BREAKING NEWS

ವಿಶ್ವದ ಎರಡನೇ ಕಿರಿಯ ವ್ಯಕ್ತಿಯಾಗಿ ಮೌಂಟ್‌ ಎವರೆಸ್ಟ್‌ ಏರಿದ ಭಾರತದ ಬಾಲಕಿ ಕಾಮ್ಯ!

ನವದೆಹಲಿ: ಮುಂಬೈನ 16 ವರ್ಷದ ಹರೆಯದ ಬಾಲಕಿ ಕಾಮ್ಯ ಕಾರ್ತಿಕೇಯನ್‌ ಅವರು ವಿಶ್ವದ ಅತ್ಯಂತ ಎತ್ತರದ ಶಿಖರ ಮೌಂಟ್‌ ಎವರೆಸ್ಟ್‌ನ್ನು ಏರುವ ಮೂಲಕ ವಿಶೇಷ ದಾಖಲೆ ಬರೆದಿದ್ದಾರೆ.

ಮುಂಬೈನ ನೇವಿ ಚಿಲ್ಡ್ರನ್‌ ಶಾಲೆಯಲ್ಲಿ 12ನೇ ತರಗತಿಯಲ್ಲಿ ಓದುತ್ತಿರುವ ಕಾಮ್ಯ ಸೋಮವಾರ ಮೌಂಟ್‌ ಎವರೆಸ್ಟ್‌ ಏರುವ ಮೂಲಕ ವಿನೂತನ ದಾಖಲೆ ಬರೆದಿದ್ದಾರೆ.

ಈ ಶಿಖರವನ್ನೇರಲು ಅವರು, ತಮ್ಮ ತಂದೆ ಕಮಾಂಡರ್‌ ಎಸ್‌. ಕಾರ್ತಿಕೇಯನ್‌ ಜತೆಗೂಡಿ ಈ ಕಾರ್ಯ ಸಾಧನೆ ಮಾಡಿದ್ದಾರೆ. ಇದೀಗ ಇವರ ಸಾಧನೆಯನ್ನು ಭಾರತೀಯ ನೌಕಾಪಡೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ.

ಕಾಮ್ಯ ಅವರು ಬಾಲ್ಯದಲ್ಲಿಯೇ ಟ್ರೆಕ್ಕಿಂಗ್‌ ಮೇಲೆ ಆಸಕ್ತಿ ಬೆಳೆಸಿಕೊಂಡಿದ್ದು, ತಂದೆಯೊಂದಿಗೆ ಕೂಡಿ ಟ್ರೆಕ್ಕಿಂಗ್‌ ಮಾಡಲು ತಾವು ಮೂರು ವರ್ಷದವಳಾಗಿದ್ದಾಗಲೇ ಆರಂಭಿಸಿದ್ದಾರೆ. ಬಳಿಕ ಇದು ಅಭ್ಯಾಸವಾಗಿ ಮೌಂಟ್‌ ಎವರೆಸ್ಟ್‌ ಏರುವ ವರೆಗೆ ಬೆಳೆದು ನಿಂತಿದೆ.

ಕಾಮ್ಯ ಅವರು ಈವರೆಗೆ ಹರ್‌-ಕಿ ಡನ್‌, ಕೇದಾರನಾಥ ಶಿಖರ್‌, ರೂಪ್‌ಕುಂಡ್‌ ಸರೋವರಗಳನ್ನು ಏರಿದ್ದರು. ಕಾಮ್ಯ ಅವರು ತಮ್ಮ 13ನೇ ವಯಸ್ಸಿನಲ್ಲಿಯೇ ಎವರೆಸ್ಟ್‌ ಬೇಸ್‌ ಕ್ಯಾಂಪ್‌ ಹತ್ತುವ ಮೂಲಕ ಇತಿಹಾಸ ನಿರ್ಮಿಸಿದ್ದರು.

ಈ ಸಾಧನೆ ಗುರುತಿಸಿದ್ದ ಪ್ರಧಾನಿ ನರೇಂದ್ರ ಮೋದಿ, ತಮ್ಮ ಮನ್‌ಕಿ ಬಾತ್‌ನಲ್ಲಿ ಈಕೆಯ ಸಾಧನೆಯನ್ನು ಕೊಂಡಾಡಿದ್ದರು. 2021ರಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯನ್ನು ಕಾಮ್ಯ ಅವರು ಮುಡಿಗೇರಿಸಿಕೊಂಡಿದ್ದಾರೆ.

https://x.com/indiannavy/status/1793529331685396758

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

2 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

2 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

3 hours ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

4 hours ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

5 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

5 hours ago