ನವದೆಹಲಿ : 2021ರಲ್ಲಿ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹಿಂದಿರುವ ವ್ಯಕ್ತಿಯನ್ನು ತಾಲಿಬಾನ್ ಹತ್ಯೆಗೈದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ಅಮೆರಿಕ ಮಾಧ್ಯಮಗಳು ವರದಿ ಮಾಡಿವೆ, ಈ ಕೃತ್ಯಕ್ಕೆ ಕಾರಣಕರ್ತರಾಗಿದ್ದ ಐಸಿಸ್ ಉಗ್ರನನ್ನು ತಾಲಿಬಾನ್ ಹತ್ಯೆ ಮಾಡಿದೆ ಎನ್ನುವ ಮಾಹಿತಿ ಸಿಕ್ಕಿದೆ. ಅಮೆರಿಕ ಮತ್ತು ಇತರೆ ದೇಶಗಳು ಸಾವಿರಾರು ಜನರನ್ನು ತೆರವುಗೊಳಿಸುವ ಕಾರ್ಯಾಚರಣೆಗಳಲ್ಲಿ ತೊಡಗಿಕೊಮಡಿರುವ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿ ಹಮೀದ್ ಕರ್ಝಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗೆ ಭಾರಿ ಸ್ಫೋಟ ಸಂಭವಿಸಿತ್ತು, ಅಮೆರಿಕ ಸೇನೆಯು ಇದನ್ನು ದೃಢಪಡಿಸಿತ್ತು. 13ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.
ಅಫ್ಘಾನಿಸ್ತಾನ ತಾಲಿಬಾನಿಗಳ ವಶವಾದ ಬಳಿಕ ದೇಶವನ್ನು ತೊರೆಯಲು ಸಾವಿರಾರು ಜನರು ಕಳೆದ 12 ದಿನಗಳಿಂದಲೂ ಠಿಕಾಣಿ ಹೂಡಿರುವ ವಿಮಾನ ನಿಲ್ದಾಣದ ಮುಖ್ಯ ಅಬ್ಬೆ ಗೇಟ್ನಲ್ಲಿ ಸ್ಫೋಟ ಸಂಭವಿಸಿತ್ತು.
ಕಾಬೂಲ್ ವಿಮಾನ ನಿಲ್ದಾಣ ಅತ್ಯಂತ ಅಪಾಯದಲ್ಲಿದ್ದು, ಉಗ್ರ ದಾಳಿ ಬೆದರಿಕೆ ಇರುವುದರಿಂದ ಭದ್ರತಾ ದೃಷ್ಟಿಯಿಂದ ಅಫ್ಗಾನಿಸ್ತಾದ ಕಾಬೂಲ್ನಲ್ಲಿರುವ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಬಾರದು ಎಂದು ಬ್ರಿಟನ್ ಸರ್ಕಾರ ತನ್ನ ನಾಗರಿಕರಿಗೆ ಸೂಚನೆ ನೀಡಿತ್ತು.
ವಿದೇಶಿ, ಕಾಮನ್ವೆಲ್ತ್ ಮತ್ತು ಅಭಿವೃದ್ಧಿ ಕಚೇರಿ (ಎಫ್ಸಿಡಿಒ) ಅಫ್ಘಾನಿಸ್ತಾನದಲ್ಲಿ ಪರಿಸ್ಥಿತಿ ಅತಂತ್ರವಾಗಿದೆ ಎಂದು ಹೇಳಿದ್ದು, ಬ್ರಿಟಿಷ್ ನಾಗರಿಕರು ಮತ್ತು ಇತರ ಸ್ಥಳಾಂತರಗೊಂಡವರು ಸುರಕ್ಷಿತ ಸ್ಥಳಗಳಿಗೆ ತೆರಳಿ, ಮುಂದಿನ ಸೂಚನೆ ಬರುವವರೆಗೆ ಅಲ್ಲಿಯೇ ಇರಿ ಎಂದು ಸೂಚನೆ ನೀಡಿತ್ತು.
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…