BREAKING NEWS

ಜೋಡೆತ್ತುಗಳ ಪ್ರಮಾಣ ವಚನ : ಕಂಠೀರವದಲ್ಲಿ ಸ್ಟೇಡಿಯಮ್‌ ನಲ್ಲಿ ಯಾರಿಗೆಲ್ಲಿ ಪ್ರವೇಶ?

ಬೆಂಗಳೂರು : ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ನೂತನ ಮುಖ್ಯಮಂತ್ರಿ ಹಾಗೂ ಸಚಿವರ ಪದಗ್ರಹಣ ಕಾರ್ಯಕ್ರಮ ಜರುಗುವ ಹಿನ್ನೆಲೆಯಲ್ಲಿ ಅತಿಗಣ್ಯರು, ಗಣ್ಯರು ಹಾಗೂ ಸಾರ್ವಜನಿಕರು ಕ್ರೀಡಾಂಗಣ ಪ್ರವೇಶಿಸುವ ಕುರಿತು ನಗರ ಪೊಲೀಸರು ಸೂಚನೆಗಳನ್ನು ನೀಡಿದ್ದಾರೆ.

ಕೆಂಪು ಪಾಸ್‌ ಇದ್ದವರು ಕಸ್ತೂರಾಬಾ ರಸ್ತೆ ಮೂಲಕ ಕ್ರೀಡಾಂಗಣದ ಗೇಟ್‌ ಸಂಖ್ಯೆ 1 ಮತ್ತು ರಾಜಾರಾಮ ಮೋಹನರಾಯ್‌ ರಸ್ತೆಯ ಗೇಟ್‌ ಸಂಖ್ಯೆ 5ರ ಮುಖಾಂತರ ವಾಹನಗಳ ಅಧಿಕೃತ ಪಾಸ್‌ನೊಂದಿಗೆ ವಾಹನ ಸಮೇತ ಪ್ರವೇಶ ಪಡೆಯಬಹುದು

ಹಸಿರು ಪಾಸ್‌ ಇದ್ದವರು ರಾಜಾರಾಮ ಮೋಹನರಾಯ್‌ ರಸ್ತೆಯ ಗೇಟ್‌ ಸಂಖ್ಯೆ 5ರ ಮೂಲಕ ಕಾಲ್ನಡಿಗೆಯಲ್ಲಿ ಮಾತ್ರ ಕ್ರೀಡಾಂಗಣ ಪ್ರವೇಶಿಸಬೇಕು. ವಾಹನಗಳಿಗೆ ಪ್ರವೇಶವಿಲ್ಲ

ಹಳದಿ ಪಾಸ್‌ ಇದ್ದವರು ಸಿದ್ದಲಿಂಗಯ್ಯ ವೃತ್ತದ ಗೇಟ್‌ ಸಂಖ್ಯೆ 2ರ ಮೂಲಕ ಕಾಲ್ನಡಿಗೆಯಲ್ಲಿ ಮಾತ್ರ ಪ್ರವೇಶಿಸಬೇಕು. ವಾಹನಗಳಿಗೆ ಪ್ರವೇಶವಿಲ್ಲ

ಯಾವುದೇ ಪಾಸ್‌ ಇಲ್ಲದವರು ವಿಠಲ್‌ ಮಲ್ಯ ರಸ್ತೆಯ ಗೇಟ್‌ ಸಂಖ್ಯೆ 3 ಮತ್ತು 4ರ ಮುಖಾಂತರ ಕಾಲ್ನಡಿಗೆಯಲ್ಲಿ ಕ್ರೀಡಾಂಗಣ ಪ್ರವೇಶಿಸಬೇಕು. ಸಾರ್ವಜನಿಕರು ಕಾರ್ಯಕ್ರಮದ ವೇಳೆ ಸಂಯಮದಿಂದ ಇರಬೇಕು. ಸ್ಥಳದಲ್ಲಿ ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿ ನೀಡುವ ಸೂಚನೆಗಳನ್ನು ಪಾಲಿಸಬೇಕು.

1 ಲಕ್ಷಕ್ಕೂ ಹೆಚ್ಚು ಜನ ಭಾಗಿ : ಕ್ರೀಡಾಂಗಣದಲ್ಲಿ ಸುಮಾರು 35000 ಸೀಟುಗಳ ವ್ಯವಸ್ಥೆ ಇದೆ. ಇದರಲ್ಲಿ ಗಣ್ಯರು, ಜನಪ್ರತಿನಿಧಿಗಳು ಹಾಗೂ ಆಹ್ವಾನಿತರಿಗೆ ಅವಕಾಶ ನೀಡಿ ಉಳಿದ ಜಾಗದಲ್ಲಿ ಸಾರ್ವಜನಿಕರು ಕೂರಲು ವ್ಯವಸ್ಥೆ ಮಾಡಲಾಗುತ್ತದೆ. ಉಳಿದಂತೆ ಮೈದಾನಕ್ಕೆ ಮ್ಯಾಟ್‌ ಹಾಕಲಾಗುತ್ತಿದ್ದು, ಅಲ್ಲೂ ಕುರ್ಚಿ ವ್ಯವಸ್ಥೆ ಮಾಡುವ ಮೂಲಕ ಸುಮಾರು 1 ಲಕ್ಷ ಮಂದಿಗೆ ವ್ಯವಸ್ಥೆ ಕಲ್ಪಿಸುವ ನಿರೀಕ್ಷೆಯಲ್ಲಿ ಅಧಿಕಾರಿಗಳು ಇದ್ದಾರೆ.

3,000ಕ್ಕೂ ಅಧಿಕ ಪೊಲೀಸರ ನಿಯೋಜನೆ : ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಅಂದಾಜಿಗಿಂತ ಹೆಚ್ಚು ಮಂದಿ ಆಗಮಿಸಿದರೆ ಎಂಬ ಕಾರಣಕ್ಕೆ ಮುನ್ನೆಚ್ಚರಿಕಾ ಕ್ರಮವಾಗಿ ಕ್ರೀಡಾಂಗಣದ ಹೊರ ಭಾಗದಲ್ಲಿ ಟಿವಿ ಪರದೆಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ಜತೆಗೆ ಭದ್ರತೆಗಾಗಿ 3 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಕೆಎಸ್‌ಆರ್‌ಪಿ, ಗೃಹರಕ್ಷಕ ದಳ, ಸಂಚಾರಿ ಪೋಲಿಸ್ ಸಿಬ್ಬಂದಿ ಸೇರಿ 3 ಸಾವಿರಕ್ಕೂ ಹೆಚ್ಚು ಮಂದಿಯನ್ನು ಈಗಾಗಲೇ ಭದ್ರತೆಗೆ ನಿಯೋಜಿಸಲಾಗಿದೆ. ವಿಶೇಷ ಪೋಲಿಸ್ ಆಯುಕ್ತ ಸಲೀಂ, ಕೇಂದ್ರ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗುತ್ತಿದೆ. ಪ್ರತಿಯೊಬ್ಬರನ್ನೂ ಮೆಟಲ್‌ ಡಿಟೆಕ್ಟರ್‌ನಲ್ಲಿ ಪರಿಶೀಲನೆ ನಡೆಸಿದ ಬಳಿಕವೇ ಒಳಗೆ ಪ್ರವೇಶಿಸಲು ಅವಕಾಶ ನೀಡಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

lokesh

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

5 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

5 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

5 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

5 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

5 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

5 hours ago