BREAKING NEWS

ಜೆಡಿಎಸ್ ಅನ್ನೋ ಅನಿಷ್ಟ ನನ್ನಿಂದ ದೂರವಾಗಿದೆ : ವೀರಪ್ಪ ಮೊಯ್ಲಿ

ಮಂಗಳೂರು : ಜೆಡಿಎಸ್ ಹೊಕ್ಕಿದ ಕಡೆಯಲ್ಲಿ ಸಂಪೂರ್ಣ ಹೋಯ್ತು ಅಂತ ಅರ್ಥ. ಅವರ ಜೊತೆ ಸೇರಿ ಆವತ್ತು ನಾನು ಕೂಡ ಸೋತಿದ್ದೇನೆ. ಈಗ ಆ ಅನಿಷ್ಟ ದೂರವಾಗಿದೆ, ಈಗ ಅದು ಬಿಜೆಪಿಗೆ ಹೋಗಿದೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈ ಬಾರಿಯೂ ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧೆ ಮಾಡುತ್ತೇನೆ. ಬಿ.ಕೆ.ಹರಿಪ್ರಸಾದ್ ವಿಚಾರ ಶಿಸ್ತು ಕಮಿಟಿ ಮುಂದೆ ಇದೆ. ಅವರಿಗೆ ನೊಟೀಸ್ ಕೊಟ್ಟು ಇದರ ಬಗ್ಗೆ ಸಮಿತಿ ನೋಡಿಕೊಳ್ಳುತ್ತದೆ ಎಂದರು.

ಮೂರು ಡಿಸಿಎಂ ಪಕ್ಷದ ಅಭಿಪ್ರಾಯ ಅಲ್ಲ, ಕೆಲವರ ವೈಯಕ್ತಿಕ ಅಭಿಪ್ರಾಯ. ನಮ್ಮ ಪಕ್ಷ ಬಲಿಷ್ಠವಾಗಿದೆ, ಅದರೆ ಕೆಲವರು ಪಕ್ಷ ಗಟ್ಟಿ ಮಾಡಲು ಹೇಳುತ್ತಾರೆ. ಅವರ ಸಲಹೆ ಸೂಚನೆಗಳನ್ನೂ ನಾವು ಕೇಳುತ್ತೇವೆ. ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಈ ಬಗ್ಗೆ ಚರ್ಚೆಯಾಗಿದೆ. ಆದರೆ ಸದ್ಯಕ್ಕೆ ಮೂರು ಡಿಸಿಎಂ ಚರ್ಚೆ ಇಲ್ಲ ಎಂದು ತಿಳಿಸಿದರು.

ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಹೋರಾಟ ವಿಚಾರದ ಕುರಿತು ಮಾತನಾಡಿ, ಒಂದು ಮಳೆ ಬಂದರೆ ಕಾವೇರಿ ವಿಚಾರ ತಣ್ಣಗಾಗುತ್ತೆ. ಈಗ ನಮ್ಮ ಸರ್ಕಾರ ಇರುವಾಗ ವಿರೋಧ ಮಾಡಲು ಆಗಲ್ಲ. ನಮ್ಮ ಸರ್ಕಾರ ಕೋರ್ಟ್ ಮೂಲಕ ಸಮಸ್ಯೆ ಸರಿ ಮಾಡಲು ಯತ್ನಿಸ್ತಿದೆ. ಬಿಜೆಪಿಯವರು ಈಗ ವಿರೋಧ ಪಕ್ಷದಲ್ಲಿ ಇದ್ದು ವಿರೋಧಿಸ್ತಾ ಇದ್ದಾರೆ. ನಮ್ಮ ಸರ್ಕಾರ ಈ ರಾಜ್ಯದ ಜನರ ಪರವಾಗಿಯೇ ಕೆಲಸ ಮಾಡಲಿದೆ. ಕರ್ನಾಟಕ ಕಾವೇರಿ ವಿಚಾರದಲ್ಲಿ ಸೋಲಲು ಅನೇಕ ಕಾರಣಗಳಿವೆ ಎಂದರು.

ನಾವು ಕಾವೇರಿ ನೀರನ್ನು ಗರಿಷ್ಠವಾಗಿ ಉಪಯೋಗ ಮಾಡಿಲ್ಲ. ಆ ಕಾಲದ ಆಡಳಿತಗಾರರು ಮಾಡಿದ ತಪ್ಪಿನಿಂದ ಹೀಗಾಗುತ್ತಿದೆ. ಯಗಚಿ ಅಣೆಕಟ್ಟು ಮಾಡೋದನ್ನೂ ಅನೇಕರು ತಡೆದಿದ್ದರು. ಇದರಿಂದ ನಮಗೆ ಸಿಗಬೇಕಾದ ನೀರಿನ ಪಾಲು ಸಿಗಲಿಲ್ಲ ಎಂದು ಹೇಳಿದರು.

lokesh

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

10 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

10 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

11 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

12 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

12 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

20 hours ago