BREAKING NEWS

ಮತ ಕೇಳುವ ನೈತಿಕತೆ ಜೆಡಿಎಸ್ ಬಿಜೆಪಿಗೆ ಇಲ್ಲ : ಡಿಕೆ ಶಿವಕುಮಾರ್

ಚನ್ನಪಟ್ಟಣ : ಜೆಡಿಎಸ್ ಮತ್ತು ಬಿಜೆಪಿ ಗೆ ಮತ ಕೇಳುವ ಯೋಗ್ಯತೆ ಇಲ್ಲ. ಜನಸಾಮಾನ್ಯರ ಬದುಕು ರೂಪಿಸುವ ಶಕ್ತಿ ಇರುವ ಕಾಂಗ್ರೆಸ್ ಅನ್ನು ತಾಲೂಕಿನ ಜನತೆ ಬೆಂಬಲಿಸಬೇಕು ಎಂದು ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.
ನಗರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಈ ತಾಲೂಕು ಬಹಳ ವಿಶಿಷ್ಟವಾದದ್ದು. ಜಾತಿಧರ್ಮ ಮೀರಿ ವಿಶ್ವಾಸಕ್ಕೆ ಬೆಲೆ ನೀಡುವ ತಾಲೂಕಿನ ಬಗ್ಗೆ ನನಗೆ ಅಪಾರವಾದ ಪ್ರೀತಿಯಿದೆ. ಒಕ್ಕಲಿಗರ ಪ್ರಾಬಲ್ಯವಿದ್ದರೂ ಸಹ, ಈ ನೆಲ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯದ ಡಿ.ಟಿ.ರಾಮು, ಸಾದತ್ ಆಖಿಖಾನ್ ರವರನ್ನು ಶಾಸಕರನ್ನಾಗಿ ಮಾಡಿದೆ. ಅದೇರೀತಿ ಹಿಂದುಳಿದ ಸಮುದಾಯದ ಗಂಗಾಧರ್ ರನ್ನು ಕ್ಷೇತ್ರದ ಅಭ್ಯರ್ಥಿ ಮಾಡಿದ್ದೇವೆ. ಅವರನ್ನು ಗೆಲ್ಲಿಸಿ, ನನ್ನ ಕೈ ಬಲಪಡಿಸಬೇಕು ಎಂದು ವಿನಂತಿಸಿದರು.

ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಚಿತ್ರರಂಗದಲ್ಲಿ ಸಾಕಷ್ಟು ಪ್ರಸಿದ್ಧಿ ‌ಪಡೆದಿದ್ದ ಅಂಬರೀಶ್ ರಾಮನಗರದಲ್ಲಿ ಸೋತರು. ನಾನು ಕೈಜೋಡಿಸಿದರೂ ಸಹ ಕುಮಾರಸ್ವಾಮಿ ಸುಪುತ್ರ ಮಂಡ್ಯದಲ್ಲಿ ಸೋತರು. ಮಾಜಿ ಪ್ರಧಾನಿ ದೇವೇಗೌಡರು ಸಹ ತುಮಕೂರಿನಲ್ಲಿ ಸೋಲುಂಡರು. ಹೀಗಾಗಿ, ವಿರೋಧಿಗಳು ಎಷ್ಟೇ ಬಲಿಷ್ಟ ರಾಗಿರಬಹುದು. ಕಾರ್ಯಕರ್ತರು ತಮ್ಮ ಮನೋಬಲ ಕುಗ್ಗಿಸಿಕೊಳ್ಳದೇ ಹೋರಾಟ ನಡೆಸುವ ಮೂಲಕ ಗಂಗಾಧರ್ ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸಿಕೊಡಿ ಎಂದು ಕರೆ ನೀಡಿದರು.

ಜೆಡಿಎಸ್ ಬಿಜೆಪಿ ಕಾರ್ಯಕರ್ತರು ಬೆಂಬಲಿಸಿ : ತಮ್ಮ ಭಾಷಣದುದ್ದಕ್ಕೂ ಕುಮಾರಸ್ವಾಮಿ ಮತ್ತು ಯೋಗೇಶ್ವರ್ ರನ್ನು ಕುಟುಕಿದ ಡಿಕೆಶಿ, ಇಬ್ಬರ ವಿರುದ್ಧವೂ ಟೀಕಾಪ್ರಹಾರ ನಡೆಸಿದರು. ನಮ್ಮ ಕಾರ್ಯಕರ್ತರಿಗೆ ಭಾಷಣ ಮಾಡಲು ನಾನು ಇಲ್ಲಿಗೆ ಬಂದಿಲ್ಲ. ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿಗೆ ತಿಳುವಳಿಕೆ ನೀಡಲು ಬಂದಿದ್ದೇನೆ. ನಿಮ್ಮ ಅಣ್ಣನನ್ನು ಸಿಎಂ ಮಾಡಲು ಹಾಗೂ ಉಳಿಸಲು ನಾನು ಶ್ರಮಪಡಲಿಲ್ಲವೇ? ಎಂದು ಜೆಡಿಎಸ್ ಕಾರ್ಯಕರ್ತರನ್ನು ಪ್ರಶ್ನಿಸಿದರು.
ಯೋಗೇಶ್ವರ್ ಮೇಲ್ಮನೆ ಸದಸ್ಯತ್ವದ ಅವಧಿ ಇನ್ನು ನಾಲ್ಕು ವರ್ಷ ಇದೆ. ಈ ಇಬ್ಬರು ಇಷ್ಟು ವರ್ಷ ಅಧಿಕಾರ ಅನುಭವಿಸಿದ್ದಾರೆ. ಆದರೆ, ತಾಲೂಕಿನ ಅಭಿವೃದ್ಧಿಗೆ ಇವರ ಕೊಡುಗೆ ಏನು? ಇವರುಗಳನ್ನು ತಿರಸ್ಕರಿಸಿ ನಿಮ್ಮ ಮನೆಮಗನಾದ ನನಗೆ ಈ ಬಾರಿ ಬೆಂಬಲ ನೀಡಿ ಸ್ವಾಭಿಮಾನ ಮೆರೆಯಿರಿ ಎಂದು ಮನವಿ ಮಾಡಿಕೊಂಡರು.

lokesh

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

4 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

4 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

8 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

8 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

8 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

8 hours ago