BREAKING NEWS

ಗಾಂಧೀಜಿಯಿಂದಾಗಿ ಜಮ್ಮು-ಕಾಶ್ಮೀರ ಭಾರತದಲ್ಲಿ ಉಳಿಯಿತು: ಫಾರೂಕ್‌ ಅಬ್ದುಲ್ಲಾ

ಶ್ರೀನಗರ : ” ಸದ್ಯ ಆಡಳಿತಾರೂಢ ಸರಕಾರವು ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗ ಎಂದು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಧ್ವನಿಯೆತ್ತುತ್ತಿದೆ. ಆದರೆ ಆ ರೀತಿಯಾಗಿ ಕಣಿವೆ ಪ್ರದೇಶ ಭಾರತದಲ್ಲಿ ಉಳಿಯಲು ಮಹಾತ್ಮ ಗಾಂಧೀಜಿ ಕಾರಣ,” ಎಂದು ನ್ಯಾಷನಲ್‌ ಕಾನ್ಫರೆನ್ಸ್‌ ಮುಖ್ಯಸ್ಥ ಫಾರೂಕ್‌ ಅಬ್ದುಲ್ಲಾ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ” ಹಿಂದೂಗಳು ಬಹುಸಂಖ್ಯಾತರಾಗಿರುವ ರಾಷ್ಟ್ರದಲ್ಲಿ ಮುಸ್ಲಿಮರು ಬಹುಸಂಖ್ಯಾತರಾಗಿರುವ ರಾಜ್ಯವೆಂದರೆ , ಅದು ಜಮ್ಮು ಮತ್ತು ಕಾಶ್ಮೀರ. ಸ್ವಾತಂತ್ರ್ಯ ಸಿಕ್ಕ ನಂತರ ಮಹಾತ್ಮ ಗಾಂಧೀಜಿ ಅವರು ಈ ದೇಶದಲ್ಲಿ ವ್ಯಕ್ತಿಯು ಯಾವುದೇ ಧರ್ಮ, ಭಾಷೆ, ಸಂಸ್ಕೃತಿ ಪಾಲಿಸಿದರೂ ಅವರೆಲ್ಲರೂ ಭಾರತೀಯರು. ಆ ಬಗ್ಗೆ ಸಂಶಯವೇ ಇಲ್ಲ ಎಂದು ಘೋಷಿಸಿದರು. ಈ ವಾಗ್ದಾನವು ಕಣಿವೆಯಲ್ಲಿನ ಮುಸ್ಲಿಮರು ಭಾರತದಲ್ಲಿ ಉಳಿಯುವಂತೆ ಮಾಡಿತು,” ಎಂದು ವಿವರಿಸಿದರು.

” ಎಲ್ಲ ರಾಜ್ಯಗಳಿಂದ ಈ ದೇಶ ರಚಿತವಾಗಿದೆ ಎಂಬ ಮಹಾತ್ಮ ಗಾಂಧಿ ಅವರ ಉದಾತ್ತ ಚಿಂತನೆಗೆ ಗೌರವವಾಗಿ ಜಮ್ಮು ಮತ್ತು ಕಾಶ್ಮೀರದ ಜನರು ಪ್ರತ್ಯೇಕ ರಾಜ್ಯ ಅಥವಾ ಅನ್ಯ ರಾಷ್ಟ್ರದೊಂದಿಗೆ ಗುರುತಿಸಿಕೊಳ್ಳುವ ಯತ್ನ ನಡೆಸಿಲ್ಲ,” ಎಂದು ಫಾರೂಕ್‌ ಅಭಿಪ್ರಾಯಪಟ್ಟರು.

“ಕಾಶ್ಮೀರ ಎಂದಿಗೂ ಸ್ವಾತಂತ್ರ್ಯ ಕೇಳಿಲ್ಲ. ನಾವು ದೇಶದ ಭಾಗವಾಗಿದ್ದೇವೆ. ಸ್ವಾತಂತ್ರ್ಯ ಬಂದ ಸಂದರ್ಭದಿಂದಲೂ ಕ್ಷೋಭೆ ಇದೆ. ದಿಲ್ಲಿ ತನ್ನ ಆಟ ಆಡಿದೆ ಮತ್ತು ತನ್ನ ಆಟವನ್ನು ಮುಂದುವರಿದಿದೆ. ನೆಹರು ಕಾಲದಲ್ಲಿಯೂ ಹಾಗೆ ಇತ್ತು, ಈಗ ಕೂಡ ಅದು ಹಾಗೆಯೇ ಇದೆ” ಎಂದು ಹೇಳಿದರು.

andolanait

Recent Posts

ವಿದ್ಯಾರ್ಥಿಗಳ ಶಾಲಾ ಪ್ರವಾಸದಲ್ಲಿ ಸುರಕ್ಷತೆಗೆ ಆದ್ಯತೆ : ಸಚಿವ ಮಧು ಬಂಗಾರಪ್ಪ ಭರವಸೆ

ಬೆಂಗಳೂರು : ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಮುನ್ನ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

25 mins ago

AUS vs ZIM : ಬಲಿಷ್ಠ ಆಸ್ಟ್ರೇಲಿಯಾಕ್ಕೆ ಸೋಲಿನ ರುಚಿ ತೋರಿಸಿದ ಜಿಂಬಾಬ್ವೆ:

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಗ್ರೂಪ್ ಬಿ ಪಂದ್ಯದಲ್ಲಿ ಜಿಂಬಾಬ್ವೆ ತಂಡವು ಆಸ್ಟ್ರೇಲಿಯಾದ ವಿರುದ್ಧ ಅದ್ಭುತ…

38 mins ago

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು !

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…

2 hours ago

ಆರೋಗ್ಯ ಇಲಾಖೆಯ ಅಧಿಕಾರಿ ಅಬಕಾರಿ ಡಿಸಿಯಾಗಿ ನಿಯೋಜನೆ : ನಿಯಮ ಉಲ್ಲಂಘನೆ ಆರೋಪ

ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…

2 hours ago

ಸಿದ್ದರಾಮಯ್ಯ ಅವರೇ ಐದು ವರ್ಷ ಮುಂದುವರಿಯುವ ಆಸೆ ಇದೆ : ಶಾಸಕ ಕೆ.ಹರೀಶ್‌ ಗೌಡ

ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…

3 hours ago

ಭೀಕರ ಸರಣಿ ಅಪಘಾತ : ಬೆಂಗಳೂರಿನ 6 ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…

3 hours ago