BREAKING NEWS

ದೇವೇಗೌಡ್ರು ಅಡುಗೆ ಮನೆಯಲ್ಲಿ ಕುಂತ್ರೆ ಅರ್ಧ ಗಂಟೆಯಲ್ಲಿ ಜೆಡಿಎಸ್‌ ಟಿಕೆಟ್ ಹಂಚಿಕೆ ಮುಗಿಯುತ್ತೆ : ತೇಜಸ್ವಿ ಸೂರ್ಯ

ಬೀದರ್ : ಜೆಡಿಎಸ್‌ನಲ್ಲಿ ಟಿಕೆಟ್ ಕೊಡಬೇಕು ಅಂದ್ರೆ ಬಹಳ ಸುಲಭ. ದೇವೇಗೌಡ್ರು ಅಡುಗೆ ಮನೆಯಲ್ಲಿ ಕುಳಿತುಕೊಂಡ್ರೆ ಅರ್ಧ ಗಂಟೆಯಲ್ಲಿ ಎಲ್ಲಾ ಮುಗಿಯುತ್ತೆ ಎಂದು ಸಂಸದ ತೇಜಸ್ವಿ ಸೂರ್ಯ ಲೇವಡಿ ಮಾಡಿದ್ದಾರೆ.
ಬೀದರ್‌ನ ದಕ್ಷಿಣ ಕ್ಷೇತ್ರದ ಸಿಂಧೋಲ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸಮಾವೇಶದಲ್ಲಿ ಮಾತನಾಡಿದ ಅವರು‌, ಜೆಡಿಎಸ್‌ನಲ್ಲಿ ಸೊಸೆಗೆ ಟಿಕೆಟ್ ಕೊಡಬೇಕಾ, ಮಗನಿಗೆ ಕೊಡಬೇಕಾ, ಮಗಳಿಗೆ ಕೊಡಬೇಕಾ ಇಲ್ಲಾ ಅಳಿಯನಿಗೆ ಕೊಡಬೇಕಾ ಎಂದು ಅಡುಗೆ ಮಾಡುತ್ತಾ ಟಿಕೆಟ್‌ ಹಂಚಿಕೆ ಮುಗಿದು ಹೋಗಿ ಬಿಡುತ್ತೆ. ಆದರೆ, ಹಾಸನ ಟಿಕೆಟ್ ಹಂಚಿಕೆ ಇನ್ನೂ ಮುಗಿಯುತ್ತಿಲ್ಲಾ ಯಾಕೆಂದರೆ ಹಾಸನದಲ್ಲಿ ಸೊಸೆಗೆ ಕೋಡಬೇಕೋ ಇಲ್ಲಾ ಮಗನಿಗೆ ಕೋಡಬೇಕಾ ಎಂಬ ಗಲಾಟೆ ಇನ್ನೂ ಭರಪೂರವಾಗಿ ನಡೆಯುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ನಮ್ಮಲ್ಲಿ ಅಡುಗೆ ಮನೆ ಟಿಕೆಟ್‌ ಸಂಪ್ರದಾಯ ಇಲ್ಲ : ಕಾಂಗ್ರೆಸ್‌ನಲ್ಲಿ ಎರಡು – ಮೂರು ಬಣಗಳು ಕುಳಿತ್ರೆ ಟಿಕೆಟ್ ಫೈನಲ್‌ ಆಗತ್ತವೆ‌. ಆದರೆ, ಈ ರೀತಿ ಬೇಕಾದವರಿಗೆ ಟಿಕೆಟ್ ಕೊಟ್ಟ ಆರಣ ಸದ್ಯ ರಸ್ತೆ ರಸ್ತೆಯಲ್ಲಿ ಬಂಡಾಯ ಅಭ್ಯರ್ಥಿಗಳು ಹೊಡೆದಾಡುತ್ತಿದ್ದಾರೆ‌. ಆದರೆ, ಬಿಜೆಪಿಯಲ್ಲಿ ಮನೆಯಲ್ಲಿ ಕುಳಿತು, ಇಬ್ಬರು ಮೂವರೂ ಕುಳಿತುಕೊಂಡು ಟಿಕೆಟ್ ಫೈನಲ್ ಮಾಡುವ ಸಂಪ್ರದಾಯ ನಮ್ಮಲ್ಲಿ ಇಲ್ಲ. ರಾಜ್ಯ, ಕೇಂದ್ರದ ನಾಯಕರು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಮಾಡಿ ಟಿಕೆಟ್ ಕೊಡತ್ತಾರೆ ಎಂದು ಟಾಂಗ್ ಕೊಟ್ಟರು.

