BREAKING NEWS

ಗಾಂಧೀಜಿಯಿಂದಾಗಿ ಜಮ್ಮು-ಕಾಶ್ಮೀರ ಭಾರತದಲ್ಲಿ ಉಳಿಯಿತು: ಫಾರೂಕ್‌ ಅಬ್ದುಲ್ಲಾ

ಶ್ರೀನಗರ : ” ಸದ್ಯ ಆಡಳಿತಾರೂಢ ಸರಕಾರವು ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗ ಎಂದು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಧ್ವನಿಯೆತ್ತುತ್ತಿದೆ. ಆದರೆ ಆ ರೀತಿಯಾಗಿ ಕಣಿವೆ ಪ್ರದೇಶ ಭಾರತದಲ್ಲಿ ಉಳಿಯಲು ಮಹಾತ್ಮ ಗಾಂಧೀಜಿ ಕಾರಣ,” ಎಂದು ನ್ಯಾಷನಲ್‌ ಕಾನ್ಫರೆನ್ಸ್‌ ಮುಖ್ಯಸ್ಥ ಫಾರೂಕ್‌ ಅಬ್ದುಲ್ಲಾ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ” ಹಿಂದೂಗಳು ಬಹುಸಂಖ್ಯಾತರಾಗಿರುವ ರಾಷ್ಟ್ರದಲ್ಲಿ ಮುಸ್ಲಿಮರು ಬಹುಸಂಖ್ಯಾತರಾಗಿರುವ ರಾಜ್ಯವೆಂದರೆ , ಅದು ಜಮ್ಮು ಮತ್ತು ಕಾಶ್ಮೀರ. ಸ್ವಾತಂತ್ರ್ಯ ಸಿಕ್ಕ ನಂತರ ಮಹಾತ್ಮ ಗಾಂಧೀಜಿ ಅವರು ಈ ದೇಶದಲ್ಲಿ ವ್ಯಕ್ತಿಯು ಯಾವುದೇ ಧರ್ಮ, ಭಾಷೆ, ಸಂಸ್ಕೃತಿ ಪಾಲಿಸಿದರೂ ಅವರೆಲ್ಲರೂ ಭಾರತೀಯರು. ಆ ಬಗ್ಗೆ ಸಂಶಯವೇ ಇಲ್ಲ ಎಂದು ಘೋಷಿಸಿದರು. ಈ ವಾಗ್ದಾನವು ಕಣಿವೆಯಲ್ಲಿನ ಮುಸ್ಲಿಮರು ಭಾರತದಲ್ಲಿ ಉಳಿಯುವಂತೆ ಮಾಡಿತು,” ಎಂದು ವಿವರಿಸಿದರು.

” ಎಲ್ಲ ರಾಜ್ಯಗಳಿಂದ ಈ ದೇಶ ರಚಿತವಾಗಿದೆ ಎಂಬ ಮಹಾತ್ಮ ಗಾಂಧಿ ಅವರ ಉದಾತ್ತ ಚಿಂತನೆಗೆ ಗೌರವವಾಗಿ ಜಮ್ಮು ಮತ್ತು ಕಾಶ್ಮೀರದ ಜನರು ಪ್ರತ್ಯೇಕ ರಾಜ್ಯ ಅಥವಾ ಅನ್ಯ ರಾಷ್ಟ್ರದೊಂದಿಗೆ ಗುರುತಿಸಿಕೊಳ್ಳುವ ಯತ್ನ ನಡೆಸಿಲ್ಲ,” ಎಂದು ಫಾರೂಕ್‌ ಅಭಿಪ್ರಾಯಪಟ್ಟರು.

“ಕಾಶ್ಮೀರ ಎಂದಿಗೂ ಸ್ವಾತಂತ್ರ್ಯ ಕೇಳಿಲ್ಲ. ನಾವು ದೇಶದ ಭಾಗವಾಗಿದ್ದೇವೆ. ಸ್ವಾತಂತ್ರ್ಯ ಬಂದ ಸಂದರ್ಭದಿಂದಲೂ ಕ್ಷೋಭೆ ಇದೆ. ದಿಲ್ಲಿ ತನ್ನ ಆಟ ಆಡಿದೆ ಮತ್ತು ತನ್ನ ಆಟವನ್ನು ಮುಂದುವರಿದಿದೆ. ನೆಹರು ಕಾಲದಲ್ಲಿಯೂ ಹಾಗೆ ಇತ್ತು, ಈಗ ಕೂಡ ಅದು ಹಾಗೆಯೇ ಇದೆ” ಎಂದು ಹೇಳಿದರು.

andolanait

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

11 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago