ಬೆಂಗಳೂರು : ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಬಗ್ಗೆ ಮೊದಲ ಬಾರಿಗೆ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಎಲ್ಲಾ ವಿಚಾರಗಳು ಆರಂಭಿಕ ಹಂತದಲ್ಲಿದೆ. ಈವರೆಗೂ ಕ್ಷೇತ್ರ ಹಂಚಿಕೆ ಬಗ್ಗೆ ಚರ್ಚೆ ನಡೆದಿಲ್ಲ. ಮುಂದೆ ಈ ಬಗ್ಗೆ ಹೇಳುತ್ತೇವೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮೈತ್ರಿಗೆ ಮಾಜಿ ಪ್ರಧಾನಿ ದೇವೇಗೌಡರು ಒಪ್ಪಿಗೆ ಸೂಚಿದ್ದಾರಾ ಎನ್ನುವ ಪ್ರಶ್ನೆಗೂ, ಕಾದು ನೋಡಿ ಎಂದಷ್ಟೇ ಉತ್ತರಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೈತ್ರಿ ಬಗ್ಗೆ ಮಾತನಾಡಿದ್ದಾರೆ. ಅವರಿಗೆ ನಾನು ಅಭಾರಿ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೈತ್ರಿಕೂಟದ ಬಗ್ಗೆ ಅವರು ಹೇಳಿದ್ದಾರೆ. ರಾಜ್ಯದ ಜನರನ್ನು ಲೂಟಿ ಮಾಡುತ್ತಿರುವವರಿಗೆ ಕಡಿವಾಣ ಹಾಕಬೇಕಿದೆ. 2006 ರಲ್ಲಿಯೂ ನಾನು ಬಿಜೆಪಿ ಜತೆ ಸೇರಿ ಸರ್ಕಾರ ಮಾಡಿದ್ದೆ ಎಂದಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೂರೇ ತಿಂಗಳಿಗೆ ಜನರು ರೋಸಿ ಹೋಗಿದ್ದಾರೆ. ಯಾವುದೇ ಸರ್ಕಾರಕ್ಕೆ ನಾಲ್ಕು ವರ್ಷ ಕಳೆದ ಮೇಲೆ ಆಡಳಿತ ವಿರೋಧಿ ಅಲೆ ಎದುರಾಗುತ್ತದೆ. ಆದರೆ ಈ ಸರ್ಕಾರ ಮೂರೇ ತಿಂಗಳಿಗೆ ಆಡಳಿತ ವಿರೋಧಿ ಅಲೆ ಎದುರಿಸುತ್ತಿದೆ. ಇಂಥ ಸರ್ಕಾರದ ವಿರುದ್ಧ ಸಂಘಟಿತವಾಗಿ ಹೋರಾಟ ನಡೆಸಬೇಕಿದೆ ಎಂದು ತಿಳಿಸಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…