ಬೆಂಗಳೂರು : ಪ್ರಚಾರದ ಕಣದಲ್ಲಿ ಕ್ಲೈಮ್ಯಾಕ್ಸ್ ಕ್ಯಾಂಪೇನ್ ಮಾಡುತ್ತಿರುವ ರಾಹುಲ್ ಗಾಂಧಿ ಗಾರ್ಡನ್ ಸಿಟಿ ಬೆಂಗಳೂರಿನಲ್ಲಿ ಭರ್ಜರಿ ಕ್ಯಾಂಪೇನ್ ಮಾಡಿದ್ದಾರೆ. ಕನ್ನಿಂಗ್ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಸವಿದು ಕಷ್ಟ-ಸುಖಗಳನ್ನು ಆಲಿಸಿದ್ದಾರೆ. ಬಳಿಕ ಬಿಎಂಟಿಸಿ ಬಸ್ನಲ್ಲಿ ಪ್ರಯಾಣ ಮಾಡಿ ಪ್ರಯಾಣಿಕರ ಕುಂದು ಕೊರತೆಗಳಿಗೆ ಕಿವಿಯಾದ್ರು. BMTC ಬಸ್ನಲ್ಲಿ ಪ್ರಯಾಣಿಕರ ಜೊತೆ ಚರ್ಚೆ ನಡೆಸಿದರು.
ಇನ್ನು ನಿನ್ನೆ ಪುಲಕೇಶಿನಗರ ಕ್ಷೇತ್ರದಲ್ಲಿ ರೋಡ್ ಶೋ ಮಾಡಿದರು. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಕಾಂಗ್ರೆಸ್ ಅಭ್ಯರ್ಥಿ ಎ.ಸಿ.ಶ್ರೀನಿವಾಸ್ ಪರ ಮತ ಬೇಡಿದರು. ಇದೇ ವೇಳೆ ಬಿಜೆಪಿ ದ್ವೇಷ ಹರಡುತ್ತೆ. ನಾವು ಪ್ರೀತಿಯಿಂದ ಜನರನ್ನು ಬೆಸೆಯುತ್ತೇವೆ. ದ್ವೇಷದ ಬಜಾರ್ನಲ್ಲಿ ಪ್ರೀತಿಯ ಅಂಗಡಿ ತೆರೆಯುತ್ತೇವೆ ಎಂದರು. ಬಿಜೆಪಿ ವಿರುದ್ಧ ಬೆಲೆ ಏರಿಕೆ, 40 ಪರ್ಸೆಂಟ್ ಅಸ್ತ್ರ ಝಳಪಿಸಿದರು. ಡೆಲಿವರಿ ಬಾಯ್ ಸ್ಕೂಟರ್ ಏರಿದ ರಾಹುಲ್, ಸಿಟಿ ಮಂದಿಯ ಗಮನ ಸೆಳೆದರು. ಏರ್ಲೈನ್ಸ್ ಹೊಟೇಲ್ನಿಂದ ಶಾಂಗ್ರಿಲಾ ಹೋಟೆಲ್ ವರೆಗೆ ಸ್ಕೂಟರ್ನಲ್ಲಿ ಸವಾರಿ ಮಾಡುತ್ತಾ ಸಂವಾದ ನಡೆಸಿದರು. ಇಲ್ಲಿಂದ ನೇರವಾಗಿ ಆನೇಕಲ್ಗೆ ಎಂಟ್ರಿಕೊಟ್ಟ ರಾಹುಲ್, ರೋಡ್ ಶೋ ನಡೆಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಹುಲ್ಗೆ ಸಾಥ್ ಕೊಟ್ಟರು. ರಾತ್ರಿ ಶಿವಾಜಿನಗರದಲ್ಲಿ ಕ್ಯಾಂಪೇನ್ ಮಾಡಿದ ಕೈ ನಾಯಕ ಬಿಜೆಪಿ ವಿರುದ್ಧ ಗುಡುಗಿದರು.
ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್ಗೆ ನಟಿ…
ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…
ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…
ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…
ಅಹಮದಾಬಾದ್ : ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…
ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…