BREAKING NEWS

ಜೆಡಿಎಸ್ ಅನ್ನೋ ಅನಿಷ್ಟ ನನ್ನಿಂದ ದೂರವಾಗಿದೆ : ವೀರಪ್ಪ ಮೊಯ್ಲಿ

ಮಂಗಳೂರು : ಜೆಡಿಎಸ್ ಹೊಕ್ಕಿದ ಕಡೆಯಲ್ಲಿ ಸಂಪೂರ್ಣ ಹೋಯ್ತು ಅಂತ ಅರ್ಥ. ಅವರ ಜೊತೆ ಸೇರಿ ಆವತ್ತು ನಾನು ಕೂಡ ಸೋತಿದ್ದೇನೆ. ಈಗ ಆ ಅನಿಷ್ಟ ದೂರವಾಗಿದೆ, ಈಗ ಅದು ಬಿಜೆಪಿಗೆ ಹೋಗಿದೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈ ಬಾರಿಯೂ ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧೆ ಮಾಡುತ್ತೇನೆ. ಬಿ.ಕೆ.ಹರಿಪ್ರಸಾದ್ ವಿಚಾರ ಶಿಸ್ತು ಕಮಿಟಿ ಮುಂದೆ ಇದೆ. ಅವರಿಗೆ ನೊಟೀಸ್ ಕೊಟ್ಟು ಇದರ ಬಗ್ಗೆ ಸಮಿತಿ ನೋಡಿಕೊಳ್ಳುತ್ತದೆ ಎಂದರು.

ಮೂರು ಡಿಸಿಎಂ ಪಕ್ಷದ ಅಭಿಪ್ರಾಯ ಅಲ್ಲ, ಕೆಲವರ ವೈಯಕ್ತಿಕ ಅಭಿಪ್ರಾಯ. ನಮ್ಮ ಪಕ್ಷ ಬಲಿಷ್ಠವಾಗಿದೆ, ಅದರೆ ಕೆಲವರು ಪಕ್ಷ ಗಟ್ಟಿ ಮಾಡಲು ಹೇಳುತ್ತಾರೆ. ಅವರ ಸಲಹೆ ಸೂಚನೆಗಳನ್ನೂ ನಾವು ಕೇಳುತ್ತೇವೆ. ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಈ ಬಗ್ಗೆ ಚರ್ಚೆಯಾಗಿದೆ. ಆದರೆ ಸದ್ಯಕ್ಕೆ ಮೂರು ಡಿಸಿಎಂ ಚರ್ಚೆ ಇಲ್ಲ ಎಂದು ತಿಳಿಸಿದರು.

ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಹೋರಾಟ ವಿಚಾರದ ಕುರಿತು ಮಾತನಾಡಿ, ಒಂದು ಮಳೆ ಬಂದರೆ ಕಾವೇರಿ ವಿಚಾರ ತಣ್ಣಗಾಗುತ್ತೆ. ಈಗ ನಮ್ಮ ಸರ್ಕಾರ ಇರುವಾಗ ವಿರೋಧ ಮಾಡಲು ಆಗಲ್ಲ. ನಮ್ಮ ಸರ್ಕಾರ ಕೋರ್ಟ್ ಮೂಲಕ ಸಮಸ್ಯೆ ಸರಿ ಮಾಡಲು ಯತ್ನಿಸ್ತಿದೆ. ಬಿಜೆಪಿಯವರು ಈಗ ವಿರೋಧ ಪಕ್ಷದಲ್ಲಿ ಇದ್ದು ವಿರೋಧಿಸ್ತಾ ಇದ್ದಾರೆ. ನಮ್ಮ ಸರ್ಕಾರ ಈ ರಾಜ್ಯದ ಜನರ ಪರವಾಗಿಯೇ ಕೆಲಸ ಮಾಡಲಿದೆ. ಕರ್ನಾಟಕ ಕಾವೇರಿ ವಿಚಾರದಲ್ಲಿ ಸೋಲಲು ಅನೇಕ ಕಾರಣಗಳಿವೆ ಎಂದರು.

ನಾವು ಕಾವೇರಿ ನೀರನ್ನು ಗರಿಷ್ಠವಾಗಿ ಉಪಯೋಗ ಮಾಡಿಲ್ಲ. ಆ ಕಾಲದ ಆಡಳಿತಗಾರರು ಮಾಡಿದ ತಪ್ಪಿನಿಂದ ಹೀಗಾಗುತ್ತಿದೆ. ಯಗಚಿ ಅಣೆಕಟ್ಟು ಮಾಡೋದನ್ನೂ ಅನೇಕರು ತಡೆದಿದ್ದರು. ಇದರಿಂದ ನಮಗೆ ಸಿಗಬೇಕಾದ ನೀರಿನ ಪಾಲು ಸಿಗಲಿಲ್ಲ ಎಂದು ಹೇಳಿದರು.

lokesh

Recent Posts

ಕಬಿನಿ ಹಿನ್ನೀರಿನಲ್ಲಿ ಹೆಚ್ಚಿದ ಬೋಟ್ ಸಫಾರಿ

ಮಂಜು ಕೋಟೆ ಅರಣ್ಯದೊಳಗಿನ ಸಫಾರಿಗೆ ನಿರ್ಬಂಧ ಹೇರಿದ ಬಳಿಕ ಪ್ರವಾಸಿಗರನ್ನು ಸೆಳೆಯಲು ರೆಸಾರ್ಟ್‌ನವರ ಕಸರತ್ತು  ಎಚ್.ಡಿ.ಕೋಟೆ: ಅರಣ್ಯದಲ್ಲಿ ಈಗ ಸಫಾರಿ…

5 mins ago

ಸಹಕಾರಿಗಳ ಪಾಲಿನ ಸಂಜೀವಿನಿ ‘ಯಶಸ್ವಿನಿ’ ಯೋಜನೆ ಮರು ಜಾರಿ

ಗಿರೀಶ್ ಹುಣಸೂರು ೨೦೨೬ರ ಜ.೩ರಿಂದ ಮಾ.೩೧ರವರೆಗೆ ನೋಂದಣಿ ಪ್ರಕ್ರಿಯೆ ಮೈಸೂರು: ಸಹಕಾರ ಸಂಘಗಳ ಸದಸ್ಯರ ಪಾಲಿನ ಸಂಜೀವಿನಿಯಂತಿರುವ ‘ಯಶಸ್ವಿನಿ’ ಆರೋಗ್ಯ…

10 mins ago

‘ನೈಸರ್ಗಿಕ ಬೇಸಾಯ ನಂಬಿ ಕೆಟ್ಟವರಿಲ್ಲʼ

ನೈಸರ್ಗಿಕ ಕೃಷಿ ರೂವಾರಿ ಸುಭಾಷ್ ಪಾಳೇಕರ್ ಸ್ಪಷ್ಟನುಡಿ ಸಂದರ್ಶನ: ರಶ್ಮಿ ಕೋಟಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು…

16 mins ago

ಹಲವು ತಿಂಗಳುಗಳ ಬಳಿಕ ಕನ್ನಡ ಚಿತ್ರಕ್ಕೆ ಚಿಂದಿ ರೇಟಿಂಗ್ಸ್‌

ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ. ಈ ಹಿಂದೆ…

13 hours ago

ಮಂಡ್ಯ: ಸಣ್ಣ, ಅತಿಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ: ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು…

14 hours ago