ತೆಲಂಗಾಣ : ತೆಲಂಗಾಣದಲ್ಲಿ ಚುನಾವಣಾ ಪ್ರಚಾರದ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಾಳ್ಮೆ ಕಳೆದುಕೊಂಡಿದ್ದಾರೆ.
ಚುನಾವಣಾ ಪ್ರಚಾರ ಸಭೆಯ ವೇಳೆ ಕಾರ್ಯಕರ್ತರು ವಿವಿಧ ಘೋಷಣೆಗಳನ್ನು ಕೂಗಲು ಆರಂಭಿಸಿದ್ದಾರೆ ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಗರಂ ಆಗಿದ್ದು, ಸುಮ್ಮನೆ ಕುಳಿತುಕೊಳ್ಳಿ ಇಲ್ಲವಾದರೆ ಹೊರ ಹೋಗಿ ನಿಮ್ಮ ಬಾಯಿಗೆ ಏನು ಬರುತ್ತದೆ ಅದನ್ನು ಬೊಗಳುವುದಲ್ಲ ಎಂದು ವಾಗ್ದಾಳಿ ನಡೆಸಿದ್ದಲ್ಲದೆ, ಸಭಿಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ವಿಡಿಯೋವನ್ನು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹಂಚಿಕೊಂಡಿದ್ದು, ಕಾಂಗ್ರೆಸ್ ಅಧ್ಯಕ್ಷರು ತಮ್ಮ ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ. ಪಕ್ಷದ ಮುಖ್ಯಸ್ಥರಾಗಿದ್ದರೂ ಕಾಂಗ್ರೆಸ್ ಕಾರ್ಯಕರ್ತರು ಅವರಿಗೆ ಸಲ್ಲಬೇಕಾದ ಗೌರವವನ್ನು ನೀಡುತ್ತಿಲ್ಲ ಸಭೆಯಲ್ಲಿ ಖರ್ಗೆಯವರಿಗೆ ಅವಮಾನವಾಗಿದೆ ಎಂದು ಬರೆದುಕೊಂಡಿದ್ದಾರೆ.
ರಾಜಸ್ಥಾನ ಚುನಾವಣ ಪ್ರಚಾರದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಭಾಗಿಯಾಗಿರುವ ಫೋಟೋಗಳು ಕಣ್ಮರೆಯಾಗಿವೆ. ಗೆಹ್ಲೋಟ್ ಹಾಗೂ ರಾಹುಲ್ ಗಾಂಧಿಯವರ ಫೋಟೊಗಳನ್ನು ಹೆಚ್ಚಾಗಿ ಪೋಸ್ಟ್ ಮಾಡಿದ್ದಾರೆ. ಖರ್ಗೆಯವರು ದಲಿತ ಎಂಬ ಕಾರಣಕ್ಕೆ ಕಾಂಗ್ರೆಸ್ ಅವರನ್ನು ನಿಂದಿಸುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹಂಚಿಕೊಂಡಿವ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ಅಮಿತ್ ಮಾಳವಿಯ ಹಂಚಿಕೊಂಡಿರುವ ವಿಡಿಯೋದಲ್ಲಿ ವೇದಿಕೆಯಲ್ಲಿ ಮಲಿಲಿಕಾರ್ಜುನ ಖರ್ಗೆ ಮಾತನಾಡಲು ಆರಂಭಿಸುತ್ತಿದ್ದಂತೆ, ಕಾರ್ಯಕರ್ತರು ಕೆಲ ಗೋಷಣೆಗಳನ್ನು ಕೂಗಿದ್ದಾರೆ. ಇದರಿಂದ ಖರ್ಗೆಯವರು ಸಿಟ್ಟಿಗೆದ್ದಿದ್ದಾರೆ. ಕೆಲಹೊತ್ತು ಇದನ್ನು ಸಹಿಸಿಕೊಂಡ ಖರ್ಗೆ ನೇರವಾಗಿ ಕಾರ್ಯಕರ್ತರು ಹಾಗೂ ಸ್ಥಳೀಯ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ.
ಸುಮ್ಮನೆ ಕುಳಿತುಕೊಳ್ಳಿ. ನಿಮಗೆ ಕೇಳಲು ಆಗುತ್ತಿಲ್ಲ ಎಂದಾದರೆ ಹೊರನಡೆಯಿರಿ. ನಿಮಗೆ ನ್ಯಾಷನಲ್ ನಾಯಕನೊಬ್ಬ ಮಾತನಾಡುತ್ತಿರುವುದು ಕಾಣಿಸುತ್ತಿಲ್ಲವೇ ? ನಿಮ್ಮ ಬಾಯಿಗೆ ಏನು ಬರುತ್ತದೆ ಅದನ್ನು ಬೊಗಳುವುದಲ್ಲ ಕೇಳುವುದಾದರೆ ಕೇಳಿ ಇಲ್ಲಾ ಜಾಗ ಖಾಲಿ ಮಾಡಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್ ಮಂಡನೆಯ…
ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…
ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…