ಕಾಂಗ್ರೆಸ್‌ನಲ್ಲಿ ಪ್ರಚಾರ ಮಾಡಿದ್ದಾಗ ಸುದೀಪ್‌ ಒಳ್ಳೆಯವರು : ಕಾಂಗ್ರೆಸ್‌ನಲ್ಲಿ ಪ್ರಚಾರ ಮಾಡಿದ್ದಾಗ ಸುದೀಪ್‌ ಒಳ್ಳೆಯವರು ಸುದೀಪ್ ಅವರು ಬಿಜೆಪಿಗೆ ಬೆಂಬಲ ಸೂಚಿಸಿದರು. ಹೀಗಾಗಿ, ತಕ್ಷಣವೇ ಜೆಡಿಎಸ್ ಹಾಗೂ ಕಾಂಗ್ರೆಸ್‌ನವರು ಸುದೀಪ್ ಅವರನ್ನು ವಿಲನ್ ಮಾಡಿದರು. ಇದೇ ಸುದೀಪ್ ಕಳೆದ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದರು. ಆಗ ಸುದೀಪ್ ಬಹಳ‌ ಸಜ್ಜನ ಹಾಗೂ ಒಳ್ಳೆಯ ವ್ಯಕ್ತಿ‌ಯಾಗಿದ್ದರು ಅಲ್ವಾ ಎಂದು ಕಾಂಗ್ರೆಸ್‌ಗೆ ಪ್ರಶ್ನಿಸಿರು.

ಮೋದಿ ಮತ್ತು ಬೊಮ್ಮಾಯಿ ಸಂಬಂಧದಿಂದ ಸುದೀಪ್‌ ಬೆಂಬಲ : ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಬೊಮ್ಮಾಯಿ ಜತೆಗಿನ ಸಂಬಂಧದಿಂದ ಸುದೀಪ್‌ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಆದರೆ, ಕಾಂಗ್ರೆಸ್‌ನರಿಗೆ ಸುದೀಪ್‌ ಒಳ್ಳೆಯ ವ್ಯಕ್ತಿ ಅಲ್ಲ. ಅವರ ಸಿನಿಮಾ ಬ್ಯಾನ್ ಮಾಡಬೇಕು ಎಂದರು. ಜತೆ ಇಡಿ, ಸಿಬಿಐನ ಭಯದಲ್ಲಿ ಬಿಜೆಪಿಗೆ ಸುದೀಪ್‌ ಬೆಂಬಲ ನೀಡುತ್ತಿದ್ದಾರೆ ಎಂದು ಈ ರೀತಿ ಸುಳ್ಳಿನ ರಾಜಕಾರಣ ಕಾಂಗ್ರೆಸ್‌ನವರು ಮಾಡಿದರು ಎಂದು ವಾಗ್ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ಕೆಎಸ್ ಐಐಡಿಸಿ ನಿಗಮ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಮತ್ತಿತರರು ಇದ್ದರು.

ಏ.10ಕ್ಕೆ ಬಿಜೆಪಿ ಅಭ್ಯರ್ಥಿ ಪಟ್ಟಿ ಬಿಡುಗಡೆ ಸಾಧ್ಯತೆ : ಈಗಾಗಲೇ ರಾಜ್ಯ ವಿಧಾನಸಭೆ ಚುನಾವಣೆಗೆ ಜೆಡಿಎಸ್‌, ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಹಂತ ಹಂತವಾಗಿ ಬಿಡುಗಡೆ ಮಾಡಿದೆ. ಆದರೆ, ಬಿಜೆಪಿ ಇಂದಿಗೂ ಅಭ್ಯರ್ಥಿ ಪಟ್ಟಿ ಕಾಯ್ದಿರಿಸಿದ್ದು, ಏ.10 ಬಿಡುಗಡೆ ಮಾಡುವ ಸಾಧ್ಯತೆ ಇದೆ.

lokesh

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

1 hour ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

3 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

3 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

9 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

9 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

9 hours ago