ಬೆಂಗಳೂರು: ಜೆಡಿಎಸ್ಗೆ ಸಿದ್ಧಾಂತವೇ ಇಲ್ಲ, ಬಿಜೆಪಿ ಜೊತೆಗೆ ಹೋದರೆ ಜಾತ್ಯಾತೀತವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ವಿಧಾನಸೌಧದಲ್ಲಿ ಸೋಮವಾರ ಮಾತನಾಡಿ, ಮಹಾಘಟಬಂಧನ್ ಅಂತ ಬಂದು ನಂತರ ಏನಾಯ್ತು ನೋಡಿದ್ರಲ್ಲಾ ಅಂತ ಎಚ್.ಡಿ.ಕೆ ಆರೋಪ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಜೆಡಿಎಸ್ಗೆ ಸಿದ್ಧಾಂತವೇ ಇಲ್ಲ, ಬಿಜೆಪಿ ಜೊತೆಗೆ ಹೋದರೆ ಜಾತ್ಯಾತೀತವೇ? ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ವಿಪಕ್ಷ ನಾಯಕರ ಎರಡನೇ ಸಭೆ ನಡೆಯುತ್ತಿದೆ. ಸುಮಾರು 24 ಪಕ್ಷದ ನಾಯಕರು ಸಭೆಯಲ್ಲಿ ಭಾಗಿಯಾಗ್ತಿದ್ದಾರೆ. ಎಲ್ಲಾ ವಿಪಕ್ಷಗಳ ನಾಯಕರು ಕೂಡ ಭಾಗಿಯಾಗ್ತಿದ್ದಾರೆ. ಇಂದು ಮತ್ತು ನಾಳೆ ಎರಡು ದಿನ ಚರ್ಚೆ ನಡೆಯಲಿದೆ. ಮುಂದಿನ ಲೋಕಸಭಾ ಚುನಾವಣೆಗೆ ಒಟ್ಟುಗೂಡಿ ಚುನಾವಣೆ ನಡೆಸಬೇಕು ಅನ್ನೋದು ಅಜೆಂಡಾ. ಹಾಗಾಗಿ ಚರ್ಚೆ ನಡೆಯುತ್ತಿದೆ ಎಂದರು.
ಕಾಂಗ್ರೆಸ್ ದೇಶದ ಆರ್ಥಿಕತೆ ಹಾಳು ಮಾಡಿದ್ರು ಅನ್ನೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ದೇಶದ ಆರ್ಥಿಕತೆಯನ್ನು ಹಾಳು ಮಾಡಿದ್ದೆ ಬಿಜೆಪಿಯವರು. ನರೇಂದ್ರ ಮೋದಿ ಬಂದ ಮೇಲೆ ಬೆಲೆ ಏರಿಕೆಯಾಗಿದೆ, ಆರ್ಥಿಕತೆ ಹಾಳಾಗಿದೆ. ಜನರು ಬದುಕಲು ಸಾಧ್ಯವಾಗದ ರೀತಿಯಾಗಿದೆ. ಕೋಮುವಾದ ಘಟನೆಗಳು ಹೆಚ್ಚಾಗಿದೆ ಎಂದರು.
ಬಿಜೆಪಿ ಮುಗಿಸಲು ಒಟ್ಟಾಗಿದ್ದಾರೆ ಅನ್ನೋ ಆರೋಪ ವಿಚಾರಕ್ಕೆ, ಕರ್ನಾಟಕದಲ್ಲಿ ಸಮರ್ಥವಾಗಿ ಎದುರಿಸಲಿಲ್ವಾ.? ಮೋದಿಯವರು ಎಲ್ಲೆಲ್ಲಿ ವಿಧಾನಸಭೆ ಚುನಾವಣೆ ಪ್ರಚಾರ ನಡೆಸಿದ್ರು. 28 ಕಡೆ ಮೋದಿ ಹೋಗಿದ್ರು. ಹೋದ ಕಡೆಯಲ್ಲೆಲ್ಲಾ ನಾವು ಗೆದ್ದಿದ್ದೇವೆ. ಈ ಬಾರಿ ಬಿಜೆಪಿ ಮತ್ತು ಮಿತ್ರಪಕ್ಷಗಳು ಸೋಲಲಿವೆ ಎಂದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…