ಬೆಂಗಳೂರು : ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಸುಪ್ರೀಂ ಕೋರ್ಟ್ ಮುಂದೆ ವಾಸ್ತವಾಂಶ ಇಟ್ಟಿದ್ದೇವೆ. ಆದರೂ ನಮಗೆ ನ್ಯಾಯ ಸಿಕ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.
ಅಕ್ಟೋಬರ್ 15ರ ವರೆಗೆ ನಿತ್ಯ 3,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಈ ಸಂಬಂಧ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ನಾವು ನಮ್ಮ ಎಲ್ಲ ವಾಸ್ತವ ಅಂಶಗಳನ್ನ ಸಿಡಬ್ಲ್ಯೂಆರ್ಸಿ, ಸಿಡಬ್ಲ್ಯೂಎಂಎ ಹಾಗೂ ಸುಪ್ರೀಂ ಕೋರ್ಟ್ ಮುಂದಿಟ್ಟಿದ್ದೇವೆ. ಆದರೂ ನಮಗೆ ನ್ಯಾಯ ಸಿಗುತ್ತಿಲ್ಲ. ಇಂದಿನ ಸಭೆಯ ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಇದೆ. ಆದೇಶದ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡುತ್ತೇವೆ. ಈ ಆದೇಶವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಬಹುದಾ? ಅಂತ ಕಾನೂನು ತಜ್ಞರ ಜೊತೆ ಮಾತನಾಡಿದ್ದೇನೆ. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ಸಭೆಯನ್ನೂ ಕರೆದಿದ್ದೇನೆ. ಅವರೊಂದಿಗೂ ಮಾತನಾಡಿ ಮುಂದೇನು ಮಾಡಬೇಕು ಅನ್ನೋ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.
ಇದೇ ವೇಳೆ ಸಿಂಗಾಪುರಕ್ಕೆ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಕೇಂದ್ರ ಸರ್ಕಾರ ಅಕ್ಕಿ ಇಟ್ಟುಕೊಂಡು ಕೊಡಲಿಲ್ಲ. ನಾವು ದುಡ್ಡು ಕೊಡ್ತೀವಿ, ಅಕ್ಕಿ ಕೊಡಿ ಅಂದರೂ ಕೇಂದ್ರ ಸರ್ಕಾರ ಕೊಡಲಿಲ್ಲ. ಅಕ್ಕಿ ವಿಚಾರದಲ್ಲಿ ರಾಜಕೀಯ ಮಾಡ್ತಿದೆ. ಬಡವರ ಕಾರ್ಯಕ್ರಮಕ್ಕೆ ಅಕ್ಕಿ ಕೊಡಲು ಬಿಜೆಪಿಗೆ ಆಸಕ್ತಿ ಇಲ್ಲ ಎಂದು ಅಸಮಾಧಾನ ಹೊರಹಾಕಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…