BREAKING NEWS

ದೇವೇಗೌಡ್ರು ಅಡುಗೆ ಮನೆಯಲ್ಲಿ ಕುಂತ್ರೆ ಅರ್ಧ ಗಂಟೆಯಲ್ಲಿ ಜೆಡಿಎಸ್‌ ಟಿಕೆಟ್ ಹಂಚಿಕೆ ಮುಗಿಯುತ್ತೆ : ತೇಜಸ್ವಿ ಸೂರ್ಯ

ಬೀದರ್ : ಜೆಡಿಎಸ್‌ನಲ್ಲಿ ಟಿಕೆಟ್ ಕೊಡಬೇಕು ಅಂದ್ರೆ ಬಹಳ ಸುಲಭ. ದೇವೇಗೌಡ್ರು ಅಡುಗೆ ಮನೆಯಲ್ಲಿ ಕುಳಿತುಕೊಂಡ್ರೆ ಅರ್ಧ ಗಂಟೆಯಲ್ಲಿ ಎಲ್ಲಾ ಮುಗಿಯುತ್ತೆ ಎಂದು ಸಂಸದ ತೇಜಸ್ವಿ ಸೂರ್ಯ ಲೇವಡಿ ಮಾಡಿದ್ದಾರೆ.
ಬೀದರ್‌ನ ದಕ್ಷಿಣ ಕ್ಷೇತ್ರದ ಸಿಂಧೋಲ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸಮಾವೇಶದಲ್ಲಿ ಮಾತನಾಡಿದ ಅವರು‌, ಜೆಡಿಎಸ್‌ನಲ್ಲಿ ಸೊಸೆಗೆ ಟಿಕೆಟ್ ಕೊಡಬೇಕಾ, ಮಗನಿಗೆ ಕೊಡಬೇಕಾ, ಮಗಳಿಗೆ ಕೊಡಬೇಕಾ ಇಲ್ಲಾ ಅಳಿಯನಿಗೆ ಕೊಡಬೇಕಾ ಎಂದು ಅಡುಗೆ ಮಾಡುತ್ತಾ ಟಿಕೆಟ್‌ ಹಂಚಿಕೆ ಮುಗಿದು ಹೋಗಿ ಬಿಡುತ್ತೆ. ಆದರೆ, ಹಾಸನ ಟಿಕೆಟ್ ಹಂಚಿಕೆ ಇನ್ನೂ ಮುಗಿಯುತ್ತಿಲ್ಲಾ ಯಾಕೆಂದರೆ ಹಾಸನದಲ್ಲಿ ಸೊಸೆಗೆ ಕೋಡಬೇಕೋ ಇಲ್ಲಾ ಮಗನಿಗೆ ಕೋಡಬೇಕಾ ಎಂಬ ಗಲಾಟೆ ಇನ್ನೂ ಭರಪೂರವಾಗಿ ನಡೆಯುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ನಮ್ಮಲ್ಲಿ ಅಡುಗೆ ಮನೆ ಟಿಕೆಟ್‌ ಸಂಪ್ರದಾಯ ಇಲ್ಲ : ಕಾಂಗ್ರೆಸ್‌ನಲ್ಲಿ ಎರಡು – ಮೂರು ಬಣಗಳು ಕುಳಿತ್ರೆ ಟಿಕೆಟ್ ಫೈನಲ್‌ ಆಗತ್ತವೆ‌. ಆದರೆ, ಈ ರೀತಿ ಬೇಕಾದವರಿಗೆ ಟಿಕೆಟ್ ಕೊಟ್ಟ ಆರಣ ಸದ್ಯ ರಸ್ತೆ ರಸ್ತೆಯಲ್ಲಿ ಬಂಡಾಯ ಅಭ್ಯರ್ಥಿಗಳು ಹೊಡೆದಾಡುತ್ತಿದ್ದಾರೆ‌. ಆದರೆ, ಬಿಜೆಪಿಯಲ್ಲಿ ಮನೆಯಲ್ಲಿ ಕುಳಿತು, ಇಬ್ಬರು ಮೂವರೂ ಕುಳಿತುಕೊಂಡು ಟಿಕೆಟ್ ಫೈನಲ್ ಮಾಡುವ ಸಂಪ್ರದಾಯ ನಮ್ಮಲ್ಲಿ ಇಲ್ಲ. ರಾಜ್ಯ, ಕೇಂದ್ರದ ನಾಯಕರು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಮಾಡಿ ಟಿಕೆಟ್ ಕೊಡತ್ತಾರೆ ಎಂದು ಟಾಂಗ್ ಕೊಟ್ಟರು.

