BREAKING NEWS

ಜೋಡೆತ್ತುಗಳ ಪ್ರಮಾಣ ವಚನ : ಕಂಠೀರವದಲ್ಲಿ ಸ್ಟೇಡಿಯಮ್‌ ನಲ್ಲಿ ಯಾರಿಗೆಲ್ಲಿ ಪ್ರವೇಶ?

ಬೆಂಗಳೂರು : ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ನೂತನ ಮುಖ್ಯಮಂತ್ರಿ ಹಾಗೂ ಸಚಿವರ ಪದಗ್ರಹಣ ಕಾರ್ಯಕ್ರಮ ಜರುಗುವ ಹಿನ್ನೆಲೆಯಲ್ಲಿ ಅತಿಗಣ್ಯರು, ಗಣ್ಯರು ಹಾಗೂ ಸಾರ್ವಜನಿಕರು ಕ್ರೀಡಾಂಗಣ ಪ್ರವೇಶಿಸುವ ಕುರಿತು ನಗರ ಪೊಲೀಸರು ಸೂಚನೆಗಳನ್ನು ನೀಡಿದ್ದಾರೆ.

ಕೆಂಪು ಪಾಸ್‌ ಇದ್ದವರು ಕಸ್ತೂರಾಬಾ ರಸ್ತೆ ಮೂಲಕ ಕ್ರೀಡಾಂಗಣದ ಗೇಟ್‌ ಸಂಖ್ಯೆ 1 ಮತ್ತು ರಾಜಾರಾಮ ಮೋಹನರಾಯ್‌ ರಸ್ತೆಯ ಗೇಟ್‌ ಸಂಖ್ಯೆ 5ರ ಮುಖಾಂತರ ವಾಹನಗಳ ಅಧಿಕೃತ ಪಾಸ್‌ನೊಂದಿಗೆ ವಾಹನ ಸಮೇತ ಪ್ರವೇಶ ಪಡೆಯಬಹುದು

ಹಸಿರು ಪಾಸ್‌ ಇದ್ದವರು ರಾಜಾರಾಮ ಮೋಹನರಾಯ್‌ ರಸ್ತೆಯ ಗೇಟ್‌ ಸಂಖ್ಯೆ 5ರ ಮೂಲಕ ಕಾಲ್ನಡಿಗೆಯಲ್ಲಿ ಮಾತ್ರ ಕ್ರೀಡಾಂಗಣ ಪ್ರವೇಶಿಸಬೇಕು. ವಾಹನಗಳಿಗೆ ಪ್ರವೇಶವಿಲ್ಲ

ಹಳದಿ ಪಾಸ್‌ ಇದ್ದವರು ಸಿದ್ದಲಿಂಗಯ್ಯ ವೃತ್ತದ ಗೇಟ್‌ ಸಂಖ್ಯೆ 2ರ ಮೂಲಕ ಕಾಲ್ನಡಿಗೆಯಲ್ಲಿ ಮಾತ್ರ ಪ್ರವೇಶಿಸಬೇಕು. ವಾಹನಗಳಿಗೆ ಪ್ರವೇಶವಿಲ್ಲ

ಯಾವುದೇ ಪಾಸ್‌ ಇಲ್ಲದವರು ವಿಠಲ್‌ ಮಲ್ಯ ರಸ್ತೆಯ ಗೇಟ್‌ ಸಂಖ್ಯೆ 3 ಮತ್ತು 4ರ ಮುಖಾಂತರ ಕಾಲ್ನಡಿಗೆಯಲ್ಲಿ ಕ್ರೀಡಾಂಗಣ ಪ್ರವೇಶಿಸಬೇಕು. ಸಾರ್ವಜನಿಕರು ಕಾರ್ಯಕ್ರಮದ ವೇಳೆ ಸಂಯಮದಿಂದ ಇರಬೇಕು. ಸ್ಥಳದಲ್ಲಿ ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿ ನೀಡುವ ಸೂಚನೆಗಳನ್ನು ಪಾಲಿಸಬೇಕು.

