ಭೋಪಾಲ್: ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಅವರ ಮೊಬೈಲ್ ಫೋನ್ ನ್ನು ವಂಚಕರು ಹ್ಯಾಕ್ ಮಾಡಿದ್ದು, ಪಕ್ಷದ ನಾಲ್ಕು ನಾಯಕರಿಗೆ ಕರೆ ಮಾಡಿ ಅವರಿಂದ ತಲಾ 10 ಲಕ್ಷ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದಾರೆ.
ಸ್ವತಃ ಪಕ್ಷದ ವಕ್ತಾರರೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದು, ಕರೆ ಮಾಡಿ, ಮಾಲ್ವಿಯಾ ನಗರಕ್ಕೆ ಹಣ ಪಡೆಯಲು ಬಂದಿದ್ದ ಇಬ್ಬರನ್ನು ಕಾಂಗ್ರೆಸ್ ನ ಪದಾಧಿಕಾರಿಗಳು ಹಿಡಿದಿದ್ದಾರೆ, ಒಬ್ಬರೂ ಸಹ ಗುಜರಾತ್ ಮೂಲದವರೆಂದು ತಿಳಿದುಬಂದಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ.
ಮಧ್ಯಪ್ರದೇಶದ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಿಭಾಗದ ಕೆಕೆ ಮಿಶ್ರಾ ಈ ಬಗ್ಗೆ ಪಿಟಿಐ ಗೆ ಮಾಹಿತಿ ನೀಡಿದ್ದು, ಆರೋಪಿ ಕಮಲ್ ನಾಥ್ ಅವರ ಫೋನ್ ನ್ನು ಹ್ಯಾಕ್ ಮಾಡಿ, ಆ ಮೂಲಕ ಎಂಎಲ್ಎ ಸತೀಶ್ ಸಿಕರ್ವಾರ್, ಖಜಾಂಚಿ ಅಶೋಕ್ ಸಿಂಗ್, ಇಂದೋರ್ ಸಿಟಿ ಕಾಂಗ್ರೆಸ್ ಅಧ್ಯಕ್ಷ ಸುರ್ಜಿತ್ ಸಿಂಗ್ ಚಡ್ಡಾ ಹಾಗೂ ಮಾಜಿ ಖಜಾಂಚಿ ಗೋವಿಂದ್ ಗೋಯಲ್ ಅವರಿಗೆ ಕರೆ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ. ಅನುಮಾನಗೊಂಡ ಗೋಯಲ್, ವಿವರಗಳನ್ನು ಪದಾಧಿಕಾರಿಗಳಲ್ಲಿ ಪರಿಶೀಲಿಸಿದಾಗ ಈ ವಂಚನೆಯ ಕೃತ್ಯ ಬೆಳಕಿಗೆ ಬಂದಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…