ಶ್ರೀನಗರ : ” ಸದ್ಯ ಆಡಳಿತಾರೂಢ ಸರಕಾರವು ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗ ಎಂದು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಧ್ವನಿಯೆತ್ತುತ್ತಿದೆ. ಆದರೆ ಆ ರೀತಿಯಾಗಿ ಕಣಿವೆ ಪ್ರದೇಶ ಭಾರತದಲ್ಲಿ ಉಳಿಯಲು ಮಹಾತ್ಮ ಗಾಂಧೀಜಿ ಕಾರಣ,” ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ” ಹಿಂದೂಗಳು ಬಹುಸಂಖ್ಯಾತರಾಗಿರುವ ರಾಷ್ಟ್ರದಲ್ಲಿ ಮುಸ್ಲಿಮರು ಬಹುಸಂಖ್ಯಾತರಾಗಿರುವ ರಾಜ್ಯವೆಂದರೆ , ಅದು ಜಮ್ಮು ಮತ್ತು ಕಾಶ್ಮೀರ. ಸ್ವಾತಂತ್ರ್ಯ ಸಿಕ್ಕ ನಂತರ ಮಹಾತ್ಮ ಗಾಂಧೀಜಿ ಅವರು ಈ ದೇಶದಲ್ಲಿ ವ್ಯಕ್ತಿಯು ಯಾವುದೇ ಧರ್ಮ, ಭಾಷೆ, ಸಂಸ್ಕೃತಿ ಪಾಲಿಸಿದರೂ ಅವರೆಲ್ಲರೂ ಭಾರತೀಯರು. ಆ ಬಗ್ಗೆ ಸಂಶಯವೇ ಇಲ್ಲ ಎಂದು ಘೋಷಿಸಿದರು. ಈ ವಾಗ್ದಾನವು ಕಣಿವೆಯಲ್ಲಿನ ಮುಸ್ಲಿಮರು ಭಾರತದಲ್ಲಿ ಉಳಿಯುವಂತೆ ಮಾಡಿತು,” ಎಂದು ವಿವರಿಸಿದರು.
” ಎಲ್ಲ ರಾಜ್ಯಗಳಿಂದ ಈ ದೇಶ ರಚಿತವಾಗಿದೆ ಎಂಬ ಮಹಾತ್ಮ ಗಾಂಧಿ ಅವರ ಉದಾತ್ತ ಚಿಂತನೆಗೆ ಗೌರವವಾಗಿ ಜಮ್ಮು ಮತ್ತು ಕಾಶ್ಮೀರದ ಜನರು ಪ್ರತ್ಯೇಕ ರಾಜ್ಯ ಅಥವಾ ಅನ್ಯ ರಾಷ್ಟ್ರದೊಂದಿಗೆ ಗುರುತಿಸಿಕೊಳ್ಳುವ ಯತ್ನ ನಡೆಸಿಲ್ಲ,” ಎಂದು ಫಾರೂಕ್ ಅಭಿಪ್ರಾಯಪಟ್ಟರು.
“ಕಾಶ್ಮೀರ ಎಂದಿಗೂ ಸ್ವಾತಂತ್ರ್ಯ ಕೇಳಿಲ್ಲ. ನಾವು ದೇಶದ ಭಾಗವಾಗಿದ್ದೇವೆ. ಸ್ವಾತಂತ್ರ್ಯ ಬಂದ ಸಂದರ್ಭದಿಂದಲೂ ಕ್ಷೋಭೆ ಇದೆ. ದಿಲ್ಲಿ ತನ್ನ ಆಟ ಆಡಿದೆ ಮತ್ತು ತನ್ನ ಆಟವನ್ನು ಮುಂದುವರಿದಿದೆ. ನೆಹರು ಕಾಲದಲ್ಲಿಯೂ ಹಾಗೆ ಇತ್ತು, ಈಗ ಕೂಡ ಅದು ಹಾಗೆಯೇ ಇದೆ” ಎಂದು ಹೇಳಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…