ಮಂಗಳೂರು : ಜೆಡಿಎಸ್ ಹೊಕ್ಕಿದ ಕಡೆಯಲ್ಲಿ ಸಂಪೂರ್ಣ ಹೋಯ್ತು ಅಂತ ಅರ್ಥ. ಅವರ ಜೊತೆ ಸೇರಿ ಆವತ್ತು ನಾನು ಕೂಡ ಸೋತಿದ್ದೇನೆ. ಈಗ ಆ ಅನಿಷ್ಟ ದೂರವಾಗಿದೆ, ಈಗ ಅದು ಬಿಜೆಪಿಗೆ ಹೋಗಿದೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈ ಬಾರಿಯೂ ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧೆ ಮಾಡುತ್ತೇನೆ. ಬಿ.ಕೆ.ಹರಿಪ್ರಸಾದ್ ವಿಚಾರ ಶಿಸ್ತು ಕಮಿಟಿ ಮುಂದೆ ಇದೆ. ಅವರಿಗೆ ನೊಟೀಸ್ ಕೊಟ್ಟು ಇದರ ಬಗ್ಗೆ ಸಮಿತಿ ನೋಡಿಕೊಳ್ಳುತ್ತದೆ ಎಂದರು.
ಮೂರು ಡಿಸಿಎಂ ಪಕ್ಷದ ಅಭಿಪ್ರಾಯ ಅಲ್ಲ, ಕೆಲವರ ವೈಯಕ್ತಿಕ ಅಭಿಪ್ರಾಯ. ನಮ್ಮ ಪಕ್ಷ ಬಲಿಷ್ಠವಾಗಿದೆ, ಅದರೆ ಕೆಲವರು ಪಕ್ಷ ಗಟ್ಟಿ ಮಾಡಲು ಹೇಳುತ್ತಾರೆ. ಅವರ ಸಲಹೆ ಸೂಚನೆಗಳನ್ನೂ ನಾವು ಕೇಳುತ್ತೇವೆ. ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಈ ಬಗ್ಗೆ ಚರ್ಚೆಯಾಗಿದೆ. ಆದರೆ ಸದ್ಯಕ್ಕೆ ಮೂರು ಡಿಸಿಎಂ ಚರ್ಚೆ ಇಲ್ಲ ಎಂದು ತಿಳಿಸಿದರು.
ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಹೋರಾಟ ವಿಚಾರದ ಕುರಿತು ಮಾತನಾಡಿ, ಒಂದು ಮಳೆ ಬಂದರೆ ಕಾವೇರಿ ವಿಚಾರ ತಣ್ಣಗಾಗುತ್ತೆ. ಈಗ ನಮ್ಮ ಸರ್ಕಾರ ಇರುವಾಗ ವಿರೋಧ ಮಾಡಲು ಆಗಲ್ಲ. ನಮ್ಮ ಸರ್ಕಾರ ಕೋರ್ಟ್ ಮೂಲಕ ಸಮಸ್ಯೆ ಸರಿ ಮಾಡಲು ಯತ್ನಿಸ್ತಿದೆ. ಬಿಜೆಪಿಯವರು ಈಗ ವಿರೋಧ ಪಕ್ಷದಲ್ಲಿ ಇದ್ದು ವಿರೋಧಿಸ್ತಾ ಇದ್ದಾರೆ. ನಮ್ಮ ಸರ್ಕಾರ ಈ ರಾಜ್ಯದ ಜನರ ಪರವಾಗಿಯೇ ಕೆಲಸ ಮಾಡಲಿದೆ. ಕರ್ನಾಟಕ ಕಾವೇರಿ ವಿಚಾರದಲ್ಲಿ ಸೋಲಲು ಅನೇಕ ಕಾರಣಗಳಿವೆ ಎಂದರು.
ನಾವು ಕಾವೇರಿ ನೀರನ್ನು ಗರಿಷ್ಠವಾಗಿ ಉಪಯೋಗ ಮಾಡಿಲ್ಲ. ಆ ಕಾಲದ ಆಡಳಿತಗಾರರು ಮಾಡಿದ ತಪ್ಪಿನಿಂದ ಹೀಗಾಗುತ್ತಿದೆ. ಯಗಚಿ ಅಣೆಕಟ್ಟು ಮಾಡೋದನ್ನೂ ಅನೇಕರು ತಡೆದಿದ್ದರು. ಇದರಿಂದ ನಮಗೆ ಸಿಗಬೇಕಾದ ನೀರಿನ ಪಾಲು ಸಿಗಲಿಲ್ಲ ಎಂದು ಹೇಳಿದರು.
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…