ಹುಬ್ಬಳ್ಳಿ: ಬಿಜೆಪಿ ಟಿಕೆಟ್ ವಂಚಿತ ಶಾಸಕ ಜಗದೀಶ ಶೆಟ್ಟರ್ ಅವರು, ಕಾಂಗ್ರೆಸ್ ಸೇರ್ಪಡೆ ಕುರಿತು ಇನ್ನೂ ಖಚಿತಪಡಿಸಿಲ್ಲ.
ಶಾಸಕ ಸ್ಥಾನಕ್ಕೆ ಶಿರಸಿಯಲ್ಲಿ ರಾಜೀನಾಮೆ ಸಲ್ಲಿಸಿ ಹುಬ್ಬಳ್ಳಿಗೆ ವಾಪಸ್ಸಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿಗೆ ತೆರಳಿದ ಬಳಿಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದರ ಬಗ್ಗೆ ಮತ್ತು ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ ಕೈಗೊಳ್ಳುವೆ ಎಂದರು.
ಕಡೆ ಗಳಿಗೆಯಲ್ಲಿ ನನಗೆ ಕರೆ ಮಾಡಿದ್ದ ಪಕ್ಷದ ವರಿಷ್ಠರು ರಾಜ್ಯಸಭಾ ಸ್ಥಾನಕ್ಕೆ ಆಯ್ಕೆ ಮಾಡುವುದಾಗಿ ಹೇಳಿದ್ದರು. ಆರು ಸಲ ಶಾಸಕನಾದವನು ರಾಜ್ಯಸಭಾ ಸದಸ್ಯನಾಗಿ ಮೂಲೆಯಲ್ಲಿ ಕೂರಲು ಸಾಧ್ಯವೇ? ಒಂದು ಟಿಕೆಟ್ ಕೊಡಲು ಇಷ್ಟೆಲ್ಲಾ ಸತಾಯಿಸುತ್ತಿರುವುದು ನೋವು ತಂದಿದೆ. ನಾನು ಚುನಾವಣೆಗೆ ಸ್ಪರ್ಧಿಸುವುದಂತೂ ಖಚಿತ. ಪಕ್ಷೇತರವೋ ಅಥವಾ ಕಾಂಗ್ರೆಸ್ ನಿಂದಲೋ ಎಂಬುದನ್ನು ಬೆಂಗಳೂರಿನಲ್ಲಿ ತಿಳಿಸುವೆ ಎಂದು ಹೇಳಿದರು.
ಎಷ್ಟು ದಿನ ಹಿಡಿದಿಟ್ಟುಕೊಳ್ಳಲು ಸಾಧ್ಯ: ಶೆಟ್ಟರ್ ಅವರು ಶಿರಸಿಗೆ ತೆರಳಿದ ಬೆನ್ನಲ್ಲೇ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಶೆಟ್ಟರ್ ಬೆಂಬಲಿಗರ ಜೊತೆ ಸಭೆ ನಡೆಸಿ ಎಚ್ಚರಿಕೆ ನೀಡಿರುವುದೆರ ಕುರಿತು ಪ್ರತಿಕ್ರಿಯಿಸಿದ ಅವರು, ಅವರೆಲ್ಲರೂ ನಾನು ಬೆಳೆಸಿದ ಹುಡುಗರು. ದೈಹಿಕವಾಗಿ ಹಿಡಿದಿಟ್ಟುಕೊಳ್ಳಬಹುದೇ ಹೊರತು ಮಾನಸಿಕವಾಗಿ ಅಲ್ಲ. ಆದರೂ, ಎಷ್ಟು ದಿನ ಹಿಡಿದಿಟ್ಟುಕೊಳ್ಳಲು ಸಾಧ್ಯ ಎಂದರು. ನಂತರ ಬೆಂಗಳೂರಿಗೆ ಹೊರಟರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…