ಕಾಂಗ್ರೆಸ್‌ನಲ್ಲಿ ಪ್ರಚಾರ ಮಾಡಿದ್ದಾಗ ಸುದೀಪ್‌ ಒಳ್ಳೆಯವರು : ಕಾಂಗ್ರೆಸ್‌ನಲ್ಲಿ ಪ್ರಚಾರ ಮಾಡಿದ್ದಾಗ ಸುದೀಪ್‌ ಒಳ್ಳೆಯವರು ಸುದೀಪ್ ಅವರು ಬಿಜೆಪಿಗೆ ಬೆಂಬಲ ಸೂಚಿಸಿದರು. ಹೀಗಾಗಿ, ತಕ್ಷಣವೇ ಜೆಡಿಎಸ್ ಹಾಗೂ ಕಾಂಗ್ರೆಸ್‌ನವರು ಸುದೀಪ್ ಅವರನ್ನು ವಿಲನ್ ಮಾಡಿದರು. ಇದೇ ಸುದೀಪ್ ಕಳೆದ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದರು. ಆಗ ಸುದೀಪ್ ಬಹಳ‌ ಸಜ್ಜನ ಹಾಗೂ ಒಳ್ಳೆಯ ವ್ಯಕ್ತಿ‌ಯಾಗಿದ್ದರು ಅಲ್ವಾ ಎಂದು ಕಾಂಗ್ರೆಸ್‌ಗೆ ಪ್ರಶ್ನಿಸಿರು.

ಮೋದಿ ಮತ್ತು ಬೊಮ್ಮಾಯಿ ಸಂಬಂಧದಿಂದ ಸುದೀಪ್‌ ಬೆಂಬಲ : ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಬೊಮ್ಮಾಯಿ ಜತೆಗಿನ ಸಂಬಂಧದಿಂದ ಸುದೀಪ್‌ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಆದರೆ, ಕಾಂಗ್ರೆಸ್‌ನರಿಗೆ ಸುದೀಪ್‌ ಒಳ್ಳೆಯ ವ್ಯಕ್ತಿ ಅಲ್ಲ. ಅವರ ಸಿನಿಮಾ ಬ್ಯಾನ್ ಮಾಡಬೇಕು ಎಂದರು. ಜತೆ ಇಡಿ, ಸಿಬಿಐನ ಭಯದಲ್ಲಿ ಬಿಜೆಪಿಗೆ ಸುದೀಪ್‌ ಬೆಂಬಲ ನೀಡುತ್ತಿದ್ದಾರೆ ಎಂದು ಈ ರೀತಿ ಸುಳ್ಳಿನ ರಾಜಕಾರಣ ಕಾಂಗ್ರೆಸ್‌ನವರು ಮಾಡಿದರು ಎಂದು ವಾಗ್ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ಕೆಎಸ್ ಐಐಡಿಸಿ ನಿಗಮ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಮತ್ತಿತರರು ಇದ್ದರು.

ಏ.10ಕ್ಕೆ ಬಿಜೆಪಿ ಅಭ್ಯರ್ಥಿ ಪಟ್ಟಿ ಬಿಡುಗಡೆ ಸಾಧ್ಯತೆ : ಈಗಾಗಲೇ ರಾಜ್ಯ ವಿಧಾನಸಭೆ ಚುನಾವಣೆಗೆ ಜೆಡಿಎಸ್‌, ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಹಂತ ಹಂತವಾಗಿ ಬಿಡುಗಡೆ ಮಾಡಿದೆ. ಆದರೆ, ಬಿಜೆಪಿ ಇಂದಿಗೂ ಅಭ್ಯರ್ಥಿ ಪಟ್ಟಿ ಕಾಯ್ದಿರಿಸಿದ್ದು, ಏ.10 ಬಿಡುಗಡೆ ಮಾಡುವ ಸಾಧ್ಯತೆ ಇದೆ.

lokesh

Recent Posts

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

45 mins ago

ಮಾದಪ್ಪನ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ…

53 mins ago

ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಸಿಐಡಿ ಕಸ್ಟಡಿಗೆ

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…

2 hours ago

ಸಾಲೂರು ಮಠಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…

2 hours ago

ನಂಜನಗೂಡು ತಾಯಿ-ಮಕ್ಕಳ ಆಸ್ಪತ್ರೆಗೆ ಶಾಸಕ ದರ್ಶನ್ ದಿಢೀರ್ ಭೇಟಿ, ಪರಿಶೀಲನೆ

ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…

2 hours ago

ಯತೀಂದ್ರ ಸಿದ್ದರಾಮಯ್ಯ ನಮ್ಮ ಹೈಕಮಾಂಡ್:‌ ಗಣಿಗ ರವಿಕುಮಾರ್‌ ವ್ಯಂಗ್ಯ

ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್.‌ ನಮಗೆ ಹೈಕಮಾಂಡ್‌ ನೋಟಿಸ್‌ ಕೊಡಬಹುದು. ಆದರೆ ಹೈಕಮಾಂಡ್‌ಗೆ ನಾವು ನೋಟಿಸ್‌ ಕೊಡಲು…

2 hours ago