1 ಲಕ್ಷಕ್ಕೂ ಹೆಚ್ಚು ಜನ ಭಾಗಿ : ಕ್ರೀಡಾಂಗಣದಲ್ಲಿ ಸುಮಾರು 35000 ಸೀಟುಗಳ ವ್ಯವಸ್ಥೆ ಇದೆ. ಇದರಲ್ಲಿ ಗಣ್ಯರು, ಜನಪ್ರತಿನಿಧಿಗಳು ಹಾಗೂ ಆಹ್ವಾನಿತರಿಗೆ ಅವಕಾಶ ನೀಡಿ ಉಳಿದ ಜಾಗದಲ್ಲಿ ಸಾರ್ವಜನಿಕರು ಕೂರಲು ವ್ಯವಸ್ಥೆ ಮಾಡಲಾಗುತ್ತದೆ. ಉಳಿದಂತೆ ಮೈದಾನಕ್ಕೆ ಮ್ಯಾಟ್‌ ಹಾಕಲಾಗುತ್ತಿದ್ದು, ಅಲ್ಲೂ ಕುರ್ಚಿ ವ್ಯವಸ್ಥೆ ಮಾಡುವ ಮೂಲಕ ಸುಮಾರು 1 ಲಕ್ಷ ಮಂದಿಗೆ ವ್ಯವಸ್ಥೆ ಕಲ್ಪಿಸುವ ನಿರೀಕ್ಷೆಯಲ್ಲಿ ಅಧಿಕಾರಿಗಳು ಇದ್ದಾರೆ.

3,000ಕ್ಕೂ ಅಧಿಕ ಪೊಲೀಸರ ನಿಯೋಜನೆ : ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಅಂದಾಜಿಗಿಂತ ಹೆಚ್ಚು ಮಂದಿ ಆಗಮಿಸಿದರೆ ಎಂಬ ಕಾರಣಕ್ಕೆ ಮುನ್ನೆಚ್ಚರಿಕಾ ಕ್ರಮವಾಗಿ ಕ್ರೀಡಾಂಗಣದ ಹೊರ ಭಾಗದಲ್ಲಿ ಟಿವಿ ಪರದೆಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ಜತೆಗೆ ಭದ್ರತೆಗಾಗಿ 3 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಕೆಎಸ್‌ಆರ್‌ಪಿ, ಗೃಹರಕ್ಷಕ ದಳ, ಸಂಚಾರಿ ಪೋಲಿಸ್ ಸಿಬ್ಬಂದಿ ಸೇರಿ 3 ಸಾವಿರಕ್ಕೂ ಹೆಚ್ಚು ಮಂದಿಯನ್ನು ಈಗಾಗಲೇ ಭದ್ರತೆಗೆ ನಿಯೋಜಿಸಲಾಗಿದೆ. ವಿಶೇಷ ಪೋಲಿಸ್ ಆಯುಕ್ತ ಸಲೀಂ, ಕೇಂದ್ರ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗುತ್ತಿದೆ. ಪ್ರತಿಯೊಬ್ಬರನ್ನೂ ಮೆಟಲ್‌ ಡಿಟೆಕ್ಟರ್‌ನಲ್ಲಿ ಪರಿಶೀಲನೆ ನಡೆಸಿದ ಬಳಿಕವೇ ಒಳಗೆ ಪ್ರವೇಶಿಸಲು ಅವಕಾಶ ನೀಡಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

lokesh

Recent Posts

ಹನೂರು| ಬೀದಿ ನಾಯಿ ದಾಳಿ: ಜಿಂಕೆ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ನೀರು ಹರಸಿ ಜಮೀನಿನತ್ತ ಬಂದಿದ್ದ ಜಿಂಕೆಯೊಂದರ ಮೇಲೆ ಬೀದಿ…

31 mins ago

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…

4 hours ago

ಏರುತ್ತಿರುವ ತಾಪಮಾನ; ತಂಪು ಪಾನೀಯಗಳಿಗೆ ಮೊರೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…

4 hours ago

ಆಗ ಟೈಲರ್ ಕಾಲ, ಈಗ ಆನ್ ಲೈನ್ ಕಾಲ…

ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…

4 hours ago

ಸೈಕಲ್ಲು, ಸಿರೀಂದ್ರ ಮತ್ತು ನನ್ನ ನಟರಾಜ ಸರ್ವೀಸು

ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…

4 hours ago

ತರುಣ ತಲೆಮಾರಿನ ಕೈಯಲ್ಲಿ ನೆರೆಯ ನೇಪಾಳದ ಚುಕ್ಕಾಣಿ…

ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…

4 hours ago