ಶ್ರೀನಗರ : ” ಸದ್ಯ ಆಡಳಿತಾರೂಢ ಸರಕಾರವು ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗ ಎಂದು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಧ್ವನಿಯೆತ್ತುತ್ತಿದೆ. ಆದರೆ ಆ ರೀತಿಯಾಗಿ ಕಣಿವೆ ಪ್ರದೇಶ ಭಾರತದಲ್ಲಿ ಉಳಿಯಲು ಮಹಾತ್ಮ ಗಾಂಧೀಜಿ ಕಾರಣ,” ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ” ಹಿಂದೂಗಳು ಬಹುಸಂಖ್ಯಾತರಾಗಿರುವ ರಾಷ್ಟ್ರದಲ್ಲಿ ಮುಸ್ಲಿಮರು ಬಹುಸಂಖ್ಯಾತರಾಗಿರುವ ರಾಜ್ಯವೆಂದರೆ , ಅದು ಜಮ್ಮು ಮತ್ತು ಕಾಶ್ಮೀರ. ಸ್ವಾತಂತ್ರ್ಯ ಸಿಕ್ಕ ನಂತರ ಮಹಾತ್ಮ ಗಾಂಧೀಜಿ ಅವರು ಈ ದೇಶದಲ್ಲಿ ವ್ಯಕ್ತಿಯು ಯಾವುದೇ ಧರ್ಮ, ಭಾಷೆ, ಸಂಸ್ಕೃತಿ ಪಾಲಿಸಿದರೂ ಅವರೆಲ್ಲರೂ ಭಾರತೀಯರು. ಆ ಬಗ್ಗೆ ಸಂಶಯವೇ ಇಲ್ಲ ಎಂದು ಘೋಷಿಸಿದರು. ಈ ವಾಗ್ದಾನವು ಕಣಿವೆಯಲ್ಲಿನ ಮುಸ್ಲಿಮರು ಭಾರತದಲ್ಲಿ ಉಳಿಯುವಂತೆ ಮಾಡಿತು,” ಎಂದು ವಿವರಿಸಿದರು.
” ಎಲ್ಲ ರಾಜ್ಯಗಳಿಂದ ಈ ದೇಶ ರಚಿತವಾಗಿದೆ ಎಂಬ ಮಹಾತ್ಮ ಗಾಂಧಿ ಅವರ ಉದಾತ್ತ ಚಿಂತನೆಗೆ ಗೌರವವಾಗಿ ಜಮ್ಮು ಮತ್ತು ಕಾಶ್ಮೀರದ ಜನರು ಪ್ರತ್ಯೇಕ ರಾಜ್ಯ ಅಥವಾ ಅನ್ಯ ರಾಷ್ಟ್ರದೊಂದಿಗೆ ಗುರುತಿಸಿಕೊಳ್ಳುವ ಯತ್ನ ನಡೆಸಿಲ್ಲ,” ಎಂದು ಫಾರೂಕ್ ಅಭಿಪ್ರಾಯಪಟ್ಟರು.
“ಕಾಶ್ಮೀರ ಎಂದಿಗೂ ಸ್ವಾತಂತ್ರ್ಯ ಕೇಳಿಲ್ಲ. ನಾವು ದೇಶದ ಭಾಗವಾಗಿದ್ದೇವೆ. ಸ್ವಾತಂತ್ರ್ಯ ಬಂದ ಸಂದರ್ಭದಿಂದಲೂ ಕ್ಷೋಭೆ ಇದೆ. ದಿಲ್ಲಿ ತನ್ನ ಆಟ ಆಡಿದೆ ಮತ್ತು ತನ್ನ ಆಟವನ್ನು ಮುಂದುವರಿದಿದೆ. ನೆಹರು ಕಾಲದಲ್ಲಿಯೂ ಹಾಗೆ ಇತ್ತು, ಈಗ ಕೂಡ ಅದು ಹಾಗೆಯೇ ಇದೆ” ಎಂದು ಹೇಳಿದರು.
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…
ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್ಎಸ್ಆರ್ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…
ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…