BREAKING NEWS

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ ಜಗದೀಶ್ ಶೆಟ್ಟರ್‌

ಬೆಂಗಳೂರು : ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಅವರು ಸೋಮವಾರ ಬೆಳಿಗ್ಗೆ ಆಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್‌, ರಣದೀಪ್‌ ಸಿಂಗ್‌ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಅವರು ಶೆಟ್ಟರ್‌ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಕಾಂಗ್ರೆಸ್‌ ಪಕ್ಷ ಸೇರಿದ ಬಳಿಕ ಮಾತನಾಡಿದ ಶೆಟ್ಟರ್‌, ಜನಸಂಘ ಮತ್ತು ಬಿಜೆಪಿಯಲ್ಲಿ ಸಕ್ರಿಯವಾಗಿದ್ದ ಕುಟುಂಬ ನಮ್ಮದು. ನನ್ನ ತಂದೆ ಜನಸಂಘದಿಂದ ದಕ್ಷಿಣ ಭಾರತದಲ್ಲಿ ಮೊದಲ ಮೇಯರ್‌ ಆಗಿದ್ದರು. ರಾಜ್ಯದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ ಪ್ರಮುಖರಲ್ಲಿ ನಾನೂ ಒಬ್ಬ. ಆದರೆ, ಈ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ನಿರಾಕರಿಸುವ ಮೂಲಕ ಪಕ್ಷದ ಕೆಲವರು ನನಗೆ ಅವಮಾನ ಮಾಡಿದರು. ಸ್ವಾಭಿಮಾನಕ್ಕೆ ಧಕ್ಕೆ ಬಂದಿರುವುದರಿಂದ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಹೊರ ಬಂದಿದ್ದೇನೆ ಎಂದರು.

ಲಿಂಗಾಯತ ಸಮುದಾಯದ ಹಿರಿಯ ರಾಜಕೀಯ ನಾಯಕರಲ್ಲಿ ನಾನೂ ಒಬ್ಬ. ಬಿ.ಎಸ್‌. ಯಡಿಯೂರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತರಾಗಿದ್ದಾರೆ. ಈಗ ಬಿಜೆಪಿಯಲ್ಲಿ ಲಿಂಗಾಯತ ನಾಯಕರಲ್ಲಿ ನಾನೇ ಹಿರಿಯ. ಈ ಕಾರಣಕ್ಕಾಗಿಯೇ ಬಿಜೆಪಿಯ ಕೆಲವರು ನನ್ನನ್ನು ತುಳಿಯುವ ಪ್ರಯತ್ನ ಮಾಡಿದರು. ಬಿಜೆಪಿ ರಾಜ್ಯ ಘಟಕವು ಈಗ ಸಂಪೂರ್ಣವಾಗಿ ಕೆಲವು ವ್ಯಕ್ತಿಗಳ ಹಿಡಿತದಲ್ಲಿದೆ. ಇದರಿಂದಾಗಿಯೇ ನನ್ನಂತಹ ಹಿರಿಯರಿಗೆ ಅವಮಾನ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಏಕೆ ನಮ್ಮನ್ನು ಈ ರೀತಿ ಅವಮಾನಿಸಲಾಗುತ್ತಿದೆ ಎಂಬ ಪ್ರಶ್ನೆಗೆ ಬಿಜೆಪಿ ವರಿಷ್ಠರಿಂದ ಉತ್ತರ ಬಂದಿಲ್ಲ. ಸ್ವಾಭಿಮಾನವನ್ನು ಉಳಿಸಿಕೊಳ್ಳುವುದಕ್ಕಾಗಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದೇನೆ. ಇದು ನನ್ನ ಹಾಗೂ ಕಾಂಗ್ರೆಸ್‌ ಪಕ್ಷದ ಪಾಲಿಗೆ ಹೊಸ ಅಧ್ಯಾಯ. ಕಾಂಗ್ರೆಸ್‌ ಪಕ್ಷದ ಸಂಘಟನೆಗೆ ಸಂಪೂರ್ಣವಾಗಿ ಶ್ರಮಿಸುತ್ತೇನೆ ಎಂದರು.

ಶೆಟ್ಟರ್‌ ಅವರನ್ನು ಸ್ವಾಗತಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಶೆಟ್ಟರ್‌ ಅವರು ಸಂಘ ಪರಿವಾರದ ಮೂಲದವರಾದರೂ ಯಾವತ್ತೂ ಕೂಡ ಜನವಿರೋಧಿಯಾಗಿ ನಡೆದುಕೊಳ್ಳಲಿಲ್ಲ. ಒಬ್ಬ ಸಜ್ಜನ ರಾಜಕಾರಣಿ. ಅವರ ಸೇರ್ಪಡೆಯಿಂದ ಕಾಂಗ್ರೆಸ್‌ಗೆ ಹೆಚ್ಚಿನ ಬಲ ಬಂದಿದೆ. ಇದು ರಾಷ್ಟ್ರ ಮಟ್ಟದಲ್ಲೂ ಬದಲಾವಣೆಯ ದಿಕ್ಸೂಚಿ ಆಗಲಿದೆ ಎಂದು ಹೇಳಿದರು.

ಸಿದ್ದರಾಮಯ್ಯ ಮಾತನಾಡಿ, ಶೆಟ್ಟರ್‌ ರಾಜ್ಯದ ಸ್ವಾಭಿಮಾನಿ ರಾಜಕಾರಣಿಗಳಲ್ಲಿ ಒಬ್ಬರು. ಅವರನ್ನು ಬಿಜೆಪಿ ನಾಯಕರು ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಸ್ವಾಭಿಮಾನದ ಪ್ರಶ್ನೆಗಾಗಿಯೇ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬಂದಿದ್ದಾರೆ ಎಂದರು.

ಶೆಟ್ಟರ್‌ ಸೇರ್ಪಡೆಯಿಂದ ಕಾಂಗ್ರೆಸ್‌ಗೆ ದೊಡ್ಡ ಶಕ್ತಿ ಬಂದಿದೆ. ನಮ್ಮ ಪಕ್ಷ 150ಕ್ಕೂ ಹೆಚ್ಚು ಸ್ಥಾನ ಗಳಿಸಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

ಅಮರ ಸಿಂಹ ಪಾಟೀಲ ಕೂಡ ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ ಪಕ್ಷ ಸೇರಿದರು.

‘ರಾಜ್ಯದಲ್ಲಿ ಹೊಸ ಅಧ್ಯಾಯ, ಹೊಸ ಇತಿಹಾಸ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿ, ಮಾಜಿ ವಿರೋಧ ಪಕ್ಷದ ನಾಯಕರು ಹಾಗೂ ಆರು ಬಾರಿ ಶಾಸಕರಾಗಿದ್ದ ಜಗದೀಶ ಶೆಟ್ಟರ್‌ ಅವರು ಕಾಂಗ್ರೆಸ್‌ ಕುಟುಂಬ ಸೇರಿದ್ದಾರೆ’ ಎಂದು ರಾಜ್ಯ ಕಾಂಗ್ರೆಸ್​ ಚುನಾವಣಾ ಉಸ್ತುವಾರಿ ರಣದೀಪ್​ ಸಿಂಗ್ ಸುರ್ಜೇವಾಲ ಟ್ವೀಟ್‌ ಮಾಡಿದ್ದಾರೆ.

 

lokesh

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

29 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

34 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

43 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago