BREAKING NEWS

ವಿಶ್ವದ ಎರಡನೇ ಕಿರಿಯ ವ್ಯಕ್ತಿಯಾಗಿ ಮೌಂಟ್‌ ಎವರೆಸ್ಟ್‌ ಏರಿದ ಭಾರತದ ಬಾಲಕಿ ಕಾಮ್ಯ!

ನವದೆಹಲಿ: ಮುಂಬೈನ 16 ವರ್ಷದ ಹರೆಯದ ಬಾಲಕಿ ಕಾಮ್ಯ ಕಾರ್ತಿಕೇಯನ್‌ ಅವರು ವಿಶ್ವದ ಅತ್ಯಂತ ಎತ್ತರದ ಶಿಖರ ಮೌಂಟ್‌ ಎವರೆಸ್ಟ್‌ನ್ನು ಏರುವ ಮೂಲಕ ವಿಶೇಷ ದಾಖಲೆ ಬರೆದಿದ್ದಾರೆ.

ಮುಂಬೈನ ನೇವಿ ಚಿಲ್ಡ್ರನ್‌ ಶಾಲೆಯಲ್ಲಿ 12ನೇ ತರಗತಿಯಲ್ಲಿ ಓದುತ್ತಿರುವ ಕಾಮ್ಯ ಸೋಮವಾರ ಮೌಂಟ್‌ ಎವರೆಸ್ಟ್‌ ಏರುವ ಮೂಲಕ ವಿನೂತನ ದಾಖಲೆ ಬರೆದಿದ್ದಾರೆ.

ಈ ಶಿಖರವನ್ನೇರಲು ಅವರು, ತಮ್ಮ ತಂದೆ ಕಮಾಂಡರ್‌ ಎಸ್‌. ಕಾರ್ತಿಕೇಯನ್‌ ಜತೆಗೂಡಿ ಈ ಕಾರ್ಯ ಸಾಧನೆ ಮಾಡಿದ್ದಾರೆ. ಇದೀಗ ಇವರ ಸಾಧನೆಯನ್ನು ಭಾರತೀಯ ನೌಕಾಪಡೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ.

ಕಾಮ್ಯ ಅವರು ಬಾಲ್ಯದಲ್ಲಿಯೇ ಟ್ರೆಕ್ಕಿಂಗ್‌ ಮೇಲೆ ಆಸಕ್ತಿ ಬೆಳೆಸಿಕೊಂಡಿದ್ದು, ತಂದೆಯೊಂದಿಗೆ ಕೂಡಿ ಟ್ರೆಕ್ಕಿಂಗ್‌ ಮಾಡಲು ತಾವು ಮೂರು ವರ್ಷದವಳಾಗಿದ್ದಾಗಲೇ ಆರಂಭಿಸಿದ್ದಾರೆ. ಬಳಿಕ ಇದು ಅಭ್ಯಾಸವಾಗಿ ಮೌಂಟ್‌ ಎವರೆಸ್ಟ್‌ ಏರುವ ವರೆಗೆ ಬೆಳೆದು ನಿಂತಿದೆ.

ಕಾಮ್ಯ ಅವರು ಈವರೆಗೆ ಹರ್‌-ಕಿ ಡನ್‌, ಕೇದಾರನಾಥ ಶಿಖರ್‌, ರೂಪ್‌ಕುಂಡ್‌ ಸರೋವರಗಳನ್ನು ಏರಿದ್ದರು. ಕಾಮ್ಯ ಅವರು ತಮ್ಮ 13ನೇ ವಯಸ್ಸಿನಲ್ಲಿಯೇ ಎವರೆಸ್ಟ್‌ ಬೇಸ್‌ ಕ್ಯಾಂಪ್‌ ಹತ್ತುವ ಮೂಲಕ ಇತಿಹಾಸ ನಿರ್ಮಿಸಿದ್ದರು.

ಈ ಸಾಧನೆ ಗುರುತಿಸಿದ್ದ ಪ್ರಧಾನಿ ನರೇಂದ್ರ ಮೋದಿ, ತಮ್ಮ ಮನ್‌ಕಿ ಬಾತ್‌ನಲ್ಲಿ ಈಕೆಯ ಸಾಧನೆಯನ್ನು ಕೊಂಡಾಡಿದ್ದರು. 2021ರಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯನ್ನು ಕಾಮ್ಯ ಅವರು ಮುಡಿಗೇರಿಸಿಕೊಂಡಿದ್ದಾರೆ.

https://x.com/indiannavy/status/1793529331685396758

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

24 mins ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

1 hour ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

2 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

7 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

7 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

7 hours ago