BREAKING NEWS

ಜೋಡೆತ್ತುಗಳ ಪ್ರಮಾಣ ವಚನ : ಕಂಠೀರವದಲ್ಲಿ ಸ್ಟೇಡಿಯಮ್‌ ನಲ್ಲಿ ಯಾರಿಗೆಲ್ಲಿ ಪ್ರವೇಶ?

ಬೆಂಗಳೂರು : ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ನೂತನ ಮುಖ್ಯಮಂತ್ರಿ ಹಾಗೂ ಸಚಿವರ ಪದಗ್ರಹಣ ಕಾರ್ಯಕ್ರಮ ಜರುಗುವ ಹಿನ್ನೆಲೆಯಲ್ಲಿ ಅತಿಗಣ್ಯರು, ಗಣ್ಯರು ಹಾಗೂ ಸಾರ್ವಜನಿಕರು ಕ್ರೀಡಾಂಗಣ ಪ್ರವೇಶಿಸುವ ಕುರಿತು ನಗರ ಪೊಲೀಸರು ಸೂಚನೆಗಳನ್ನು ನೀಡಿದ್ದಾರೆ.

ಕೆಂಪು ಪಾಸ್‌ ಇದ್ದವರು ಕಸ್ತೂರಾಬಾ ರಸ್ತೆ ಮೂಲಕ ಕ್ರೀಡಾಂಗಣದ ಗೇಟ್‌ ಸಂಖ್ಯೆ 1 ಮತ್ತು ರಾಜಾರಾಮ ಮೋಹನರಾಯ್‌ ರಸ್ತೆಯ ಗೇಟ್‌ ಸಂಖ್ಯೆ 5ರ ಮುಖಾಂತರ ವಾಹನಗಳ ಅಧಿಕೃತ ಪಾಸ್‌ನೊಂದಿಗೆ ವಾಹನ ಸಮೇತ ಪ್ರವೇಶ ಪಡೆಯಬಹುದು

ಹಸಿರು ಪಾಸ್‌ ಇದ್ದವರು ರಾಜಾರಾಮ ಮೋಹನರಾಯ್‌ ರಸ್ತೆಯ ಗೇಟ್‌ ಸಂಖ್ಯೆ 5ರ ಮೂಲಕ ಕಾಲ್ನಡಿಗೆಯಲ್ಲಿ ಮಾತ್ರ ಕ್ರೀಡಾಂಗಣ ಪ್ರವೇಶಿಸಬೇಕು. ವಾಹನಗಳಿಗೆ ಪ್ರವೇಶವಿಲ್ಲ

ಹಳದಿ ಪಾಸ್‌ ಇದ್ದವರು ಸಿದ್ದಲಿಂಗಯ್ಯ ವೃತ್ತದ ಗೇಟ್‌ ಸಂಖ್ಯೆ 2ರ ಮೂಲಕ ಕಾಲ್ನಡಿಗೆಯಲ್ಲಿ ಮಾತ್ರ ಪ್ರವೇಶಿಸಬೇಕು. ವಾಹನಗಳಿಗೆ ಪ್ರವೇಶವಿಲ್ಲ

ಯಾವುದೇ ಪಾಸ್‌ ಇಲ್ಲದವರು ವಿಠಲ್‌ ಮಲ್ಯ ರಸ್ತೆಯ ಗೇಟ್‌ ಸಂಖ್ಯೆ 3 ಮತ್ತು 4ರ ಮುಖಾಂತರ ಕಾಲ್ನಡಿಗೆಯಲ್ಲಿ ಕ್ರೀಡಾಂಗಣ ಪ್ರವೇಶಿಸಬೇಕು. ಸಾರ್ವಜನಿಕರು ಕಾರ್ಯಕ್ರಮದ ವೇಳೆ ಸಂಯಮದಿಂದ ಇರಬೇಕು. ಸ್ಥಳದಲ್ಲಿ ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿ ನೀಡುವ ಸೂಚನೆಗಳನ್ನು ಪಾಲಿಸಬೇಕು.

1 ಲಕ್ಷಕ್ಕೂ ಹೆಚ್ಚು ಜನ ಭಾಗಿ : ಕ್ರೀಡಾಂಗಣದಲ್ಲಿ ಸುಮಾರು 35000 ಸೀಟುಗಳ ವ್ಯವಸ್ಥೆ ಇದೆ. ಇದರಲ್ಲಿ ಗಣ್ಯರು, ಜನಪ್ರತಿನಿಧಿಗಳು ಹಾಗೂ ಆಹ್ವಾನಿತರಿಗೆ ಅವಕಾಶ ನೀಡಿ ಉಳಿದ ಜಾಗದಲ್ಲಿ ಸಾರ್ವಜನಿಕರು ಕೂರಲು ವ್ಯವಸ್ಥೆ ಮಾಡಲಾಗುತ್ತದೆ. ಉಳಿದಂತೆ ಮೈದಾನಕ್ಕೆ ಮ್ಯಾಟ್‌ ಹಾಕಲಾಗುತ್ತಿದ್ದು, ಅಲ್ಲೂ ಕುರ್ಚಿ ವ್ಯವಸ್ಥೆ ಮಾಡುವ ಮೂಲಕ ಸುಮಾರು 1 ಲಕ್ಷ ಮಂದಿಗೆ ವ್ಯವಸ್ಥೆ ಕಲ್ಪಿಸುವ ನಿರೀಕ್ಷೆಯಲ್ಲಿ ಅಧಿಕಾರಿಗಳು ಇದ್ದಾರೆ.

3,000ಕ್ಕೂ ಅಧಿಕ ಪೊಲೀಸರ ನಿಯೋಜನೆ : ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಅಂದಾಜಿಗಿಂತ ಹೆಚ್ಚು ಮಂದಿ ಆಗಮಿಸಿದರೆ ಎಂಬ ಕಾರಣಕ್ಕೆ ಮುನ್ನೆಚ್ಚರಿಕಾ ಕ್ರಮವಾಗಿ ಕ್ರೀಡಾಂಗಣದ ಹೊರ ಭಾಗದಲ್ಲಿ ಟಿವಿ ಪರದೆಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ಜತೆಗೆ ಭದ್ರತೆಗಾಗಿ 3 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಕೆಎಸ್‌ಆರ್‌ಪಿ, ಗೃಹರಕ್ಷಕ ದಳ, ಸಂಚಾರಿ ಪೋಲಿಸ್ ಸಿಬ್ಬಂದಿ ಸೇರಿ 3 ಸಾವಿರಕ್ಕೂ ಹೆಚ್ಚು ಮಂದಿಯನ್ನು ಈಗಾಗಲೇ ಭದ್ರತೆಗೆ ನಿಯೋಜಿಸಲಾಗಿದೆ. ವಿಶೇಷ ಪೋಲಿಸ್ ಆಯುಕ್ತ ಸಲೀಂ, ಕೇಂದ್ರ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗುತ್ತಿದೆ. ಪ್ರತಿಯೊಬ್ಬರನ್ನೂ ಮೆಟಲ್‌ ಡಿಟೆಕ್ಟರ್‌ನಲ್ಲಿ ಪರಿಶೀಲನೆ ನಡೆಸಿದ ಬಳಿಕವೇ ಒಳಗೆ ಪ್ರವೇಶಿಸಲು ಅವಕಾಶ ನೀಡಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

lokesh

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

5 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

5 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

6 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

8 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

8 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

9 hours ago