ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರದಿಂದ ಒಳನುಸುಳಲು ಯತ್ನಿಸುತ್ತಿದ್ದ ನಾಲ್ವರು ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಮಚ್ಚಲ್ ಸೆಕ್ಟರ್ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಪೊಲೀಸರು ಮತ್ತು ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.
ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದು, ‘ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಕುಪ್ವಾರದ ಮಚ್ಚಲ್ ಸೆಕ್ಟರ್ನ ಕಾಲಾ ಜಂಗಲ್ನಲ್ಲಿ ಪಾಕ್ ಆಕ್ರಮಿತ ಕಾಶ್ಮೀರದಿಂದ ನಮ್ಮ ಕಡೆಗೆ ನುಸುಳಲು ಪ್ರಯತ್ನಿಸುತ್ತಿದ್ದ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ’ ಎಂದಿದ್ದಾರೆ.
ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕುಪ್ವಾರದ ಮಚ್ಚಲ್ ಸೆಕ್ಟರ್ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ನಿಯೋಜನೆಗೊಂಡಿದ್ದ ಪಡೆಗಳು ಒಳನುಸುಳುವಿಕೆಯ ಪ್ರಯತ್ನವನ್ನು ವಿಫಲಗೊಳಿಸಿವೆ. ಈ ವೇಳೆ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಸದ್ಯ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಸೇನೆ ತಿಳಿಸಿದೆ.
ಕಳೆದ ವಾರವೂ ಕುಪ್ವಾರಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಗೆ (ಎಲ್ಒಸಿ) ಸಮೀಪವಿರುವ ಜಮ್ಗುಂಡ್ ಕೆರಾನ್ನಲ್ಲಿ ಇಂತದ್ದೇ ಪ್ರಯತ್ನವನ್ನು ಭದ್ರತಾ ಪಡೆಗಳು ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ತಡೆದಿವೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…