ಬೆಂಗಳೂರು : ಪ್ರಚಾರದ ಕಣದಲ್ಲಿ ಕ್ಲೈಮ್ಯಾಕ್ಸ್ ಕ್ಯಾಂಪೇನ್ ಮಾಡುತ್ತಿರುವ ರಾಹುಲ್ ಗಾಂಧಿ ಗಾರ್ಡನ್ ಸಿಟಿ ಬೆಂಗಳೂರಿನಲ್ಲಿ ಭರ್ಜರಿ ಕ್ಯಾಂಪೇನ್ ಮಾಡಿದ್ದಾರೆ. ಕನ್ನಿಂಗ್ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಸವಿದು ಕಷ್ಟ-ಸುಖಗಳನ್ನು ಆಲಿಸಿದ್ದಾರೆ. ಬಳಿಕ ಬಿಎಂಟಿಸಿ ಬಸ್ನಲ್ಲಿ ಪ್ರಯಾಣ ಮಾಡಿ ಪ್ರಯಾಣಿಕರ ಕುಂದು ಕೊರತೆಗಳಿಗೆ ಕಿವಿಯಾದ್ರು. BMTC ಬಸ್ನಲ್ಲಿ ಪ್ರಯಾಣಿಕರ ಜೊತೆ ಚರ್ಚೆ ನಡೆಸಿದರು.
ಇನ್ನು ನಿನ್ನೆ ಪುಲಕೇಶಿನಗರ ಕ್ಷೇತ್ರದಲ್ಲಿ ರೋಡ್ ಶೋ ಮಾಡಿದರು. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಕಾಂಗ್ರೆಸ್ ಅಭ್ಯರ್ಥಿ ಎ.ಸಿ.ಶ್ರೀನಿವಾಸ್ ಪರ ಮತ ಬೇಡಿದರು. ಇದೇ ವೇಳೆ ಬಿಜೆಪಿ ದ್ವೇಷ ಹರಡುತ್ತೆ. ನಾವು ಪ್ರೀತಿಯಿಂದ ಜನರನ್ನು ಬೆಸೆಯುತ್ತೇವೆ. ದ್ವೇಷದ ಬಜಾರ್ನಲ್ಲಿ ಪ್ರೀತಿಯ ಅಂಗಡಿ ತೆರೆಯುತ್ತೇವೆ ಎಂದರು. ಬಿಜೆಪಿ ವಿರುದ್ಧ ಬೆಲೆ ಏರಿಕೆ, 40 ಪರ್ಸೆಂಟ್ ಅಸ್ತ್ರ ಝಳಪಿಸಿದರು. ಡೆಲಿವರಿ ಬಾಯ್ ಸ್ಕೂಟರ್ ಏರಿದ ರಾಹುಲ್, ಸಿಟಿ ಮಂದಿಯ ಗಮನ ಸೆಳೆದರು. ಏರ್ಲೈನ್ಸ್ ಹೊಟೇಲ್ನಿಂದ ಶಾಂಗ್ರಿಲಾ ಹೋಟೆಲ್ ವರೆಗೆ ಸ್ಕೂಟರ್ನಲ್ಲಿ ಸವಾರಿ ಮಾಡುತ್ತಾ ಸಂವಾದ ನಡೆಸಿದರು. ಇಲ್ಲಿಂದ ನೇರವಾಗಿ ಆನೇಕಲ್ಗೆ ಎಂಟ್ರಿಕೊಟ್ಟ ರಾಹುಲ್, ರೋಡ್ ಶೋ ನಡೆಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಹುಲ್ಗೆ ಸಾಥ್ ಕೊಟ್ಟರು. ರಾತ್ರಿ ಶಿವಾಜಿನಗರದಲ್ಲಿ ಕ್ಯಾಂಪೇನ್ ಮಾಡಿದ ಕೈ ನಾಯಕ ಬಿಜೆಪಿ ವಿರುದ್ಧ ಗುಡುಗಿದರು.
ಮಡಿಕೇರಿ: ರಾಜ್ಯದಲ್ಲಿ ಮಳೆಯ ನಡುವೆಯೇ ವಾಯು ಗುಣಮಟ್ಟದಲ್ಲಿ ಬದಲಾವಣೆ ಕಂಡಿದ್ದು, ಬೆಂಗಳೂರಿನಲ್ಲಿ ಇಂದು 75 AQI ನೊಂದಿಗೆ ಸಾಧಾರಣ ಗಾಳಿ…
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ. ಚನ್ನೈನ ತಮ್ಮ ನಿವಾಸದಲ್ಲಿ…
ಇಂದೋರ್ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಎಸಿ ಕೋಚ್ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…
ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…
ಚಂದ್ರಶೇಖರ್ ಮೂರ್ತಿ.ಕೆ.ಎಸ್ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…
ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…