BREAKING NEWS

ಗಾಂಧೀಜಿಯಿಂದಾಗಿ ಜಮ್ಮು-ಕಾಶ್ಮೀರ ಭಾರತದಲ್ಲಿ ಉಳಿಯಿತು: ಫಾರೂಕ್‌ ಅಬ್ದುಲ್ಲಾ

ಶ್ರೀನಗರ : ” ಸದ್ಯ ಆಡಳಿತಾರೂಢ ಸರಕಾರವು ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗ ಎಂದು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಧ್ವನಿಯೆತ್ತುತ್ತಿದೆ. ಆದರೆ ಆ ರೀತಿಯಾಗಿ ಕಣಿವೆ ಪ್ರದೇಶ ಭಾರತದಲ್ಲಿ ಉಳಿಯಲು ಮಹಾತ್ಮ ಗಾಂಧೀಜಿ ಕಾರಣ,” ಎಂದು ನ್ಯಾಷನಲ್‌ ಕಾನ್ಫರೆನ್ಸ್‌ ಮುಖ್ಯಸ್ಥ ಫಾರೂಕ್‌ ಅಬ್ದುಲ್ಲಾ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ” ಹಿಂದೂಗಳು ಬಹುಸಂಖ್ಯಾತರಾಗಿರುವ ರಾಷ್ಟ್ರದಲ್ಲಿ ಮುಸ್ಲಿಮರು ಬಹುಸಂಖ್ಯಾತರಾಗಿರುವ ರಾಜ್ಯವೆಂದರೆ , ಅದು ಜಮ್ಮು ಮತ್ತು ಕಾಶ್ಮೀರ. ಸ್ವಾತಂತ್ರ್ಯ ಸಿಕ್ಕ ನಂತರ ಮಹಾತ್ಮ ಗಾಂಧೀಜಿ ಅವರು ಈ ದೇಶದಲ್ಲಿ ವ್ಯಕ್ತಿಯು ಯಾವುದೇ ಧರ್ಮ, ಭಾಷೆ, ಸಂಸ್ಕೃತಿ ಪಾಲಿಸಿದರೂ ಅವರೆಲ್ಲರೂ ಭಾರತೀಯರು. ಆ ಬಗ್ಗೆ ಸಂಶಯವೇ ಇಲ್ಲ ಎಂದು ಘೋಷಿಸಿದರು. ಈ ವಾಗ್ದಾನವು ಕಣಿವೆಯಲ್ಲಿನ ಮುಸ್ಲಿಮರು ಭಾರತದಲ್ಲಿ ಉಳಿಯುವಂತೆ ಮಾಡಿತು,” ಎಂದು ವಿವರಿಸಿದರು.

” ಎಲ್ಲ ರಾಜ್ಯಗಳಿಂದ ಈ ದೇಶ ರಚಿತವಾಗಿದೆ ಎಂಬ ಮಹಾತ್ಮ ಗಾಂಧಿ ಅವರ ಉದಾತ್ತ ಚಿಂತನೆಗೆ ಗೌರವವಾಗಿ ಜಮ್ಮು ಮತ್ತು ಕಾಶ್ಮೀರದ ಜನರು ಪ್ರತ್ಯೇಕ ರಾಜ್ಯ ಅಥವಾ ಅನ್ಯ ರಾಷ್ಟ್ರದೊಂದಿಗೆ ಗುರುತಿಸಿಕೊಳ್ಳುವ ಯತ್ನ ನಡೆಸಿಲ್ಲ,” ಎಂದು ಫಾರೂಕ್‌ ಅಭಿಪ್ರಾಯಪಟ್ಟರು.

“ಕಾಶ್ಮೀರ ಎಂದಿಗೂ ಸ್ವಾತಂತ್ರ್ಯ ಕೇಳಿಲ್ಲ. ನಾವು ದೇಶದ ಭಾಗವಾಗಿದ್ದೇವೆ. ಸ್ವಾತಂತ್ರ್ಯ ಬಂದ ಸಂದರ್ಭದಿಂದಲೂ ಕ್ಷೋಭೆ ಇದೆ. ದಿಲ್ಲಿ ತನ್ನ ಆಟ ಆಡಿದೆ ಮತ್ತು ತನ್ನ ಆಟವನ್ನು ಮುಂದುವರಿದಿದೆ. ನೆಹರು ಕಾಲದಲ್ಲಿಯೂ ಹಾಗೆ ಇತ್ತು, ಈಗ ಕೂಡ ಅದು ಹಾಗೆಯೇ ಇದೆ” ಎಂದು ಹೇಳಿದರು.

andolanait

Recent Posts

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

10 hours ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

11 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

11 hours ago

ಎಂ.ಬಿ.ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು

ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…

11 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

12 hours ago

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

12 hours ago