BREAKING NEWS

ಜೈನ ಮುನಿ ಹತ್ಯೆ ಪ್ರಕರಣ : ಎಫ್‌ಐಆರ್‌ನಲ್ಲಿ ಬಯಲಾಯ್ತು ರಹಸ್ಯ

ಚಿಕ್ಕೋಡಿ : ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದ್ದು, ಇದೀಗ ಎಫ್‌ಐಆರ್ ಮೂಲಕ ಜೈನಮುನಿಯ ಕೊಲೆ ರಹಸ್ಯ ಬಯಲಾಗಿದೆ.

ಕರೆಂಟ್ ಶಾಕ್ ನೀಡಿ ಸ್ವಾಮೀಜಿಯ ಹತ್ಯೆಗೈದ ಹಂತಕರು ಬಳಿಕ ಅವರ ದೇಹವನ್ನು ತುಂಡು ತುಂಡು ಮಾಡಿ ಕೊಳವೆ ಬಾವಿಗೆ ಎಸೆದಿದ್ದರು. ಕೊಲೆ ಮಾಡಿದ್ದು ನಾರಾಯಣ ಮಾಳಿ ಮಾತ್ರ ಎಂದು ಬಿಂಬಿಸುವ ಕಾರ್ಯ ನಡೆದಿತ್ತು. ಆದರೆ ಸದ್ಯ ಹಸನ್ ಡಾಲಾಯತ್ ಹಾಗೂ ನಾರಾಯಣ ಮಾಳಿ ಇಬ್ಬರು ಸೇರಿ ಜೈನಮುನಿಯ ಹತ್ಯೆ ಮಾಡಿದ್ದಾರೆ ಎಂಬ ಸ್ಫೋಟಕ ಸುದ್ದಿ ಎಫ್‌ಐಆರ್ ಮೂಲಕ ಬಹಿರಂಗವಾಗಿದೆ. ಕರೆಂಟ್ ಶಾಕ್ ಕೊಟ್ಟರೂ ಸ್ವಾಮೀಜಿ ಪ್ರಾಣ ಪಕ್ಷಿ ಹಾರಿ ಹೋಗಿರಲಿಲ್ಲ. ಕರೆಂಟ್ ಶಾಕ್ ಕೊಟ್ಟು ಚಿತ್ರ ಹಿಂಸೆ ನೀಡಿದ ನಂತರ ಸ್ವಾಮೀಜಿಯ ಟವೆಲ್‌ನಿಂದಲೇ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ.

ಹಣ ವಾಪಸ್ ನೀಡುವಂತೆ ಪದೇ ಪದೇ ಸ್ವಾಮೀಜಿ ಪೀಡಿಸುತ್ತಿದ್ದು, ಇದರಿಂದ ಕೋಪಗೊಂಡ ನಾರಾಯಣ ಮಾಳಿ ತನ್ನ ಸ್ನೇಹಿತ ಹಸನ್ ಡಾಲಾಯತ್ ಜೊತೆ ಸೇರಿ ಕೊಲೆ ಮಾಡಿದ್ದಾನೆ. ಕೋಣೆಯಲ್ಲಿ ಜೈನ ಮುನಿಗೆ ಮೊದಲು ಕರೆಂಟ್ ಶಾಕ್ ನೀಡಿ ಚಿತ್ರ ಹಿಂಸೆ ನೀಡಿದ್ದು, ಬಳಿಕ ಕೊಲೆ ಮಾಡಿ ಗೋಣಿ ಚೀಲದಲ್ಲಿ ಶವ ಸಾಗಿಸಿದ್ದಾರೆ.

ಹೀರೆಕುಡಿಯಿಂದ ಖಟಕಬಾವಿಯವರೆಗೂ ಬೈಕ್ ಮೇಲೆ ಶವ ಸಾಗಾಟ ಮಾಡಿ ಖಟಕಬಾವಿಯ ಕೊಳವೆ ಬಾವಿ ಬಳಿ ದೇಹ ಪೀಸ್ ಪೀಸ್ ಮಾಡಿದ್ದಾರೆ. ನಂತರ ಕೊಳವೆ ಬಾವಿಯಲ್ಲಿ ಶವ ಎಸೆದು ಹೋಗಿರುವ ವಿಚಾರ ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿದೆ.

lokesh

Recent Posts

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

37 mins ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

40 mins ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

41 mins ago

ಧ್ವನಿಹೀನರಿಗೆ ಧ್ವನಿಯಾಗಿದ್ದ ದೇವರಾಜ ಅರಸು

ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…

43 mins ago

ನೀರಿಲ್ಲದಿದ್ದರೂ ಭರ್ತಿಯಾಗುತ್ತಿದೆ ಕಸುವಿನಹಳ್ಳಿ ಕೆರೆ!

ಎಸ್.ಎಸ್.ಭಟ್ ಸುತ್ತಲಿನ ಕ್ರಷರ್‌ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…

46 mins ago