BREAKING NEWS

ಕಾಂಗ್ರೆಸ್ ಸೇರ್ಪಡೆ ಖಚಿತಪಡಿಸದ ಜಗದೀಶ ಶೆಟ್ಟರ್: ಬೆಂಗಳೂರಿನತ್ತ ಪ್ರಯಾಣ

ಹುಬ್ಬಳ್ಳಿ: ಬಿಜೆಪಿ ಟಿಕೆಟ್ ವಂಚಿತ ಶಾಸಕ ಜಗದೀಶ ಶೆಟ್ಟರ್ ಅವರು, ಕಾಂಗ್ರೆಸ್ ಸೇರ್ಪಡೆ ಕುರಿತು ಇನ್ನೂ ಖಚಿತಪಡಿಸಿಲ್ಲ.

ಶಾಸಕ ಸ್ಥಾನಕ್ಕೆ ಶಿರಸಿಯಲ್ಲಿ ರಾಜೀನಾಮೆ ಸಲ್ಲಿಸಿ ಹುಬ್ಬಳ್ಳಿಗೆ ವಾಪಸ್ಸಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿಗೆ ತೆರಳಿದ ಬಳಿಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದರ ಬಗ್ಗೆ ಮತ್ತು ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ ಕೈಗೊಳ್ಳುವೆ ಎಂದರು.

ಕಡೆ ಗಳಿಗೆಯಲ್ಲಿ ನನಗೆ ಕರೆ ಮಾಡಿದ್ದ ಪಕ್ಷದ ವರಿಷ್ಠರು ರಾಜ್ಯಸಭಾ ಸ್ಥಾನಕ್ಕೆ ಆಯ್ಕೆ ಮಾಡುವುದಾಗಿ ಹೇಳಿದ್ದರು. ಆರು ಸಲ ಶಾಸಕನಾದವನು ರಾಜ್ಯಸಭಾ ಸದಸ್ಯನಾಗಿ ಮೂಲೆಯಲ್ಲಿ ಕೂರಲು ಸಾಧ್ಯವೇ? ಒಂದು ಟಿಕೆಟ್ ಕೊಡಲು ಇಷ್ಟೆಲ್ಲಾ ಸತಾಯಿಸುತ್ತಿರುವುದು ನೋವು ತಂದಿದೆ. ನಾನು ಚುನಾವಣೆಗೆ ಸ್ಪರ್ಧಿಸುವುದಂತೂ ಖಚಿತ. ಪಕ್ಷೇತರವೋ ಅಥವಾ ಕಾಂಗ್ರೆಸ್ ನಿಂದಲೋ ಎಂಬುದನ್ನು ಬೆಂಗಳೂರಿನಲ್ಲಿ ತಿಳಿಸುವೆ ಎಂದು ಹೇಳಿದರು.

ಎಷ್ಟು ದಿನ ಹಿಡಿದಿಟ್ಟುಕೊಳ್ಳಲು ಸಾಧ್ಯ: ಶೆಟ್ಟರ್ ಅವರು ಶಿರಸಿಗೆ ತೆರಳಿದ ಬೆನ್ನಲ್ಲೇ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಶೆಟ್ಟರ್ ಬೆಂಬಲಿಗರ ಜೊತೆ ಸಭೆ ನಡೆಸಿ ಎಚ್ಚರಿಕೆ ನೀಡಿರುವುದೆರ ಕುರಿತು ಪ್ರತಿಕ್ರಿಯಿಸಿದ ಅವರು, ಅವರೆಲ್ಲರೂ ನಾನು ಬೆಳೆಸಿದ ಹುಡುಗರು. ದೈಹಿಕವಾಗಿ ಹಿಡಿದಿಟ್ಟುಕೊಳ್ಳಬಹುದೇ ಹೊರತು ಮಾನಸಿಕವಾಗಿ ಅಲ್ಲ. ಆದರೂ, ಎಷ್ಟು ದಿನ ಹಿಡಿದಿಟ್ಟುಕೊಳ್ಳಲು ಸಾಧ್ಯ ಎಂದರು. ನಂತರ ಬೆಂಗಳೂರಿಗೆ ಹೊರಟರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago