ನವದೆಹಲಿ : 2021ರಲ್ಲಿ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹಿಂದಿರುವ ವ್ಯಕ್ತಿಯನ್ನು ತಾಲಿಬಾನ್ ಹತ್ಯೆಗೈದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ಅಮೆರಿಕ ಮಾಧ್ಯಮಗಳು ವರದಿ ಮಾಡಿವೆ, ಈ ಕೃತ್ಯಕ್ಕೆ ಕಾರಣಕರ್ತರಾಗಿದ್ದ ಐಸಿಸ್ ಉಗ್ರನನ್ನು ತಾಲಿಬಾನ್ ಹತ್ಯೆ ಮಾಡಿದೆ ಎನ್ನುವ ಮಾಹಿತಿ ಸಿಕ್ಕಿದೆ. ಅಮೆರಿಕ ಮತ್ತು ಇತರೆ ದೇಶಗಳು ಸಾವಿರಾರು ಜನರನ್ನು ತೆರವುಗೊಳಿಸುವ ಕಾರ್ಯಾಚರಣೆಗಳಲ್ಲಿ ತೊಡಗಿಕೊಮಡಿರುವ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿ ಹಮೀದ್ ಕರ್ಝಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗೆ ಭಾರಿ ಸ್ಫೋಟ ಸಂಭವಿಸಿತ್ತು, ಅಮೆರಿಕ ಸೇನೆಯು ಇದನ್ನು ದೃಢಪಡಿಸಿತ್ತು. 13ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.
ಅಫ್ಘಾನಿಸ್ತಾನ ತಾಲಿಬಾನಿಗಳ ವಶವಾದ ಬಳಿಕ ದೇಶವನ್ನು ತೊರೆಯಲು ಸಾವಿರಾರು ಜನರು ಕಳೆದ 12 ದಿನಗಳಿಂದಲೂ ಠಿಕಾಣಿ ಹೂಡಿರುವ ವಿಮಾನ ನಿಲ್ದಾಣದ ಮುಖ್ಯ ಅಬ್ಬೆ ಗೇಟ್ನಲ್ಲಿ ಸ್ಫೋಟ ಸಂಭವಿಸಿತ್ತು.
ಕಾಬೂಲ್ ವಿಮಾನ ನಿಲ್ದಾಣ ಅತ್ಯಂತ ಅಪಾಯದಲ್ಲಿದ್ದು, ಉಗ್ರ ದಾಳಿ ಬೆದರಿಕೆ ಇರುವುದರಿಂದ ಭದ್ರತಾ ದೃಷ್ಟಿಯಿಂದ ಅಫ್ಗಾನಿಸ್ತಾದ ಕಾಬೂಲ್ನಲ್ಲಿರುವ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಬಾರದು ಎಂದು ಬ್ರಿಟನ್ ಸರ್ಕಾರ ತನ್ನ ನಾಗರಿಕರಿಗೆ ಸೂಚನೆ ನೀಡಿತ್ತು.
ವಿದೇಶಿ, ಕಾಮನ್ವೆಲ್ತ್ ಮತ್ತು ಅಭಿವೃದ್ಧಿ ಕಚೇರಿ (ಎಫ್ಸಿಡಿಒ) ಅಫ್ಘಾನಿಸ್ತಾನದಲ್ಲಿ ಪರಿಸ್ಥಿತಿ ಅತಂತ್ರವಾಗಿದೆ ಎಂದು ಹೇಳಿದ್ದು, ಬ್ರಿಟಿಷ್ ನಾಗರಿಕರು ಮತ್ತು ಇತರ ಸ್ಥಳಾಂತರಗೊಂಡವರು ಸುರಕ್ಷಿತ ಸ್ಥಳಗಳಿಗೆ ತೆರಳಿ, ಮುಂದಿನ ಸೂಚನೆ ಬರುವವರೆಗೆ ಅಲ್ಲಿಯೇ ಇರಿ ಎಂದು ಸೂಚನೆ ನೀಡಿತ್ತು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…