BREAKING NEWS

ಜೈನ ಮುನಿ ಹತ್ಯೆ ಪ್ರಕರಣ : ಎಫ್‌ಐಆರ್‌ನಲ್ಲಿ ಬಯಲಾಯ್ತು ರಹಸ್ಯ

ಚಿಕ್ಕೋಡಿ : ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದ್ದು, ಇದೀಗ ಎಫ್‌ಐಆರ್ ಮೂಲಕ ಜೈನಮುನಿಯ ಕೊಲೆ ರಹಸ್ಯ ಬಯಲಾಗಿದೆ.

ಕರೆಂಟ್ ಶಾಕ್ ನೀಡಿ ಸ್ವಾಮೀಜಿಯ ಹತ್ಯೆಗೈದ ಹಂತಕರು ಬಳಿಕ ಅವರ ದೇಹವನ್ನು ತುಂಡು ತುಂಡು ಮಾಡಿ ಕೊಳವೆ ಬಾವಿಗೆ ಎಸೆದಿದ್ದರು. ಕೊಲೆ ಮಾಡಿದ್ದು ನಾರಾಯಣ ಮಾಳಿ ಮಾತ್ರ ಎಂದು ಬಿಂಬಿಸುವ ಕಾರ್ಯ ನಡೆದಿತ್ತು. ಆದರೆ ಸದ್ಯ ಹಸನ್ ಡಾಲಾಯತ್ ಹಾಗೂ ನಾರಾಯಣ ಮಾಳಿ ಇಬ್ಬರು ಸೇರಿ ಜೈನಮುನಿಯ ಹತ್ಯೆ ಮಾಡಿದ್ದಾರೆ ಎಂಬ ಸ್ಫೋಟಕ ಸುದ್ದಿ ಎಫ್‌ಐಆರ್ ಮೂಲಕ ಬಹಿರಂಗವಾಗಿದೆ. ಕರೆಂಟ್ ಶಾಕ್ ಕೊಟ್ಟರೂ ಸ್ವಾಮೀಜಿ ಪ್ರಾಣ ಪಕ್ಷಿ ಹಾರಿ ಹೋಗಿರಲಿಲ್ಲ. ಕರೆಂಟ್ ಶಾಕ್ ಕೊಟ್ಟು ಚಿತ್ರ ಹಿಂಸೆ ನೀಡಿದ ನಂತರ ಸ್ವಾಮೀಜಿಯ ಟವೆಲ್‌ನಿಂದಲೇ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ.

ಹಣ ವಾಪಸ್ ನೀಡುವಂತೆ ಪದೇ ಪದೇ ಸ್ವಾಮೀಜಿ ಪೀಡಿಸುತ್ತಿದ್ದು, ಇದರಿಂದ ಕೋಪಗೊಂಡ ನಾರಾಯಣ ಮಾಳಿ ತನ್ನ ಸ್ನೇಹಿತ ಹಸನ್ ಡಾಲಾಯತ್ ಜೊತೆ ಸೇರಿ ಕೊಲೆ ಮಾಡಿದ್ದಾನೆ. ಕೋಣೆಯಲ್ಲಿ ಜೈನ ಮುನಿಗೆ ಮೊದಲು ಕರೆಂಟ್ ಶಾಕ್ ನೀಡಿ ಚಿತ್ರ ಹಿಂಸೆ ನೀಡಿದ್ದು, ಬಳಿಕ ಕೊಲೆ ಮಾಡಿ ಗೋಣಿ ಚೀಲದಲ್ಲಿ ಶವ ಸಾಗಿಸಿದ್ದಾರೆ.

ಹೀರೆಕುಡಿಯಿಂದ ಖಟಕಬಾವಿಯವರೆಗೂ ಬೈಕ್ ಮೇಲೆ ಶವ ಸಾಗಾಟ ಮಾಡಿ ಖಟಕಬಾವಿಯ ಕೊಳವೆ ಬಾವಿ ಬಳಿ ದೇಹ ಪೀಸ್ ಪೀಸ್ ಮಾಡಿದ್ದಾರೆ. ನಂತರ ಕೊಳವೆ ಬಾವಿಯಲ್ಲಿ ಶವ ಎಸೆದು ಹೋಗಿರುವ ವಿಚಾರ ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿದೆ.

lokesh

Recent Posts

SSLC RESULTS | ಶೇ.94.10ರಷ್ಟು ಫಲಿತಾಂಶ,7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ

ಬೆಂಗಳೂರು : ಇಂದು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಇದೇ ಮೊದಲ ಬಾರಿಗೆ ಶೇ.94.10ರಷ್ಟು ಫಲಿತಾಂಶ ಪ್ರಕಟವಾಗಿದೆ.…

19 mins ago

SSLC RESULTS | ಈ ಬಾರಿಯೂ ಬಾಲಕಿಯರೇ ಮೇಲುಗೈ, ಶೇ.96.18 ವಿದ್ಯಾರ್ಥಿನಿಯರ್‌ ಪಾಸ್‌

ಬೆಂಗಳೂರು : 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಫಲಿತಾಂಶ ಬಂದಿದೆ. ಶಿಕ್ಷಣ ಸಚಿವ…

46 mins ago

SSLC RESULTS | ದಕ್ಷಿಣ ಕನ್ನಡ ರಾಜ್ಯಕ್ಕೆ ಪ್ರಥಮ, ಕಲಬುರಗಿಗೆ ಕೊನೆ ಸ್ಥಾನ

ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ.…

1 hour ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಬೆಂಗಳೂರು : 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶವನ್ನು ಬುಧವಾರ (ಏಪ್ರಿಲ್ 23) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…

1 hour ago

ಬರಿದಾಗುತ್ತಿರುವ ಕಪಿಲೆಯ ಒಡಲಿಗೆ ಕೊಳಚೆ ನೀರು

ಕೈಗಾರಿಕೆಗಳ ತ್ಯಾಜ್ಯ, ಒಳಚರಂಡಿ ನೀರು ಸೇರಿ ಸ್ನಾನಘಟ್ಟದ ನೀರು ಕಲ್ಮಶ, ಸ್ನಾನ ಮಾಡುವ ಭಕ್ತರಿಗೆ ರೋಗದ ಭೀತಿ ಎಸ್.ಎಸ್.ಭಟ್ ನಂಜನಗೂಡು…

2 hours ago

ಕಾರುಗಳ ಮುಖಾಮುಖಿ ಡಿಕ್ಕಿ : ಇಬ್ಬರು ಸಾವು

ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದಿಂದ ಕೇರಳಾಪುರಕ್ಕೆ…

2 hours ago