ಬೆಂಗಳೂರು : ಮಾಜಿ ಪ್ರಧಾನಿಗಳಾದ HD ದೇವೇಗೌಡ ಅವರು ಹಾಗೂ ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ HD ಕುಮಾರಸ್ವಾಮಿ ಅವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಸಿಎಂ ಇಬ್ರಾಹಿಂ ಅವರು ಪಕ್ಷದ ಪ್ರಸಕ್ತ ವಿಧಾನಸಭೆ ಚುನಾವಣೆಯ ಕರುನಾಡ ಜನತೆಗೆ ಜೆಡಿಎಸ್ ಪರಿಹಾರ ಭರವಸೆ ಪತ್ರವನ್ನು ಬಿಡುಗಡೆ ಮಾಡಿದರು.ಇಂದು ಬೆಳಗ್ಗೆ ಮಾನ್ಯ ಮಾಜಿ ಪ್ರಧಾನಮಂತ್ರಿಗಳ ನಿವಾಸದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಣಾಳಿಕೆ ಕರಡು ರಚನಾ ಸಮಿತಿಯ ಅಧ್ಯಕ್ಷ ಬಿ.ಎಂ. ಫಾರೂಕ್ ಹಾಗೂ ಸದಸ್ಯರಾದ ಕುಪೇಂದ್ರ ರೆಡ್ಡಿ ಹಾಜರಿದ್ದರು





