BREAKING NEWS

ಜೈನಮುನಿ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಾದ್ಯಂತ ಭಾರೀ ಸುದ್ದಿ ಮಾಡಿದ ಬೆಳಗಾವಿ ಜಿಲ್ಲೆಯ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ.

ಇಂದು ಬುಧವಾರ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ವಿಚಾರವನ್ನು ಪ್ರಕಟಿಸಿದ್ದಾರೆ. ಜೈನ ಮುನಿಯನ್ನು ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಲಾಗಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಆದರೆ ಹತ್ಯೆ ಪ್ರಕರಣದಲ್ಲಿ ಬೇರೆ ಆಯಾಮ ಇದೆ. ಈ ಹಿನ್ನೆಲೆಯಲ್ಲಿ ಇದನ್ನು ಸಿಬಿಐ ತನಿಖೆಗೆ ‌ನೀಡಬೇಕು ಎಂದು‌ ಬಿಜೆಪಿ ಆಗ್ರಹಿಸಿತ್ತು. ಆದರೆ ಇದೀಗ ಸರ್ಕಾರ ಸಿಐಡಿ ತನಿಖೆಗೆ ನೀಡಲು ನಿರ್ಧಾರ ಮಾಡಿದೆ ಎಂದು ತಿಳಿಸಿದರು.

ನಡೆದ ಘಟನೆಯೇನು?: ಕಳೆದ ಜುಲೈ 6ರಂದು ಬೆಳಗ್ಗೆಯಿಂದ ನಂದಿ ಕಾಮಕುಮಾರ ಸ್ವಾಮಿಗಳು ಆಶ್ರಮದಲ್ಲಿ ಕಾಣಸಿಗಲಿಲ್ಲ. ಆಗ ಆತಂಕಗೊಂಡ ಭಕ್ತರು ಎಲ್ಲ ಕಡೆ ಹುಡುಕಿದರೂ ಮುನಿಗಳು ಪತ್ತೆಯಾಗಿರಲಿಲ್ಲ. ಹೀಗಾಗಿ ಚಿಕ್ಕೋಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದರು. ಶುಕ್ರವಾರ ರಾತ್ರಿ ಪೊಲೀಸರು ಶಂಕಿತ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಆರೋಪಿಗಳು ರಾಯಬಾಗ ತಾಲೂಕಿನ ಕಟಕಬಾವಿ ಗ್ರಾಮದ ಹೊರವಲಯದ ಬೋರ್‌ವೆಲ್‌ನಲ್ಲಿ ಜೈನ ಮುನಿಗಳ ಶವ ಎಸೆದಿರುವುದಾಗಿ ಮಾಹಿತಿ ನೀಡಿದ್ದರು. ಹೀಗಾಗಿ ಪೊಲೀಸರು ರಾತ್ರಿಯಿಂದಲೇ ಕಾರಾರ‍ಯಚರಣೆ ಆರಂಭಿಸಿದ್ದರು. ಜೈನ ಮುನಿಗಳ ದೇಹದ ತುಂಡುಗಳನ್ನು ಬಟ್ಟೆಯಲ್ಲಿ ಕಟ್ಟಿ ತೆರೆದ ಕೊಳವೆ ಬಾವಿಯಲ್ಲಿ ಆರೋಪಿಗಳು ಎಸೆದಿದ್ದರು. 20 ಅಡಿ ಆಳದಲ್ಲಿ ಶವದ ಭಾಗಗಳು ಪತ್ತೆಯಾಗಿತ್ತು.

ಹಣಕಾಸು ವ್ಯವಹಾರ: ಆರಂಭದಲ್ಲಿ ಹಣಕಾಸಿನ ವ್ಯವಹಾರಕ್ಕಾಗಿ ಜೈನ ಮುನಿಗಳ ಕೊಲೆ ಮಾಡಲಾಗಿದೆ ಎನ್ನಲಾಗಿತ್ತು. ಕೊಲೆ ಆರೋಪದಲ್ಲಿ ಹಿರೇಕೋಡಿ ಗ್ರಾಮದ ನಾರಾಯಣ ಮಾಳಿ ಮತ್ತು ಹುಸೇನ್‌ ಡಾಲಾಯತ ಎಂಬುವವರನ್ನು ಬಂಧಿಸಲಾಗಿದೆ. ಕೊಲೆ ಆರೋಪಿ ಮುನಿಗಳಿಂದ ಹಣ ಪಡೆದಿದ್ದ. ಹಣ ಮರಳಿಸುವಂತೆ ಮುನಿಗಳು ಕೇಳಿದ್ದರಿಂದ ಕೊಲೆ ಮಾಡಲಾಗಿದೆ ಪ್ರಾಥಮಿಕ ತನಿಖೆಯ ನಂತರ ಪೊಲೀಸರು ಹೇಳಿದ್ದರು.

andolanait

Recent Posts

ಹನೂರು| ಬೀದಿ ನಾಯಿ ದಾಳಿ: ಜಿಂಕೆ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ನೀರು ಹರಸಿ ಜಮೀನಿನತ್ತ ಬಂದಿದ್ದ ಜಿಂಕೆಯೊಂದರ ಮೇಲೆ ಬೀದಿ…

12 mins ago

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…

3 hours ago

ಏರುತ್ತಿರುವ ತಾಪಮಾನ; ತಂಪು ಪಾನೀಯಗಳಿಗೆ ಮೊರೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…

3 hours ago

ಆಗ ಟೈಲರ್ ಕಾಲ, ಈಗ ಆನ್ ಲೈನ್ ಕಾಲ…

ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…

3 hours ago

ಸೈಕಲ್ಲು, ಸಿರೀಂದ್ರ ಮತ್ತು ನನ್ನ ನಟರಾಜ ಸರ್ವೀಸು

ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…

3 hours ago

ತರುಣ ತಲೆಮಾರಿನ ಕೈಯಲ್ಲಿ ನೆರೆಯ ನೇಪಾಳದ ಚುಕ್ಕಾಣಿ…

ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…

4 hours ago