BREAKING NEWS

ಕಮಲ್ ನಾಥ್ ಫೋನ್ ಹ್ಯಾಕ್: ತಲಾ 10 ಲಕ್ಷ ರೂ ಬೇಡಿಕೆಯಿಟ್ಟ ವಂಚಕರು.!

ಭೋಪಾಲ್: ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಅವರ ಮೊಬೈಲ್ ಫೋನ್ ನ್ನು ವಂಚಕರು ಹ್ಯಾಕ್ ಮಾಡಿದ್ದು, ಪಕ್ಷದ ನಾಲ್ಕು ನಾಯಕರಿಗೆ ಕರೆ ಮಾಡಿ ಅವರಿಂದ ತಲಾ 10 ಲಕ್ಷ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದಾರೆ.

ಸ್ವತಃ ಪಕ್ಷದ ವಕ್ತಾರರೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದು, ಕರೆ ಮಾಡಿ, ಮಾಲ್ವಿಯಾ ನಗರಕ್ಕೆ ಹಣ ಪಡೆಯಲು ಬಂದಿದ್ದ ಇಬ್ಬರನ್ನು ಕಾಂಗ್ರೆಸ್ ನ ಪದಾಧಿಕಾರಿಗಳು ಹಿಡಿದಿದ್ದಾರೆ, ಒಬ್ಬರೂ ಸಹ ಗುಜರಾತ್ ಮೂಲದವರೆಂದು ತಿಳಿದುಬಂದಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ.

ಮಧ್ಯಪ್ರದೇಶದ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಿಭಾಗದ ಕೆಕೆ ಮಿಶ್ರಾ ಈ ಬಗ್ಗೆ ಪಿಟಿಐ ಗೆ ಮಾಹಿತಿ ನೀಡಿದ್ದು, ಆರೋಪಿ ಕಮಲ್ ನಾಥ್ ಅವರ ಫೋನ್ ನ್ನು ಹ್ಯಾಕ್ ಮಾಡಿ, ಆ ಮೂಲಕ ಎಂಎಲ್ಎ ಸತೀಶ್ ಸಿಕರ್ವಾರ್, ಖಜಾಂಚಿ ಅಶೋಕ್ ಸಿಂಗ್, ಇಂದೋರ್ ಸಿಟಿ ಕಾಂಗ್ರೆಸ್ ಅಧ್ಯಕ್ಷ ಸುರ್ಜಿತ್ ಸಿಂಗ್ ಚಡ್ಡಾ ಹಾಗೂ ಮಾಜಿ ಖಜಾಂಚಿ ಗೋವಿಂದ್ ಗೋಯಲ್ ಅವರಿಗೆ ಕರೆ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ. ಅನುಮಾನಗೊಂಡ ಗೋಯಲ್, ವಿವರಗಳನ್ನು ಪದಾಧಿಕಾರಿಗಳಲ್ಲಿ ಪರಿಶೀಲಿಸಿದಾಗ ಈ ವಂಚನೆಯ ಕೃತ್ಯ ಬೆಳಕಿಗೆ ಬಂದಿದೆ.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

16 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

16 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

16 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

16 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

16 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

16 hours ago