BREAKING NEWS

ವಿಶ್ವದ ಎರಡನೇ ಕಿರಿಯ ವ್ಯಕ್ತಿಯಾಗಿ ಮೌಂಟ್‌ ಎವರೆಸ್ಟ್‌ ಏರಿದ ಭಾರತದ ಬಾಲಕಿ ಕಾಮ್ಯ!

ನವದೆಹಲಿ: ಮುಂಬೈನ 16 ವರ್ಷದ ಹರೆಯದ ಬಾಲಕಿ ಕಾಮ್ಯ ಕಾರ್ತಿಕೇಯನ್‌ ಅವರು ವಿಶ್ವದ ಅತ್ಯಂತ ಎತ್ತರದ ಶಿಖರ ಮೌಂಟ್‌ ಎವರೆಸ್ಟ್‌ನ್ನು ಏರುವ ಮೂಲಕ ವಿಶೇಷ ದಾಖಲೆ ಬರೆದಿದ್ದಾರೆ.

ಮುಂಬೈನ ನೇವಿ ಚಿಲ್ಡ್ರನ್‌ ಶಾಲೆಯಲ್ಲಿ 12ನೇ ತರಗತಿಯಲ್ಲಿ ಓದುತ್ತಿರುವ ಕಾಮ್ಯ ಸೋಮವಾರ ಮೌಂಟ್‌ ಎವರೆಸ್ಟ್‌ ಏರುವ ಮೂಲಕ ವಿನೂತನ ದಾಖಲೆ ಬರೆದಿದ್ದಾರೆ.

ಈ ಶಿಖರವನ್ನೇರಲು ಅವರು, ತಮ್ಮ ತಂದೆ ಕಮಾಂಡರ್‌ ಎಸ್‌. ಕಾರ್ತಿಕೇಯನ್‌ ಜತೆಗೂಡಿ ಈ ಕಾರ್ಯ ಸಾಧನೆ ಮಾಡಿದ್ದಾರೆ. ಇದೀಗ ಇವರ ಸಾಧನೆಯನ್ನು ಭಾರತೀಯ ನೌಕಾಪಡೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ.

ಕಾಮ್ಯ ಅವರು ಬಾಲ್ಯದಲ್ಲಿಯೇ ಟ್ರೆಕ್ಕಿಂಗ್‌ ಮೇಲೆ ಆಸಕ್ತಿ ಬೆಳೆಸಿಕೊಂಡಿದ್ದು, ತಂದೆಯೊಂದಿಗೆ ಕೂಡಿ ಟ್ರೆಕ್ಕಿಂಗ್‌ ಮಾಡಲು ತಾವು ಮೂರು ವರ್ಷದವಳಾಗಿದ್ದಾಗಲೇ ಆರಂಭಿಸಿದ್ದಾರೆ. ಬಳಿಕ ಇದು ಅಭ್ಯಾಸವಾಗಿ ಮೌಂಟ್‌ ಎವರೆಸ್ಟ್‌ ಏರುವ ವರೆಗೆ ಬೆಳೆದು ನಿಂತಿದೆ.

ಕಾಮ್ಯ ಅವರು ಈವರೆಗೆ ಹರ್‌-ಕಿ ಡನ್‌, ಕೇದಾರನಾಥ ಶಿಖರ್‌, ರೂಪ್‌ಕುಂಡ್‌ ಸರೋವರಗಳನ್ನು ಏರಿದ್ದರು. ಕಾಮ್ಯ ಅವರು ತಮ್ಮ 13ನೇ ವಯಸ್ಸಿನಲ್ಲಿಯೇ ಎವರೆಸ್ಟ್‌ ಬೇಸ್‌ ಕ್ಯಾಂಪ್‌ ಹತ್ತುವ ಮೂಲಕ ಇತಿಹಾಸ ನಿರ್ಮಿಸಿದ್ದರು.

ಈ ಸಾಧನೆ ಗುರುತಿಸಿದ್ದ ಪ್ರಧಾನಿ ನರೇಂದ್ರ ಮೋದಿ, ತಮ್ಮ ಮನ್‌ಕಿ ಬಾತ್‌ನಲ್ಲಿ ಈಕೆಯ ಸಾಧನೆಯನ್ನು ಕೊಂಡಾಡಿದ್ದರು. 2021ರಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯನ್ನು ಕಾಮ್ಯ ಅವರು ಮುಡಿಗೇರಿಸಿಕೊಂಡಿದ್ದಾರೆ.

https://x.com/indiannavy/status/1793529331685396758

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದೇವನೂರಿನಲ್ಲಿ 9 ಎಕರೆ ಒತ್ತುವರಿ ತೆರವು ; ಎಂಡಿಎ ಕಾರ್ಯಾಚರಣೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ನಗರದ ಹೊರವಲಯದ ದೇವನೂರಿನಲ್ಲಿ ಎರಡು ಕಡೆಗಳಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒತ್ತುವರಿಯಾಗಿದ್ದ…

1 hour ago

ಮಳೆ ಕೊರತೆ, ಬಿಸಿಲಿಗೆ ಕಬಿನಿ ನೀರಿನ ಮಟ್ಟ ಕುಸಿತ

ಮಂಜು ಕೋಟೆ ಎಚ್. ಡಿ. ಕೋಟೆ : ರಾಜ್ಯದ ಪ್ರಮುಖ ಜಲಾಶಯವಾದ ತಾಲ್ಲೂಕಿನ ಕಬಿನಿ ಜಲಾಶಯದ ನೀರಿನ ಮಟ್ಟ ಮಳೆಯ…

2 hours ago

ಇಂದಿನಿಂದ ಮೂರು ದಿನ ಸಿಇಟಿ ಪರೀಕ್ಷೆ

ಮೈಸೂರು : ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಗಳು ಬುಧವಾರದಿಂದ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 22 ಬುಧವಾರ

2 hours ago

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

14 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

14 hours ago