ಬೆಂಗಳೂರು: ಜೆಡಿಎಸ್ಗೆ ಸಿದ್ಧಾಂತವೇ ಇಲ್ಲ, ಬಿಜೆಪಿ ಜೊತೆಗೆ ಹೋದರೆ ಜಾತ್ಯಾತೀತವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ವಿಧಾನಸೌಧದಲ್ಲಿ ಸೋಮವಾರ ಮಾತನಾಡಿ, ಮಹಾಘಟಬಂಧನ್ ಅಂತ ಬಂದು ನಂತರ ಏನಾಯ್ತು ನೋಡಿದ್ರಲ್ಲಾ ಅಂತ ಎಚ್.ಡಿ.ಕೆ ಆರೋಪ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಜೆಡಿಎಸ್ಗೆ ಸಿದ್ಧಾಂತವೇ ಇಲ್ಲ, ಬಿಜೆಪಿ ಜೊತೆಗೆ ಹೋದರೆ ಜಾತ್ಯಾತೀತವೇ? ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ವಿಪಕ್ಷ ನಾಯಕರ ಎರಡನೇ ಸಭೆ ನಡೆಯುತ್ತಿದೆ. ಸುಮಾರು 24 ಪಕ್ಷದ ನಾಯಕರು ಸಭೆಯಲ್ಲಿ ಭಾಗಿಯಾಗ್ತಿದ್ದಾರೆ. ಎಲ್ಲಾ ವಿಪಕ್ಷಗಳ ನಾಯಕರು ಕೂಡ ಭಾಗಿಯಾಗ್ತಿದ್ದಾರೆ. ಇಂದು ಮತ್ತು ನಾಳೆ ಎರಡು ದಿನ ಚರ್ಚೆ ನಡೆಯಲಿದೆ. ಮುಂದಿನ ಲೋಕಸಭಾ ಚುನಾವಣೆಗೆ ಒಟ್ಟುಗೂಡಿ ಚುನಾವಣೆ ನಡೆಸಬೇಕು ಅನ್ನೋದು ಅಜೆಂಡಾ. ಹಾಗಾಗಿ ಚರ್ಚೆ ನಡೆಯುತ್ತಿದೆ ಎಂದರು.
ಕಾಂಗ್ರೆಸ್ ದೇಶದ ಆರ್ಥಿಕತೆ ಹಾಳು ಮಾಡಿದ್ರು ಅನ್ನೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ದೇಶದ ಆರ್ಥಿಕತೆಯನ್ನು ಹಾಳು ಮಾಡಿದ್ದೆ ಬಿಜೆಪಿಯವರು. ನರೇಂದ್ರ ಮೋದಿ ಬಂದ ಮೇಲೆ ಬೆಲೆ ಏರಿಕೆಯಾಗಿದೆ, ಆರ್ಥಿಕತೆ ಹಾಳಾಗಿದೆ. ಜನರು ಬದುಕಲು ಸಾಧ್ಯವಾಗದ ರೀತಿಯಾಗಿದೆ. ಕೋಮುವಾದ ಘಟನೆಗಳು ಹೆಚ್ಚಾಗಿದೆ ಎಂದರು.
ಬಿಜೆಪಿ ಮುಗಿಸಲು ಒಟ್ಟಾಗಿದ್ದಾರೆ ಅನ್ನೋ ಆರೋಪ ವಿಚಾರಕ್ಕೆ, ಕರ್ನಾಟಕದಲ್ಲಿ ಸಮರ್ಥವಾಗಿ ಎದುರಿಸಲಿಲ್ವಾ.? ಮೋದಿಯವರು ಎಲ್ಲೆಲ್ಲಿ ವಿಧಾನಸಭೆ ಚುನಾವಣೆ ಪ್ರಚಾರ ನಡೆಸಿದ್ರು. 28 ಕಡೆ ಮೋದಿ ಹೋಗಿದ್ರು. ಹೋದ ಕಡೆಯಲ್ಲೆಲ್ಲಾ ನಾವು ಗೆದ್ದಿದ್ದೇವೆ. ಈ ಬಾರಿ ಬಿಜೆಪಿ ಮತ್ತು ಮಿತ್ರಪಕ್ಷಗಳು ಸೋಲಲಿವೆ ಎಂದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…