BREAKING NEWS

ಜೆಡಿಎಸ್ ಎರಡನೇ ಪಟ್ಟಿ: ಭವಾನಿ ರೇವಣ್ಣಗಿಲ್ಲ ಹಾಸನ ಟಿಕೆಟ್, ಸ್ವರೂಪ್​ ಮೇಲುಗೈ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಜೆಡಿಎಸ್ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಯಿತು.

ಜಾ.ದಳ ನಾಯಕರಾದ ಹೆಚ್​ಡಿ ಕುಮಾರಸ್ವಾಮಿ, ಹೆಚ್​ಡಿ ರೇವಣ್ಣ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿಎಂ ಇಬ್ರಾಹಿಂ ಪತ್ರಿಕಾಗೋಷ್ಠಿ ನಡೆಸಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದರು. ಬಹಳ ಕುತೂಹಲ ಮೂಡಿಸಿದ್ದ ಹಾಸನ ಕ್ಷೇತ್ರದ ಟಿಕೆಟ್ ಹೆಚ್.ಪಿ. ಸ್ವರೂಪ್ ಪಾಲಾಗಿದೆ.

ಭವಾನಿ ರೇವಣ್ಣಗೆ ಟಿಕೆಟ್ ಕೈತಪ್ಪಿದೆ. ಇದರ ಬೆನ್ನಲ್ಲೇ ಹಾಸನದ ಹೆಚ್.ಪಿ.ಸ್ವರೂಪ್ ನಿವಾಸದಲ್ಲಿ ಸಂಭ್ರಮದ ವಾತಾವರಣ ಮನೆಮಾಡಿದೆ. ಬೆಂಬಲಿಗರು ಸ್ವರೂಪ್​ರನ್ನು ಹೆಗಲ ಮೇಲೆ ಹೊತ್ತು ಕುಣಿದು ಸಂಭ್ರಮಿಸಿದರು. ಈ ಮಧ್ಯೆ, ಚಿಕ್ಕಮಗಳೂರಿನ ಕಡೂರು ಕ್ಷೇತ್ರದ ಟಿಕೆಟ್ ವೈಎಸ್​ವಿ ದತ್ತಾಗೆ ದೊರೆತಿದೆ.

ಸ್ವರೂಪ್‌ಗೆ ಟಿಕೆಟ್‌: ರೇವಣ್ಣ ಹೇಳಿದ್ದೇನು: ಹಾಸನ ಕ್ಷೇತ್ರದ ಟಿಕೆಟ್ ಸ್ವರೂಪ್ ಪಾಲಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಹೆಚ್​ಡಿ ರೇವಣ್ಣ, ಹಾಸನ ಕ್ಷೇತ್ರದಲ್ಲಿ ಭವಾನಿಯನ್ನು ಕಣಕ್ಕಿಳಿಸಬೇಕೆಂದು ಹೇಳುತ್ತಿದ್ದೆ. ಕಳೆದ 2 ವರ್ಷಗಳಿಂದ ಭವಾನಿ ನಿಲ್ಲಿಸಬೇಕೆಂದು ಚರ್ಚೆ ನಡೆಯುತ್ತಿತ್ತು. ಪ್ರೀತಂಗೌಡ 50,000 ಮತಗಳ ಅಂತರದಿಂದ ಗೆಲ್ಲುವೆ ಅಂತಿದ್ದರು. ಅದನ್ನು ಸವಾಲಾಗಿ ಸ್ವೀಕರಿಸಿ ಭವಾನಿ ಕಣಕ್ಕಿಳಿಸಲು ನಿರ್ಧರಿಸಿದ್ದೆವು. ಆದರೆ ಹಾಸನದ ಶಾಸಕರು, ಕಾರ್ಯಕರ್ತರ ಅಭಿಪ್ರಾಯದಂತೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು. ನಮ್ಮ ಮಾವ ಮುಖ್ಯ, ನನಗೆ ಯಾವುದೇ ಶಾಸಕ ಸ್ಥಾನ ಮುಖ್ಯವಲ್ಲ ಎಂದು ಕಳೆದ ಒಂದು ತಿಂಗಳಿಂದ ಭವಾನಿ ರೇವಣ್ಣ ಹೇಳುತ್ತಲೇ ಇದ್ದಾರೆ. ದೇವೇಗೌಡರು, ಕುಮಾರಸ್ವಾಮಿ ಹೇಳಿದ್ದನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ರೇವಣ್ಣ ಹೇಳಿದರು.

