BREAKING NEWS

ಟಿಕೆಟ್‌ಗಾಗಿ ಜಗದೀಶ್‌ ಶೆಟ್ಟರ್‌ ಸ್ವಾಭಿಮಾನವನ್ನು ಮಾರಿಕೊಂಡಿದ್ದಾರೆ : ಈಶ್ವರಪ್ಪ

ಹುಬ್ಬಳ್ಳಿ : ಒಂದು ಟಿಕೆಟ್‌ಗಾಗಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಸ್ವಾಭಿಮಾನವನ್ನು ಮಾರಿಕೊಂಡಿದ್ದಾರೆ. ಅವರ ಪರಿಸ್ಥಿತಿ ನೋಡಿದರೆ ಅಯ್ಯೋ ಎನಿಸುತ್ತಿದೆ. ಆರ್‌ಎಸ್‌ಎಸ್‌, ಬಜರಂಗದಳ, ಹಿಂದೂ ಧರ್ಮದ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ್ದ ಶೆಟ್ಟರ್‌ ಅವರ ಸ್ವಾಭಿಮಾನವನ್ನು ನಾನು ನಿರೀಕ್ಷೆ ಮಾಡಿದ್ದೆ. ಬಜರಂಗದಳ ನಿಷೇಧದ ಕುರಿತು ಅವರ ನಿಲುವೇನು? ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಮಾಜಿ ಸಚಿವ ಈಶ್ವರಪ್ಪ ಅವರು ಆಗ್ರಹಿಸಿದರು. ಬಜರಂಗದಳ ರಾಷ್ಟ್ರ, ಧರ್ಮ ರಕ್ಷಣೆ ಮಾಡುತ್ತಿದೆ.

ಯಾವುದೇ ಸಾಮಾನ್ಯ ಜ್ಞಾನ ಇಲ್ಲದೆ ಕಾಂಗ್ರೆಸ್‌ನವರು ಪ್ರಣಾಳಿಕೆ ಸಿದ್ಧಪಡಿಸಿ, ಅದರಲ್ಲಿ ಬಜರಂಗ ದಳ ನಿಷೇಧದ ವಿಷಯ ಸೇರಿಸಿದ್ದಾರೆ. ಕಾಂಗ್ರೆಸ್‌ನವರು ಈ ಪ್ರಣಾಳಿಕೆಯನ್ನು ತಕ್ಷಣ ವಾಪಸ್‌ ಪಡೆಯಬೇಕು ಆಗ್ರಹಿಸಿದರು. ಮುಸಲ್ಮಾರನ್ನು ತೃಪ್ತಿಪಡಿಸುವುದೇ ಕಾಂಗ್ರೆಸ್‌ ಕೆಲಸ. ಬಜರಂಗದಳ ನಿಷೇಧಿಸುವ ವಿಚಾರದಲ್ಲಿ ಅವರದ್ದೇ ಆದ ಗೊಂದಲ ಇದೆ. ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ ಜಾತಿವಾದಿಗಳಾಗಿದ್ದು, ಡಿ.ಕೆ.ಶಿವಕುಮಾರ್‌ ತಮ್ಮ ಹೆಸರನ್ನು ಕೆಡಿ ಶಿವಕುಮಾರ್‌ ಎಂದು ಇಟ್ಟುಕೊಳ್ಳಲಿ ಎಂದು ಹೇಳಿದರು.

lokesh

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

5 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

6 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

7 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

8 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

8 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

12 hours ago