BREAKING NEWS

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ ಜಗದೀಶ್ ಶೆಟ್ಟರ್‌

ಬೆಂಗಳೂರು : ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಅವರು ಸೋಮವಾರ ಬೆಳಿಗ್ಗೆ ಆಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್‌, ರಣದೀಪ್‌ ಸಿಂಗ್‌ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಅವರು ಶೆಟ್ಟರ್‌ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಕಾಂಗ್ರೆಸ್‌ ಪಕ್ಷ ಸೇರಿದ ಬಳಿಕ ಮಾತನಾಡಿದ ಶೆಟ್ಟರ್‌, ಜನಸಂಘ ಮತ್ತು ಬಿಜೆಪಿಯಲ್ಲಿ ಸಕ್ರಿಯವಾಗಿದ್ದ ಕುಟುಂಬ ನಮ್ಮದು. ನನ್ನ ತಂದೆ ಜನಸಂಘದಿಂದ ದಕ್ಷಿಣ ಭಾರತದಲ್ಲಿ ಮೊದಲ ಮೇಯರ್‌ ಆಗಿದ್ದರು. ರಾಜ್ಯದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ ಪ್ರಮುಖರಲ್ಲಿ ನಾನೂ ಒಬ್ಬ. ಆದರೆ, ಈ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ನಿರಾಕರಿಸುವ ಮೂಲಕ ಪಕ್ಷದ ಕೆಲವರು ನನಗೆ ಅವಮಾನ ಮಾಡಿದರು. ಸ್ವಾಭಿಮಾನಕ್ಕೆ ಧಕ್ಕೆ ಬಂದಿರುವುದರಿಂದ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಹೊರ ಬಂದಿದ್ದೇನೆ ಎಂದರು.

ಲಿಂಗಾಯತ ಸಮುದಾಯದ ಹಿರಿಯ ರಾಜಕೀಯ ನಾಯಕರಲ್ಲಿ ನಾನೂ ಒಬ್ಬ. ಬಿ.ಎಸ್‌. ಯಡಿಯೂರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತರಾಗಿದ್ದಾರೆ. ಈಗ ಬಿಜೆಪಿಯಲ್ಲಿ ಲಿಂಗಾಯತ ನಾಯಕರಲ್ಲಿ ನಾನೇ ಹಿರಿಯ. ಈ ಕಾರಣಕ್ಕಾಗಿಯೇ ಬಿಜೆಪಿಯ ಕೆಲವರು ನನ್ನನ್ನು ತುಳಿಯುವ ಪ್ರಯತ್ನ ಮಾಡಿದರು. ಬಿಜೆಪಿ ರಾಜ್ಯ ಘಟಕವು ಈಗ ಸಂಪೂರ್ಣವಾಗಿ ಕೆಲವು ವ್ಯಕ್ತಿಗಳ ಹಿಡಿತದಲ್ಲಿದೆ. ಇದರಿಂದಾಗಿಯೇ ನನ್ನಂತಹ ಹಿರಿಯರಿಗೆ ಅವಮಾನ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಏಕೆ ನಮ್ಮನ್ನು ಈ ರೀತಿ ಅವಮಾನಿಸಲಾಗುತ್ತಿದೆ ಎಂಬ ಪ್ರಶ್ನೆಗೆ ಬಿಜೆಪಿ ವರಿಷ್ಠರಿಂದ ಉತ್ತರ ಬಂದಿಲ್ಲ. ಸ್ವಾಭಿಮಾನವನ್ನು ಉಳಿಸಿಕೊಳ್ಳುವುದಕ್ಕಾಗಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದೇನೆ. ಇದು ನನ್ನ ಹಾಗೂ ಕಾಂಗ್ರೆಸ್‌ ಪಕ್ಷದ ಪಾಲಿಗೆ ಹೊಸ ಅಧ್ಯಾಯ. ಕಾಂಗ್ರೆಸ್‌ ಪಕ್ಷದ ಸಂಘಟನೆಗೆ ಸಂಪೂರ್ಣವಾಗಿ ಶ್ರಮಿಸುತ್ತೇನೆ ಎಂದರು.

ಶೆಟ್ಟರ್‌ ಅವರನ್ನು ಸ್ವಾಗತಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಶೆಟ್ಟರ್‌ ಅವರು ಸಂಘ ಪರಿವಾರದ ಮೂಲದವರಾದರೂ ಯಾವತ್ತೂ ಕೂಡ ಜನವಿರೋಧಿಯಾಗಿ ನಡೆದುಕೊಳ್ಳಲಿಲ್ಲ. ಒಬ್ಬ ಸಜ್ಜನ ರಾಜಕಾರಣಿ. ಅವರ ಸೇರ್ಪಡೆಯಿಂದ ಕಾಂಗ್ರೆಸ್‌ಗೆ ಹೆಚ್ಚಿನ ಬಲ ಬಂದಿದೆ. ಇದು ರಾಷ್ಟ್ರ ಮಟ್ಟದಲ್ಲೂ ಬದಲಾವಣೆಯ ದಿಕ್ಸೂಚಿ ಆಗಲಿದೆ ಎಂದು ಹೇಳಿದರು.

ಸಿದ್ದರಾಮಯ್ಯ ಮಾತನಾಡಿ, ಶೆಟ್ಟರ್‌ ರಾಜ್ಯದ ಸ್ವಾಭಿಮಾನಿ ರಾಜಕಾರಣಿಗಳಲ್ಲಿ ಒಬ್ಬರು. ಅವರನ್ನು ಬಿಜೆಪಿ ನಾಯಕರು ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಸ್ವಾಭಿಮಾನದ ಪ್ರಶ್ನೆಗಾಗಿಯೇ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬಂದಿದ್ದಾರೆ ಎಂದರು.

ಶೆಟ್ಟರ್‌ ಸೇರ್ಪಡೆಯಿಂದ ಕಾಂಗ್ರೆಸ್‌ಗೆ ದೊಡ್ಡ ಶಕ್ತಿ ಬಂದಿದೆ. ನಮ್ಮ ಪಕ್ಷ 150ಕ್ಕೂ ಹೆಚ್ಚು ಸ್ಥಾನ ಗಳಿಸಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

ಅಮರ ಸಿಂಹ ಪಾಟೀಲ ಕೂಡ ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ ಪಕ್ಷ ಸೇರಿದರು.

‘ರಾಜ್ಯದಲ್ಲಿ ಹೊಸ ಅಧ್ಯಾಯ, ಹೊಸ ಇತಿಹಾಸ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿ, ಮಾಜಿ ವಿರೋಧ ಪಕ್ಷದ ನಾಯಕರು ಹಾಗೂ ಆರು ಬಾರಿ ಶಾಸಕರಾಗಿದ್ದ ಜಗದೀಶ ಶೆಟ್ಟರ್‌ ಅವರು ಕಾಂಗ್ರೆಸ್‌ ಕುಟುಂಬ ಸೇರಿದ್ದಾರೆ’ ಎಂದು ರಾಜ್ಯ ಕಾಂಗ್ರೆಸ್​ ಚುನಾವಣಾ ಉಸ್ತುವಾರಿ ರಣದೀಪ್​ ಸಿಂಗ್ ಸುರ್ಜೇವಾಲ ಟ್ವೀಟ್‌ ಮಾಡಿದ್ದಾರೆ.

 

lokesh

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

17 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

17 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

17 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

17 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

17 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

17 hours ago