BREAKING NEWS

ಕಮಲ್ ನಾಥ್ ಫೋನ್ ಹ್ಯಾಕ್: ತಲಾ 10 ಲಕ್ಷ ರೂ ಬೇಡಿಕೆಯಿಟ್ಟ ವಂಚಕರು.!

ಭೋಪಾಲ್: ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಅವರ ಮೊಬೈಲ್ ಫೋನ್ ನ್ನು ವಂಚಕರು ಹ್ಯಾಕ್ ಮಾಡಿದ್ದು, ಪಕ್ಷದ ನಾಲ್ಕು ನಾಯಕರಿಗೆ ಕರೆ ಮಾಡಿ ಅವರಿಂದ ತಲಾ 10 ಲಕ್ಷ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದಾರೆ.

ಸ್ವತಃ ಪಕ್ಷದ ವಕ್ತಾರರೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದು, ಕರೆ ಮಾಡಿ, ಮಾಲ್ವಿಯಾ ನಗರಕ್ಕೆ ಹಣ ಪಡೆಯಲು ಬಂದಿದ್ದ ಇಬ್ಬರನ್ನು ಕಾಂಗ್ರೆಸ್ ನ ಪದಾಧಿಕಾರಿಗಳು ಹಿಡಿದಿದ್ದಾರೆ, ಒಬ್ಬರೂ ಸಹ ಗುಜರಾತ್ ಮೂಲದವರೆಂದು ತಿಳಿದುಬಂದಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ.

ಮಧ್ಯಪ್ರದೇಶದ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಿಭಾಗದ ಕೆಕೆ ಮಿಶ್ರಾ ಈ ಬಗ್ಗೆ ಪಿಟಿಐ ಗೆ ಮಾಹಿತಿ ನೀಡಿದ್ದು, ಆರೋಪಿ ಕಮಲ್ ನಾಥ್ ಅವರ ಫೋನ್ ನ್ನು ಹ್ಯಾಕ್ ಮಾಡಿ, ಆ ಮೂಲಕ ಎಂಎಲ್ಎ ಸತೀಶ್ ಸಿಕರ್ವಾರ್, ಖಜಾಂಚಿ ಅಶೋಕ್ ಸಿಂಗ್, ಇಂದೋರ್ ಸಿಟಿ ಕಾಂಗ್ರೆಸ್ ಅಧ್ಯಕ್ಷ ಸುರ್ಜಿತ್ ಸಿಂಗ್ ಚಡ್ಡಾ ಹಾಗೂ ಮಾಜಿ ಖಜಾಂಚಿ ಗೋವಿಂದ್ ಗೋಯಲ್ ಅವರಿಗೆ ಕರೆ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ. ಅನುಮಾನಗೊಂಡ ಗೋಯಲ್, ವಿವರಗಳನ್ನು ಪದಾಧಿಕಾರಿಗಳಲ್ಲಿ ಪರಿಶೀಲಿಸಿದಾಗ ಈ ವಂಚನೆಯ ಕೃತ್ಯ ಬೆಳಕಿಗೆ ಬಂದಿದೆ.

andolanait

Recent Posts

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…

1 hour ago

ಓದುಗರ ಪತ್ರ: ಸರ್ಕಾರದ ನಡೆ ಖಂಡನೀಯ

ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…

2 hours ago

ಓದುಗರ ಪತ್ರ: ಐಪಿಎಲ್ ಬೇಕಿತ್ತೇ?

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…

2 hours ago

ಅಭಿವೃದ್ಧಿ ಮತ್ತು ಸಂರಕ್ಷಣೆಯ ನಡುವೆ ಸಮತೋಲನ ಅವಶ್ಯ

ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…

2 hours ago

ಮನುಷ್ಯನ ಮುಖವಾಡ ಕಳಚುವ ನಾಟಕ ‘ಪಾರ್ಟಿ’

ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…

2 hours ago

ತಣ್ಣಗೆ ಕಾಣುವ ಬಣ್ಣದ ಮಡಕೆ: ಆರೋಗ್ಯಕ್ಕೆ ಹಿತವೆ? ಅಹಿತವೇ?

‘ಆಂದೋಲನ’ ತಂಡದಿಂದ ರಿಯಾಲಿಟಿ ಚೆಕ್ ಮೈಸೂರು: ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ತಾಪ ಏರುತ್ತಿದ್ದಂತೆ, ದಾಹ ತಣಿಸಿಕೊಳ್ಳಲು ಜನರು…

2 hours ago