ಬೆಂಗಳೂರು : ಪ್ರಚಾರದ ಕಣದಲ್ಲಿ ಕ್ಲೈಮ್ಯಾಕ್ಸ್ ಕ್ಯಾಂಪೇನ್ ಮಾಡುತ್ತಿರುವ ರಾಹುಲ್ ಗಾಂಧಿ ಗಾರ್ಡನ್ ಸಿಟಿ ಬೆಂಗಳೂರಿನಲ್ಲಿ ಭರ್ಜರಿ ಕ್ಯಾಂಪೇನ್ ಮಾಡಿದ್ದಾರೆ. ಕನ್ನಿಂಗ್ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಸವಿದು ಕಷ್ಟ-ಸುಖಗಳನ್ನು ಆಲಿಸಿದ್ದಾರೆ. ಬಳಿಕ ಬಿಎಂಟಿಸಿ ಬಸ್ನಲ್ಲಿ ಪ್ರಯಾಣ ಮಾಡಿ ಪ್ರಯಾಣಿಕರ ಕುಂದು ಕೊರತೆಗಳಿಗೆ ಕಿವಿಯಾದ್ರು. BMTC ಬಸ್ನಲ್ಲಿ ಪ್ರಯಾಣಿಕರ ಜೊತೆ ಚರ್ಚೆ ನಡೆಸಿದರು.
ಇನ್ನು ನಿನ್ನೆ ಪುಲಕೇಶಿನಗರ ಕ್ಷೇತ್ರದಲ್ಲಿ ರೋಡ್ ಶೋ ಮಾಡಿದರು. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಕಾಂಗ್ರೆಸ್ ಅಭ್ಯರ್ಥಿ ಎ.ಸಿ.ಶ್ರೀನಿವಾಸ್ ಪರ ಮತ ಬೇಡಿದರು. ಇದೇ ವೇಳೆ ಬಿಜೆಪಿ ದ್ವೇಷ ಹರಡುತ್ತೆ. ನಾವು ಪ್ರೀತಿಯಿಂದ ಜನರನ್ನು ಬೆಸೆಯುತ್ತೇವೆ. ದ್ವೇಷದ ಬಜಾರ್ನಲ್ಲಿ ಪ್ರೀತಿಯ ಅಂಗಡಿ ತೆರೆಯುತ್ತೇವೆ ಎಂದರು. ಬಿಜೆಪಿ ವಿರುದ್ಧ ಬೆಲೆ ಏರಿಕೆ, 40 ಪರ್ಸೆಂಟ್ ಅಸ್ತ್ರ ಝಳಪಿಸಿದರು. ಡೆಲಿವರಿ ಬಾಯ್ ಸ್ಕೂಟರ್ ಏರಿದ ರಾಹುಲ್, ಸಿಟಿ ಮಂದಿಯ ಗಮನ ಸೆಳೆದರು. ಏರ್ಲೈನ್ಸ್ ಹೊಟೇಲ್ನಿಂದ ಶಾಂಗ್ರಿಲಾ ಹೋಟೆಲ್ ವರೆಗೆ ಸ್ಕೂಟರ್ನಲ್ಲಿ ಸವಾರಿ ಮಾಡುತ್ತಾ ಸಂವಾದ ನಡೆಸಿದರು. ಇಲ್ಲಿಂದ ನೇರವಾಗಿ ಆನೇಕಲ್ಗೆ ಎಂಟ್ರಿಕೊಟ್ಟ ರಾಹುಲ್, ರೋಡ್ ಶೋ ನಡೆಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಹುಲ್ಗೆ ಸಾಥ್ ಕೊಟ್ಟರು. ರಾತ್ರಿ ಶಿವಾಜಿನಗರದಲ್ಲಿ ಕ್ಯಾಂಪೇನ್ ಮಾಡಿದ ಕೈ ನಾಯಕ ಬಿಜೆಪಿ ವಿರುದ್ಧ ಗುಡುಗಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…