BREAKING NEWS

ಜೈನಮುನಿ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಾದ್ಯಂತ ಭಾರೀ ಸುದ್ದಿ ಮಾಡಿದ ಬೆಳಗಾವಿ ಜಿಲ್ಲೆಯ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ.

ಇಂದು ಬುಧವಾರ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ವಿಚಾರವನ್ನು ಪ್ರಕಟಿಸಿದ್ದಾರೆ. ಜೈನ ಮುನಿಯನ್ನು ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಲಾಗಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಆದರೆ ಹತ್ಯೆ ಪ್ರಕರಣದಲ್ಲಿ ಬೇರೆ ಆಯಾಮ ಇದೆ. ಈ ಹಿನ್ನೆಲೆಯಲ್ಲಿ ಇದನ್ನು ಸಿಬಿಐ ತನಿಖೆಗೆ ‌ನೀಡಬೇಕು ಎಂದು‌ ಬಿಜೆಪಿ ಆಗ್ರಹಿಸಿತ್ತು. ಆದರೆ ಇದೀಗ ಸರ್ಕಾರ ಸಿಐಡಿ ತನಿಖೆಗೆ ನೀಡಲು ನಿರ್ಧಾರ ಮಾಡಿದೆ ಎಂದು ತಿಳಿಸಿದರು.

ನಡೆದ ಘಟನೆಯೇನು?: ಕಳೆದ ಜುಲೈ 6ರಂದು ಬೆಳಗ್ಗೆಯಿಂದ ನಂದಿ ಕಾಮಕುಮಾರ ಸ್ವಾಮಿಗಳು ಆಶ್ರಮದಲ್ಲಿ ಕಾಣಸಿಗಲಿಲ್ಲ. ಆಗ ಆತಂಕಗೊಂಡ ಭಕ್ತರು ಎಲ್ಲ ಕಡೆ ಹುಡುಕಿದರೂ ಮುನಿಗಳು ಪತ್ತೆಯಾಗಿರಲಿಲ್ಲ. ಹೀಗಾಗಿ ಚಿಕ್ಕೋಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದರು. ಶುಕ್ರವಾರ ರಾತ್ರಿ ಪೊಲೀಸರು ಶಂಕಿತ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಆರೋಪಿಗಳು ರಾಯಬಾಗ ತಾಲೂಕಿನ ಕಟಕಬಾವಿ ಗ್ರಾಮದ ಹೊರವಲಯದ ಬೋರ್‌ವೆಲ್‌ನಲ್ಲಿ ಜೈನ ಮುನಿಗಳ ಶವ ಎಸೆದಿರುವುದಾಗಿ ಮಾಹಿತಿ ನೀಡಿದ್ದರು. ಹೀಗಾಗಿ ಪೊಲೀಸರು ರಾತ್ರಿಯಿಂದಲೇ ಕಾರಾರ‍ಯಚರಣೆ ಆರಂಭಿಸಿದ್ದರು. ಜೈನ ಮುನಿಗಳ ದೇಹದ ತುಂಡುಗಳನ್ನು ಬಟ್ಟೆಯಲ್ಲಿ ಕಟ್ಟಿ ತೆರೆದ ಕೊಳವೆ ಬಾವಿಯಲ್ಲಿ ಆರೋಪಿಗಳು ಎಸೆದಿದ್ದರು. 20 ಅಡಿ ಆಳದಲ್ಲಿ ಶವದ ಭಾಗಗಳು ಪತ್ತೆಯಾಗಿತ್ತು.

ಹಣಕಾಸು ವ್ಯವಹಾರ: ಆರಂಭದಲ್ಲಿ ಹಣಕಾಸಿನ ವ್ಯವಹಾರಕ್ಕಾಗಿ ಜೈನ ಮುನಿಗಳ ಕೊಲೆ ಮಾಡಲಾಗಿದೆ ಎನ್ನಲಾಗಿತ್ತು. ಕೊಲೆ ಆರೋಪದಲ್ಲಿ ಹಿರೇಕೋಡಿ ಗ್ರಾಮದ ನಾರಾಯಣ ಮಾಳಿ ಮತ್ತು ಹುಸೇನ್‌ ಡಾಲಾಯತ ಎಂಬುವವರನ್ನು ಬಂಧಿಸಲಾಗಿದೆ. ಕೊಲೆ ಆರೋಪಿ ಮುನಿಗಳಿಂದ ಹಣ ಪಡೆದಿದ್ದ. ಹಣ ಮರಳಿಸುವಂತೆ ಮುನಿಗಳು ಕೇಳಿದ್ದರಿಂದ ಕೊಲೆ ಮಾಡಲಾಗಿದೆ ಪ್ರಾಥಮಿಕ ತನಿಖೆಯ ನಂತರ ಪೊಲೀಸರು ಹೇಳಿದ್ದರು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

3 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

11 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

11 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

11 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

14 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

14 hours ago