅವರು, ಕಾಂಗ್ರೆಸ್ ಸೇರ್ಪಡೆ ಕುರಿತು ಇನ್ನೂ ಖಚಿತಪಡಿಸಿಲ್ಲ.

ಶಾಸಕ ಸ್ಥಾನಕ್ಕೆ ಶಿರಸಿಯಲ್ಲಿ ರಾಜೀನಾಮೆ ಸಲ್ಲಿಸಿ ಹುಬ್ಬಳ್ಳಿಗೆ ವಾಪಸ್ಸಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿಗೆ ತೆರಳಿದ ಬಳಿಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದರ ಬಗ್ಗೆ ಮತ್ತು ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ ಕೈಗೊಳ್ಳುವೆ ಎಂದರು.

ಕಡೆ ಗಳಿಗೆಯಲ್ಲಿ ನನಗೆ ಕರೆ ಮಾಡಿದ್ದ ಪಕ್ಷದ ವರಿಷ್ಠರು ರಾಜ್ಯಸಭಾ ಸ್ಥಾನಕ್ಕೆ ಆಯ್ಕೆ ಮಾಡುವುದಾಗಿ ಹೇಳಿದ್ದರು. ಆರು ಸಲ ಶಾಸಕನಾದವನು ರಾಜ್ಯಸಭಾ ಸದಸ್ಯನಾಗಿ ಮೂಲೆಯಲ್ಲಿ ಕೂರಲು ಸಾಧ್ಯವೇ? ಒಂದು ಟಿಕೆಟ್ ಕೊಡಲು ಇಷ್ಟೆಲ್ಲಾ ಸತಾಯಿಸುತ್ತಿರುವುದು ನೋವು ತಂದಿದೆ. ನಾನು ಚುನಾವಣೆಗೆ ಸ್ಪರ್ಧಿಸುವುದಂತೂ ಖಚಿತ. ಪಕ್ಷೇತರವೋ ಅಥವಾ ಕಾಂಗ್ರೆಸ್ ನಿಂದಲೋ ಎಂಬುದನ್ನು ಬೆಂಗಳೂರಿನಲ್ಲಿ ತಿಳಿಸುವೆ ಎಂದು ಹೇಳಿದರು.

ಎಷ್ಟು ದಿನ ಹಿಡಿದಿಟ್ಟುಕೊಳ್ಳಲು ಸಾಧ್ಯ: ಶೆಟ್ಟರ್ ಅವರು ಶಿರಸಿಗೆ ತೆರಳಿದ ಬೆನ್ನಲ್ಲೇ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಶೆಟ್ಟರ್ ಬೆಂಬಲಿಗರ ಜೊತೆ ಸಭೆ ನಡೆಸಿ ಎಚ್ಚರಿಕೆ ನೀಡಿರುವುದೆರ ಕುರಿತು ಪ್ರತಿಕ್ರಿಯಿಸಿದ ಅವರು, ಅವರೆಲ್ಲರೂ ನಾನು ಬೆಳೆಸಿದ ಹುಡುಗರು. ದೈಹಿಕವಾಗಿ ಹಿಡಿದಿಟ್ಟುಕೊಳ್ಳಬಹುದೇ ಹೊರತು ಮಾನಸಿಕವಾಗಿ ಅಲ್ಲ. ಆದರೂ, ಎಷ್ಟು ದಿನ ಹಿಡಿದಿಟ್ಟುಕೊಳ್ಳಲು ಸಾಧ್ಯ ಎಂದರು. ನಂತರ ಬೆಂಗಳೂರಿಗೆ ಹೊರಟರು.

andolanait

Recent Posts

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

35 mins ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

42 mins ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

2 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

3 hours ago

ಓದುಗರ ಪತ್ರ: ಡಿಕೆಶಿ ಸೂಚನೆ ಸ್ವಾಗತಾರ್ಹ

ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…

6 hours ago

ಓದುಗರ ಪತ್ರ: ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ದಾಖಲಿಸಲಿ

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…

6 hours ago