BREAKING NEWS

ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಪೋಟ ಪ್ರಕರಣ : ಮಾಸ್ಟರ್​ಮೈಂಡ್​ನನ್ನು ಹತ್ಯೆಗೈದ ತಾಲಿಬಾನ್

ನವದೆಹಲಿ : 2021ರಲ್ಲಿ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹಿಂದಿರುವ ವ್ಯಕ್ತಿಯನ್ನು ತಾಲಿಬಾನ್ ಹತ್ಯೆಗೈದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ಅಮೆರಿಕ ಮಾಧ್ಯಮಗಳು ವರದಿ ಮಾಡಿವೆ, ಈ ಕೃತ್ಯಕ್ಕೆ ಕಾರಣಕರ್ತರಾಗಿದ್ದ ಐಸಿಸ್ ಉಗ್ರನನ್ನು ತಾಲಿಬಾನ್ ಹತ್ಯೆ ಮಾಡಿದೆ ಎನ್ನುವ ಮಾಹಿತಿ ಸಿಕ್ಕಿದೆ. ಅಮೆರಿಕ ಮತ್ತು ಇತರೆ ದೇಶಗಳು ಸಾವಿರಾರು ಜನರನ್ನು ತೆರವುಗೊಳಿಸುವ ಕಾರ್ಯಾಚರಣೆಗಳಲ್ಲಿ ತೊಡಗಿಕೊಮಡಿರುವ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿ ಹಮೀದ್ ಕರ್ಝಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗೆ ಭಾರಿ ಸ್ಫೋಟ ಸಂಭವಿಸಿತ್ತು, ಅಮೆರಿಕ ಸೇನೆಯು ಇದನ್ನು ದೃಢಪಡಿಸಿತ್ತು. 13ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

ಅಫ್ಘಾನಿಸ್ತಾನ ತಾಲಿಬಾನಿಗಳ ವಶವಾದ ಬಳಿಕ ದೇಶವನ್ನು ತೊರೆಯಲು ಸಾವಿರಾರು ಜನರು ಕಳೆದ 12 ದಿನಗಳಿಂದಲೂ ಠಿಕಾಣಿ ಹೂಡಿರುವ ವಿಮಾನ ನಿಲ್ದಾಣದ ಮುಖ್ಯ ಅಬ್ಬೆ ಗೇಟ್​ನಲ್ಲಿ ಸ್ಫೋಟ ಸಂಭವಿಸಿತ್ತು.

ಕಾಬೂಲ್ ವಿಮಾನ ನಿಲ್ದಾಣ ಅತ್ಯಂತ ಅಪಾಯದಲ್ಲಿದ್ದು, ಉಗ್ರ ದಾಳಿ ಬೆದರಿಕೆ ಇರುವುದರಿಂದ ಭದ್ರತಾ ದೃಷ್ಟಿಯಿಂದ ಅಫ್ಗಾನಿಸ್ತಾದ ಕಾಬೂಲ್ನಲ್ಲಿರುವ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಬಾರದು ಎಂದು ಬ್ರಿಟನ್ ಸರ್ಕಾರ ತನ್ನ ನಾಗರಿಕರಿಗೆ ಸೂಚನೆ ನೀಡಿತ್ತು.

ವಿದೇಶಿ, ಕಾಮನ್ವೆಲ್ತ್ ಮತ್ತು ಅಭಿವೃದ್ಧಿ ಕಚೇರಿ (ಎಫ್ಸಿಡಿಒ) ಅಫ್ಘಾನಿಸ್ತಾನದಲ್ಲಿ ಪರಿಸ್ಥಿತಿ ಅತಂತ್ರವಾಗಿದೆ ಎಂದು ಹೇಳಿದ್ದು, ಬ್ರಿಟಿಷ್ ನಾಗರಿಕರು ಮತ್ತು ಇತರ ಸ್ಥಳಾಂತರಗೊಂಡವರು ಸುರಕ್ಷಿತ ಸ್ಥಳಗಳಿಗೆ ತೆರಳಿ, ಮುಂದಿನ ಸೂಚನೆ ಬರುವವರೆಗೆ ಅಲ್ಲಿಯೇ ಇರಿ ಎಂದು ಸೂಚನೆ ನೀಡಿತ್ತು.

lokesh

Recent Posts

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

58 mins ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

1 hour ago

ಭಾರತೀನಗರ: ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…

1 hour ago

ದಕ್ಷ ಮತ್ತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ತಲ್ಲಣ

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…

1 hour ago

ಇದು ಉದ್ಯಾನವಲ್ಲ: ಅನೈತಿಕ ಚಟುವಟಿಕೆಗಳ ತಾಣ

ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…

1 hour ago