BREAKING NEWS

ಸುದೀಪ್ ಸಿನಿಮಾ, ಜಾಹೀರಾತುಗಳಿಗೆ ತಡೆ ನೀಡಲು ಚುನಾವಣಾ ಆಯೋಗಕ್ಕೆ ಜೆಡಿಎಸ್ ಮನವಿ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿಯುವವರೆಗೂ ಚಿತ್ರನಟ ಕಿಚ್ಚ ಸುದೀಪ್ ಅವರು ಕಾಣಿಸಿಕೊಂಡಿರುವ ಕಾರ್ಯಕ್ರಮಗಳು ಮತ್ತು ಜಾಹೀರಾತುಗಳ ಪ್ರಸಾರಕ್ಕೆ ತಡೆ ವಿಧಿಸುವಂತೆ ಜಾತ್ಯತೀತ ಜನತಾದಳವು(ಜೆಡಿಎಸ್) ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

ಅವರ ಸಿನಿಮಾಗಳು, ಪೋಸ್ಟರ್‌ಗಳು, ಕಾರ್ಯಕ್ರಮಗಳು ಮತ್ತು ಜಾಹೀರಾತು. ಮುಂತಾದವುಗಳಿಗೆ ತಡೆ ಹಾಕುವಂತೆ ಮನವಿ ಮಾಡಲಾಗಿದೆ.

ಸುದೀಪ್ ಅವರು ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಗುರುತಿಸಿಕೊಂಡಿದ್ದು, ಅವರು ಕಾಣಿಸಿಕೊಂಡಿರುವ ಕಾರ್ಯಕ್ರಮಗಳು ಮತ್ತು ಜಾಹೀರಾತುಗಳು ಮತದಾರರ ಮೇಲೆ ಪರಿಣಾಮ ಬೀರಬಹುದು ಎಂದು ಜೆಡಿಎಸ್ ಮನವಿ ಪತ್ರದಲ್ಲಿ ತಿಳಿಸಿದೆ.

‘ಸುದೀಪ್ ಅವರು ಕರ್ನಾಟಕ ಸಿಎಂ ಜೊತೆಗೆ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಬಿಜೆಪಿಯ ಲೆಟರ್ ಹೆಡ್‌ನಲ್ಲಿ ಎಲ್ಲಾ ಮಾಧ್ಯಮಗಳಿಗೆ ಆಹ್ವಾನ ಕಳುಹಿಸಿದ್ದಾರೆ. ಸಿಎಂ ಏನು ಹೇಳುತ್ತಾರೋ ಅದನ್ನು ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ. ಈ ಮೂಲಕ ರಾಜಕೀಯ ಪಕ್ಷಕ್ಕೆ ಬದ್ಧರಾಗಿದ್ದಾರೆ, ಆದ್ದರಿಂದ ಅವರು ರಾಜಕಾರಣಿ. ಅದಕ್ಕಾಗಿಯೇ ನಾವು ಸುದೀಪ್ ಅವರ ಚಲನಚಿತ್ರಗಳು, ಒಟಿಟಿ ವೇದಿಕೆಗಳು, ಜಾಹೀರಾತುಗಳ ವಿಷಯವನ್ನು ಪರಿಶೀಲಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ’ಎಂದು ಜೆಡಿಎಸ್ ಮುಖಂಡ ತನ್ವೀರ್ ಅಹಮದ್ ಹೇಳಿದ್ದಾರೆ.

ಇತ್ತೀಚೆಗೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ಸುದೀಪ್, ಯಾವುದೇ ಪಕ್ಷದ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೇಳಿಲ್ಲ. ಆದರೆ, ಬೊಮ್ಮಾಯಿ ಅವರ ಪರವಾಗಿ ಚುನಾವಣಾ ಪ್ರಚಾರ ನಡೆಸುವುದಾಗಿ ಹೇಳಿದ್ದರು.

‘ಬಸವರಾಜ ಬೊಮ್ಮಾಯಿ ಅವರು ನನಗೆ ಚಿಕ್ಕಂದಿನಿಂದಲೂ ಪರಿಚಿತರು. ನಾನು ಚಿಕ್ಕವನಿದ್ದಾಗಿಂದಲೂ ಅವರನ್ನು ಮಾಮ ಎಂದೇ ಕರೆಯುತ್ತಿದ್ದೆ. ಚಿತ್ರರಂಗದಲ್ಲಿ ನಾನು ಕಡು ಕಷ್ಟದಲ್ಲಿ ಇದ್ದ ಸಂದರ್ಭದಲ್ಲಿ ನನ್ನ ಕೈ ಹಿಡಿದ ಬೆರಳೆಣಿಕೆಯ ಜನರಲ್ಲಿ ಬೊಮ್ಮಾಯಿ ಒಬ್ಬರು. ಈಗ ಅವರು ನನ್ನ ಬೆಂಬಲ ಕೇಳಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ನೆರವಾಗುವ ಮೂಲಕ ಕೃತಜ್ಞತೆ ಸಲ್ಲಿಸುವುದು ನನ್ನ ಕರ್ತವ್ಯ. ಆದ್ದರಿಂದ ಅವರು ಎಲ್ಲಿ ಹೇಳುತ್ತಾರೆಯೋ ಅಲ್ಲಿ ಪ್ರಚಾರ ನಡೆಸುತ್ತೇನೆ. ಹಾಗೆಂದು ಎಲ್ಲ ಕ್ಷೇತ್ರಗಳಲ್ಲಿ ಪ್ರಚಾರ ಮಾಡುವಷ್ಟು ಸಮಯವೂ ಇಲ್ಲ, ಮಾಡುವುದೂ ಇಲ್ಲ. ಕೆಲವು ಕಡೆಗಳಲ್ಲಿ ಮಾತ್ರ ಪ್ರಚಾರ ಮಾಡುತ್ತೇನೆ’ಎಂದಿದ್ದರು.

‘ಪಕ್ಷ ಎನ್ನುವುದಕ್ಕಿಂತ ವೈಯಕ್ತಿಕ ನೆಲೆಯಲ್ಲಿ ಮುಖ್ಯಮಂತ್ರಿಯವರು ಕರೆದಿದ್ದಾರೆ. ಅವರ ಬೆಂಬಲಕ್ಕೆ ನಿಂತಿದ್ದೇನೆ. ಬೊಮ್ಮಾಯಿ ಅವರು ರಾಜಕೀಯ ಪ್ರವೇಶ ಮಾಡುವುದಕ್ಕೂ ಮೊದಲಿಂದಲೂ ಪರಿಚಿತರು. ಹೀಗಾಗಿ ಇಲ್ಲಿ ಪಕ್ಷಗಳ ವಿಚಾರ ಬರುವುದಿಲ್ಲ. ವ್ಯಕ್ತಿಗಾಗಿ ನಾನು ಬಂದಿದ್ದೇನೆ. ಕಳೆದ 27 ವರ್ಷಗಳಿಂದ ಚಿತ್ರರಂಗದಲ್ಲಿ ಕಠಿಣವಾಗಿ ಪರಿಶ್ರಮವನ್ನು ಹಾಕಿ ದೊಡ್ಡ ಅಭಿಮಾನಿ ಬಳಗವನ್ನು ಪಡೆದಿದ್ದೇನೆ. ಅವರಲ್ಲಿ ಎಲ್ಲ ಪಕ್ಷವನ್ನು ಬೆಂಬಲಿಸುವವರೂ ಇದ್ದಾರೆ. ಹೀಗಾಗಿ ರಾಜಕೀಯ ಪ್ರವೇಶ ಮಾಡುವುದಿಲ್ಲ. ಒಂದು ವೇಳೆ ರಾಜಕೀಯ ಸೇರುವುದೇ ಆದಲ್ಲಿ ಮುಂಚಿತವಾಗಿಯೇ ಹೇಳಿಯೇ ಸೇರುತ್ತೇನೆ’ ಎಂದೂ ಸುದೀಪ್‌ ಸ್ಪಷ್ಟಪಡಿಸಿದ್ದರು.

ನನ್ನ ಕಷ್ಟದಲ್ಲಿ ಯಾರು ನನ್ನ ಜತೆ ಇದ್ದರೋ ಅಂತಹವರು ಯಾವುದೇ ಪಕ್ಷದಲ್ಲಿದ್ದರೂ ಅವರ ನೆರವಿಗೆ ಹೋಗುತ್ತೇನೆ. ಮುನಿರತ್ನ ಅವರಿಗೂ ಪ್ರಚಾರ ಮಾಡಿದ್ದೆ. ಆಗ ಅವರು ಬೇರೆ ಪಕ್ಷದಲ್ಲಿದ್ದರು ಎಂದಿದ್ದರು.

andolanait

Recent Posts

ವಿದ್ಯಾರ್ಥಿಗಳು ಕಲೆ ಮತ್ತು ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಿ : ರಂಗೇಗೌಡ ಸಲಹೆ

ಮೈಸೂರು : ಕಲೆ ಎಲ್ಲರಿಗೂ ಒಲಿದು ಬರೋದಿಲ್ಲ ಕೆಲವರಿಗೆ ಮಾತ್ರ ಒಲಿದು ಬರುತ್ತದೆ. ಕಲೆ ಮತ್ತು ಸಂಸ್ಕೃತಿ ಮೈಗೂಡಿಸಿಕೊಂಡರೆ ತಮ್ಮ…

9 mins ago

ಲಂಚ | ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ

ಗದಗ : ಗುತ್ತಿಗೆದಾರನಿಂದ ಕಮಿಷನ್‌ ರೂಪದಲ್ಲಿ ಐದು ಲಕ್ಷ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ…

30 mins ago

ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…

3 hours ago

ಯುವಜನತೆಯು ಜ್ಞಾನ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ ಮತ್ತು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…

3 hours ago

ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷ ಕಾಳಜಿ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…

3 hours ago

ಕೆಲಸ ಅಂದರೆ ಬರೀ ವರ್ಗಾವಣೆ ಮಾಡಿಸೋದಾ?: ಯತೀಂದ್ರ ಸಿದ್ದರಾಮಯ್ಯಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ತಿರುಗೇಟು

ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್‌ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…

3 hours ago