BREAKING NEWS

ವಿಶ್ವದ ಎರಡನೇ ಕಿರಿಯ ವ್ಯಕ್ತಿಯಾಗಿ ಮೌಂಟ್‌ ಎವರೆಸ್ಟ್‌ ಏರಿದ ಭಾರತದ ಬಾಲಕಿ ಕಾಮ್ಯ!

ನವದೆಹಲಿ: ಮುಂಬೈನ 16 ವರ್ಷದ ಹರೆಯದ ಬಾಲಕಿ ಕಾಮ್ಯ ಕಾರ್ತಿಕೇಯನ್‌ ಅವರು ವಿಶ್ವದ ಅತ್ಯಂತ ಎತ್ತರದ ಶಿಖರ ಮೌಂಟ್‌ ಎವರೆಸ್ಟ್‌ನ್ನು ಏರುವ ಮೂಲಕ ವಿಶೇಷ ದಾಖಲೆ ಬರೆದಿದ್ದಾರೆ.

ಮುಂಬೈನ ನೇವಿ ಚಿಲ್ಡ್ರನ್‌ ಶಾಲೆಯಲ್ಲಿ 12ನೇ ತರಗತಿಯಲ್ಲಿ ಓದುತ್ತಿರುವ ಕಾಮ್ಯ ಸೋಮವಾರ ಮೌಂಟ್‌ ಎವರೆಸ್ಟ್‌ ಏರುವ ಮೂಲಕ ವಿನೂತನ ದಾಖಲೆ ಬರೆದಿದ್ದಾರೆ.

ಈ ಶಿಖರವನ್ನೇರಲು ಅವರು, ತಮ್ಮ ತಂದೆ ಕಮಾಂಡರ್‌ ಎಸ್‌. ಕಾರ್ತಿಕೇಯನ್‌ ಜತೆಗೂಡಿ ಈ ಕಾರ್ಯ ಸಾಧನೆ ಮಾಡಿದ್ದಾರೆ. ಇದೀಗ ಇವರ ಸಾಧನೆಯನ್ನು ಭಾರತೀಯ ನೌಕಾಪಡೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ.

ಕಾಮ್ಯ ಅವರು ಬಾಲ್ಯದಲ್ಲಿಯೇ ಟ್ರೆಕ್ಕಿಂಗ್‌ ಮೇಲೆ ಆಸಕ್ತಿ ಬೆಳೆಸಿಕೊಂಡಿದ್ದು, ತಂದೆಯೊಂದಿಗೆ ಕೂಡಿ ಟ್ರೆಕ್ಕಿಂಗ್‌ ಮಾಡಲು ತಾವು ಮೂರು ವರ್ಷದವಳಾಗಿದ್ದಾಗಲೇ ಆರಂಭಿಸಿದ್ದಾರೆ. ಬಳಿಕ ಇದು ಅಭ್ಯಾಸವಾಗಿ ಮೌಂಟ್‌ ಎವರೆಸ್ಟ್‌ ಏರುವ ವರೆಗೆ ಬೆಳೆದು ನಿಂತಿದೆ.

ಕಾಮ್ಯ ಅವರು ಈವರೆಗೆ ಹರ್‌-ಕಿ ಡನ್‌, ಕೇದಾರನಾಥ ಶಿಖರ್‌, ರೂಪ್‌ಕುಂಡ್‌ ಸರೋವರಗಳನ್ನು ಏರಿದ್ದರು. ಕಾಮ್ಯ ಅವರು ತಮ್ಮ 13ನೇ ವಯಸ್ಸಿನಲ್ಲಿಯೇ ಎವರೆಸ್ಟ್‌ ಬೇಸ್‌ ಕ್ಯಾಂಪ್‌ ಹತ್ತುವ ಮೂಲಕ ಇತಿಹಾಸ ನಿರ್ಮಿಸಿದ್ದರು.

ಈ ಸಾಧನೆ ಗುರುತಿಸಿದ್ದ ಪ್ರಧಾನಿ ನರೇಂದ್ರ ಮೋದಿ, ತಮ್ಮ ಮನ್‌ಕಿ ಬಾತ್‌ನಲ್ಲಿ ಈಕೆಯ ಸಾಧನೆಯನ್ನು ಕೊಂಡಾಡಿದ್ದರು. 2021ರಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯನ್ನು ಕಾಮ್ಯ ಅವರು ಮುಡಿಗೇರಿಸಿಕೊಂಡಿದ್ದಾರೆ.

https://x.com/indiannavy/status/1793529331685396758

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

1 hour ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

1 hour ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

1 hour ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

1 hour ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

3 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

4 hours ago