ಪ್ರಾಮಾಣಿಕ ರಾಜಕಾರಣಿ ದತ್ತ: ರೇವಣ್ಣ ಶ್ಲಾಘನೆ: ಪ್ರಾಮಾಣಿಕ ರಾಜಕಾರಣಿ ದತ್ತಾರನ್ನು ಕಾಂಗ್ರೆಸ್​ನವರು ಕರೆದೊಯ್ದಿದ್ದರು. ಅರ್ಧದಾರಿಯಲ್ಲಿ ವೈಎಸ್​ವಿ ದತ್ತಾರನ್ನು ಕಾಂಗ್ರೆಸ್ ನಾಯಕರು ಕೈಬಿಟ್ಟಿದ್ದರು. ಕಳೆದ ಹಲವು ವರ್ಷಗಳಿಂದ ದತ್ತಾ ನಮ್ಮ ಪಕ್ಷಕ್ಕಾಗಿ ದುಡಿದಿದ್ದಾರೆ ಎಂದು ರೇವಣ್ಣ ಮೆಚ್ಚುಗೆಯ ಮಾತುಗಳನ್ನಾಡಿದರು.

ಕಡೂರು ಟಿಕೆಟ್​ ವೈಎಸ್​​ವಿ ದತ್ತಾಗೆ

ಕಾಂಗ್ರೆಸ್ ಸೇರಿ ಮತ್ತೆ ಜೆಡಿಎಸ್​ಗೆ ಮರಳಿರುವ ವೈಎಸ್​ವಿ ದತ್ತಾಗೆ ಚಿಕ್ಕಮಗಳೂರಿನ ಕಡೂರು ಕ್ಷೇತ್ರದ ಟಿಕೆಟ್ ಘೋಷಿಸಲಾಗಿದೆ. ಕಡೂರು ಕ್ಷೇತ್ರದಿಂದ ಈಗಾಗಲೇ ಜೆಡಿಎಸ್ ಟಿಕೆಟ್ ಪಡೆದಿರುವ ಧನಂಜಯ್ ಅವರು ದತ್ತಾ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸಿದ್ದರು. ಆದರೂ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ವೇಳೆ ಎಲ್ಲ ಗೊಂದಲ ಬಗೆಹರಿಯಲಿದೆ ಎಂದಿದ್ದರು.

ಎಂ.ಪಿ.ಕುಮಾರಸ್ವಾಮಿ ಜೆಡಿಎಸ್ ಸೇರ್ಪಡೆ

ಎಂ.ಪಿ.ಕುಮಾರಸ್ವಾಮಿ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾದರು. ಬೆಂಗಳೂರಿನ ಶೇಷಾದ್ರಿಪುರಂನ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಎಂ.ಪಿ.ಕುಮಾರಸ್ವಾಮಿ ಜೆಡಿಎಸ್ ಸೇರಿದರು.

ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಯಾರಿಗೆಲ್ಲ ಟಿಕೆಟ್

ಕ್ಷೇತ್ರ – ಅಭ್ಯರ್ಥಿ
ಹಾಸನ – ಹೆಚ್​​ಪಿ ಸ್ವರೂಪ್
ಕುಡಚಿ – ಆನಂದ ಮಾಳಗಿ
ಸವದತ್ತಿ ಯಲ್ಲಮ್ಮ – ಸೌರಬ್ ಆನಂದ್​ ಚೋಪ್ರಾ
ಆಥಣಿ – ಶಶಿಕಾಂತ್ ಪಡಸಲಗಿ
ಸವದತ್ತಿ – ಸೌರಬ್ ಆನಂದ್​ ಚೋಪ್ರಾ
ಅಥಣಿ – ಶಶಿಕಾಂತ್ ಪಡಸಲಗಿ
ಯಲ್ಲಾಪುರ – ಡಾ.ನಾಗೇಶ್ ನಾಯ್ಕ್​
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ – ಕಡಬೂರು ಮಂಜುನಾಥ್
ಯಲಹಂಕ – ಮುನೇಗೌಡ
ಯಶವಂತಪುರ – ಜವರಾಯಿಗೌಡ
ತಿಪಟೂರು – ಶಾಂತಕುಮಾರ್
ಶಿರಾ – ಆರ್.ಉಗ್ರೇಶ್
ಹಾನಗಲ್ – ಮನೋಹರ ತಹಶೀಲ್ದಾರ್​
ಸಿಂದಗಿ – ವಿಶಾಲಾಕ್ಷಿ ಶಿವಾನಂದ್​
ಗಂಗಾವತಿ – ಹೆಚ್.ಆರ್.ಚನ್ನಕೇಶವ
ಜೇವರ್ಗಿ – ದೊಡ್ಡಪ್ಪಗೌಡ
ಶಹಾಪುರ – ಗುರುಲಿಂಗಪ್ಪಗೌಡ
ಕಡೂರು – ವೈಎಸ್​ವಿ ದತ್ತಾ
ಹೊಳೆನರಸೀಪುರ – ಹೆಚ್.ಡಿ.ರೇವಣ್ಣ
ಸಕಲೇಶಪುರ – ಹೆಚ್.ಕೆ.ಕುಮಾರಸ್ವಾಮಿ
ಅರಕಲಗೂಡು – ಎ.ಮಂಜು
ಶ್ರವಣಬೆಳಗೊಳ – ಬಾಲಕೃಷ್ಣ
ಮಹಾಲಕ್ಷ್ಮೀ ಲೇಔಟ್ – ರಾಜಣ್ಣ
ಮಾಯಕೊಂಡ – ಆನಂದಪ್ಪ
ಹುಬ್ಬಳ್ಳಿ ಪೂರ್ವ – ವೀರಭದ್ರಪ್ಪಯ್ಯ
ಕುಮಟ – ಸೂರಜ್ ಸೋನಿ ನಾಯಕ್
ಹಳಿಯಾಳ – ಎಸ್ ಎಲ್ ಘೋಟ್ನೆಸ್ಕರ್
ಭಟ್ಕಳ – ನಾಗೇಂದ್ರ ನಾಯಕ್
ಶಿರಸಿ – ಉಪೇಂದ್ರ ಪೈ
ಚಿತ್ತಪುರ – ನ್ಯಾಯದೀಶ ಸುಭಾಷ್ ಚಂದ್ರ ರಾಥೋಡ್
ಕಲಬುರಗಿ ಉತ್ತರ – ನಾಸೀರ್ ಹುಸೇನ್
ಬಳ್ಳಾರಿ – ಅಲ್ಲಬಕ್ಸ್ ಮುನ್ನ
ಹರಪ್ಪನ ಹಳ್ಳಿ – ನೂರ್ ಅಹಮದ್
ಕೊಳ್ಳೆಗಾಲ – ನಿವೃತ್ತ ಪೊಲೀಸ್ ಪುಟ್ಟ ಸ್ವಾಮಿ
ಗುಂಡ್ಲುಪೇಟೆ – ಕಡಬುರು ಮಂಜುನಾಥ್
ಕಾರ್ಕಳ – ಶ್ರೀಕಾಂತ್ ಕೊಚ್ಚುರ್
ಉಡುಪಿ – ದಕ್ಷತ್ವ ಆರ್ ಶೆಟ್ಟಿ
ಕುಂದಾಪುರ – ರಮೇಶ್ ಕುಂದಾಪುರ
ಕನಕಪುರ – ನಾಗರಾಜ್ಯ
ಲಹಂಕ – ಮುನೇಗೌಡ
ಯಶವಂತಪುರ – ಜವರಾಯಿಗೌಡ
ತಿಪಟೂರು – ಶಾಂತ ಕುಮಾರ್ಶಿ
ರಾ – ಆರ್ ಉಗ್ರೇಶ್
ಹಾನಗಲ್ – ನೋಹರ್ ತಹಶಿಲ್ದಾರ್
ಸಿಂದಗಿ – ವಿಶಾಲಕ್ಷಿ ಶಿವಾನಂದ್
ಹೆಚ್ ಡಿ ಕೋಟೆ – ಜಯಪ್ರಕಾಶ್
ಕಾರವಾರ – ಚೈತ್ರಾ ಕೋಟಾಕರ್
ಪುತ್ತೂರು – ದಿವ್ಯಾ ಪ್ರಭ
ಅರಕಲಗೂಡು – ಎ ಮಂಜು
ಸಕಲೇಶಪುರ – ಹೆಚ್ ಕೆ ಕುಮಾರಸ್ವಾಮಿ
ಮಹಾಲಕ್ಷ್ಮಿ ಲೇಔಟ್ – ರಾಜಣ್ಣ.

andolanait

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

2 mins ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

45 mins ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

1 hour ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

2 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

2 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

2 hours ago