BREAKING NEWS

ಸುಪ್ರೀಂ ಕೋರ್ಟ್‌ ಮುಂದೆ ವಾಸ್ತವಾಂಶ ಇಟ್ಟರೂ ನ್ಯಾಯ ಸಿಗುತ್ತಿಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಸುಪ್ರೀಂ ಕೋರ್ಟ್ ಮುಂದೆ ವಾಸ್ತವಾಂಶ ಇಟ್ಟಿದ್ದೇವೆ. ಆದರೂ ನಮಗೆ ನ್ಯಾಯ ಸಿಕ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.

ಅಕ್ಟೋಬರ್ 15ರ ವರೆಗೆ ನಿತ್ಯ 3,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಈ ಸಂಬಂಧ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ನಾವು ನಮ್ಮ ಎಲ್ಲ ವಾಸ್ತವ ಅಂಶಗಳನ್ನ ಸಿಡಬ್ಲ್ಯೂಆರ್‌ಸಿ, ಸಿಡಬ್ಲ್ಯೂಎಂಎ ಹಾಗೂ ಸುಪ್ರೀಂ ಕೋರ್ಟ್ ಮುಂದಿಟ್ಟಿದ್ದೇವೆ. ಆದರೂ ನಮಗೆ ನ್ಯಾಯ ಸಿಗುತ್ತಿಲ್ಲ. ಇಂದಿನ ಸಭೆಯ ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಇದೆ. ಆದೇಶದ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡುತ್ತೇವೆ. ಈ ಆದೇಶವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಬಹುದಾ? ಅಂತ ಕಾನೂನು ತಜ್ಞರ ಜೊತೆ ಮಾತನಾಡಿದ್ದೇನೆ. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ಸಭೆಯನ್ನೂ ಕರೆದಿದ್ದೇನೆ. ಅವರೊಂದಿಗೂ ಮಾತನಾಡಿ ಮುಂದೇನು ಮಾಡಬೇಕು ಅನ್ನೋ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

ಇದೇ ವೇಳೆ ಸಿಂಗಾಪುರಕ್ಕೆ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಕೇಂದ್ರ ಸರ್ಕಾರ ಅಕ್ಕಿ ಇಟ್ಟುಕೊಂಡು ಕೊಡಲಿಲ್ಲ. ನಾವು ದುಡ್ಡು ಕೊಡ್ತೀವಿ, ಅಕ್ಕಿ ಕೊಡಿ ಅಂದರೂ ಕೇಂದ್ರ ಸರ್ಕಾರ ಕೊಡಲಿಲ್ಲ. ಅಕ್ಕಿ ವಿಚಾರದಲ್ಲಿ ರಾಜಕೀಯ ಮಾಡ್ತಿದೆ. ಬಡವರ ಕಾರ್ಯಕ್ರಮಕ್ಕೆ ಅಕ್ಕಿ ಕೊಡಲು ಬಿಜೆಪಿಗೆ ಆಸಕ್ತಿ ಇಲ್ಲ ಎಂದು ಅಸಮಾಧಾನ ಹೊರಹಾಕಿದರು.

 

lokesh

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago