BREAKING NEWS

ಜೋಡೆತ್ತುಗಳ ಪ್ರಮಾಣ ವಚನ : ಕಂಠೀರವದಲ್ಲಿ ಸ್ಟೇಡಿಯಮ್‌ ನಲ್ಲಿ ಯಾರಿಗೆಲ್ಲಿ ಪ್ರವೇಶ?

ಬೆಂಗಳೂರು : ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ನೂತನ ಮುಖ್ಯಮಂತ್ರಿ ಹಾಗೂ ಸಚಿವರ ಪದಗ್ರಹಣ ಕಾರ್ಯಕ್ರಮ ಜರುಗುವ ಹಿನ್ನೆಲೆಯಲ್ಲಿ ಅತಿಗಣ್ಯರು, ಗಣ್ಯರು ಹಾಗೂ ಸಾರ್ವಜನಿಕರು ಕ್ರೀಡಾಂಗಣ ಪ್ರವೇಶಿಸುವ ಕುರಿತು ನಗರ ಪೊಲೀಸರು ಸೂಚನೆಗಳನ್ನು ನೀಡಿದ್ದಾರೆ.

ಕೆಂಪು ಪಾಸ್‌ ಇದ್ದವರು ಕಸ್ತೂರಾಬಾ ರಸ್ತೆ ಮೂಲಕ ಕ್ರೀಡಾಂಗಣದ ಗೇಟ್‌ ಸಂಖ್ಯೆ 1 ಮತ್ತು ರಾಜಾರಾಮ ಮೋಹನರಾಯ್‌ ರಸ್ತೆಯ ಗೇಟ್‌ ಸಂಖ್ಯೆ 5ರ ಮುಖಾಂತರ ವಾಹನಗಳ ಅಧಿಕೃತ ಪಾಸ್‌ನೊಂದಿಗೆ ವಾಹನ ಸಮೇತ ಪ್ರವೇಶ ಪಡೆಯಬಹುದು

ಹಸಿರು ಪಾಸ್‌ ಇದ್ದವರು ರಾಜಾರಾಮ ಮೋಹನರಾಯ್‌ ರಸ್ತೆಯ ಗೇಟ್‌ ಸಂಖ್ಯೆ 5ರ ಮೂಲಕ ಕಾಲ್ನಡಿಗೆಯಲ್ಲಿ ಮಾತ್ರ ಕ್ರೀಡಾಂಗಣ ಪ್ರವೇಶಿಸಬೇಕು. ವಾಹನಗಳಿಗೆ ಪ್ರವೇಶವಿಲ್ಲ

ಹಳದಿ ಪಾಸ್‌ ಇದ್ದವರು ಸಿದ್ದಲಿಂಗಯ್ಯ ವೃತ್ತದ ಗೇಟ್‌ ಸಂಖ್ಯೆ 2ರ ಮೂಲಕ ಕಾಲ್ನಡಿಗೆಯಲ್ಲಿ ಮಾತ್ರ ಪ್ರವೇಶಿಸಬೇಕು. ವಾಹನಗಳಿಗೆ ಪ್ರವೇಶವಿಲ್ಲ

ಯಾವುದೇ ಪಾಸ್‌ ಇಲ್ಲದವರು ವಿಠಲ್‌ ಮಲ್ಯ ರಸ್ತೆಯ ಗೇಟ್‌ ಸಂಖ್ಯೆ 3 ಮತ್ತು 4ರ ಮುಖಾಂತರ ಕಾಲ್ನಡಿಗೆಯಲ್ಲಿ ಕ್ರೀಡಾಂಗಣ ಪ್ರವೇಶಿಸಬೇಕು. ಸಾರ್ವಜನಿಕರು ಕಾರ್ಯಕ್ರಮದ ವೇಳೆ ಸಂಯಮದಿಂದ ಇರಬೇಕು. ಸ್ಥಳದಲ್ಲಿ ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿ ನೀಡುವ ಸೂಚನೆಗಳನ್ನು ಪಾಲಿಸಬೇಕು.

1 ಲಕ್ಷಕ್ಕೂ ಹೆಚ್ಚು ಜನ ಭಾಗಿ : ಕ್ರೀಡಾಂಗಣದಲ್ಲಿ ಸುಮಾರು 35000 ಸೀಟುಗಳ ವ್ಯವಸ್ಥೆ ಇದೆ. ಇದರಲ್ಲಿ ಗಣ್ಯರು, ಜನಪ್ರತಿನಿಧಿಗಳು ಹಾಗೂ ಆಹ್ವಾನಿತರಿಗೆ ಅವಕಾಶ ನೀಡಿ ಉಳಿದ ಜಾಗದಲ್ಲಿ ಸಾರ್ವಜನಿಕರು ಕೂರಲು ವ್ಯವಸ್ಥೆ ಮಾಡಲಾಗುತ್ತದೆ. ಉಳಿದಂತೆ ಮೈದಾನಕ್ಕೆ ಮ್ಯಾಟ್‌ ಹಾಕಲಾಗುತ್ತಿದ್ದು, ಅಲ್ಲೂ ಕುರ್ಚಿ ವ್ಯವಸ್ಥೆ ಮಾಡುವ ಮೂಲಕ ಸುಮಾರು 1 ಲಕ್ಷ ಮಂದಿಗೆ ವ್ಯವಸ್ಥೆ ಕಲ್ಪಿಸುವ ನಿರೀಕ್ಷೆಯಲ್ಲಿ ಅಧಿಕಾರಿಗಳು ಇದ್ದಾರೆ.

3,000ಕ್ಕೂ ಅಧಿಕ ಪೊಲೀಸರ ನಿಯೋಜನೆ : ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಅಂದಾಜಿಗಿಂತ ಹೆಚ್ಚು ಮಂದಿ ಆಗಮಿಸಿದರೆ ಎಂಬ ಕಾರಣಕ್ಕೆ ಮುನ್ನೆಚ್ಚರಿಕಾ ಕ್ರಮವಾಗಿ ಕ್ರೀಡಾಂಗಣದ ಹೊರ ಭಾಗದಲ್ಲಿ ಟಿವಿ ಪರದೆಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ಜತೆಗೆ ಭದ್ರತೆಗಾಗಿ 3 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಕೆಎಸ್‌ಆರ್‌ಪಿ, ಗೃಹರಕ್ಷಕ ದಳ, ಸಂಚಾರಿ ಪೋಲಿಸ್ ಸಿಬ್ಬಂದಿ ಸೇರಿ 3 ಸಾವಿರಕ್ಕೂ ಹೆಚ್ಚು ಮಂದಿಯನ್ನು ಈಗಾಗಲೇ ಭದ್ರತೆಗೆ ನಿಯೋಜಿಸಲಾಗಿದೆ. ವಿಶೇಷ ಪೋಲಿಸ್ ಆಯುಕ್ತ ಸಲೀಂ, ಕೇಂದ್ರ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗುತ್ತಿದೆ. ಪ್ರತಿಯೊಬ್ಬರನ್ನೂ ಮೆಟಲ್‌ ಡಿಟೆಕ್ಟರ್‌ನಲ್ಲಿ ಪರಿಶೀಲನೆ ನಡೆಸಿದ ಬಳಿಕವೇ ಒಳಗೆ ಪ್ರವೇಶಿಸಲು ಅವಕಾಶ ನೀಡಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

lokesh

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

40 mins ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

9 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

19 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

23 hours ago