BREAKING NEWS

ವಿಶ್ವದ ಎರಡನೇ ಕಿರಿಯ ವ್ಯಕ್ತಿಯಾಗಿ ಮೌಂಟ್‌ ಎವರೆಸ್ಟ್‌ ಏರಿದ ಭಾರತದ ಬಾಲಕಿ ಕಾಮ್ಯ!

ನವದೆಹಲಿ: ಮುಂಬೈನ 16 ವರ್ಷದ ಹರೆಯದ ಬಾಲಕಿ ಕಾಮ್ಯ ಕಾರ್ತಿಕೇಯನ್‌ ಅವರು ವಿಶ್ವದ ಅತ್ಯಂತ ಎತ್ತರದ ಶಿಖರ ಮೌಂಟ್‌ ಎವರೆಸ್ಟ್‌ನ್ನು ಏರುವ ಮೂಲಕ ವಿಶೇಷ ದಾಖಲೆ ಬರೆದಿದ್ದಾರೆ.

ಮುಂಬೈನ ನೇವಿ ಚಿಲ್ಡ್ರನ್‌ ಶಾಲೆಯಲ್ಲಿ 12ನೇ ತರಗತಿಯಲ್ಲಿ ಓದುತ್ತಿರುವ ಕಾಮ್ಯ ಸೋಮವಾರ ಮೌಂಟ್‌ ಎವರೆಸ್ಟ್‌ ಏರುವ ಮೂಲಕ ವಿನೂತನ ದಾಖಲೆ ಬರೆದಿದ್ದಾರೆ.

ಈ ಶಿಖರವನ್ನೇರಲು ಅವರು, ತಮ್ಮ ತಂದೆ ಕಮಾಂಡರ್‌ ಎಸ್‌. ಕಾರ್ತಿಕೇಯನ್‌ ಜತೆಗೂಡಿ ಈ ಕಾರ್ಯ ಸಾಧನೆ ಮಾಡಿದ್ದಾರೆ. ಇದೀಗ ಇವರ ಸಾಧನೆಯನ್ನು ಭಾರತೀಯ ನೌಕಾಪಡೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ.

ಕಾಮ್ಯ ಅವರು ಬಾಲ್ಯದಲ್ಲಿಯೇ ಟ್ರೆಕ್ಕಿಂಗ್‌ ಮೇಲೆ ಆಸಕ್ತಿ ಬೆಳೆಸಿಕೊಂಡಿದ್ದು, ತಂದೆಯೊಂದಿಗೆ ಕೂಡಿ ಟ್ರೆಕ್ಕಿಂಗ್‌ ಮಾಡಲು ತಾವು ಮೂರು ವರ್ಷದವಳಾಗಿದ್ದಾಗಲೇ ಆರಂಭಿಸಿದ್ದಾರೆ. ಬಳಿಕ ಇದು ಅಭ್ಯಾಸವಾಗಿ ಮೌಂಟ್‌ ಎವರೆಸ್ಟ್‌ ಏರುವ ವರೆಗೆ ಬೆಳೆದು ನಿಂತಿದೆ.

ಕಾಮ್ಯ ಅವರು ಈವರೆಗೆ ಹರ್‌-ಕಿ ಡನ್‌, ಕೇದಾರನಾಥ ಶಿಖರ್‌, ರೂಪ್‌ಕುಂಡ್‌ ಸರೋವರಗಳನ್ನು ಏರಿದ್ದರು. ಕಾಮ್ಯ ಅವರು ತಮ್ಮ 13ನೇ ವಯಸ್ಸಿನಲ್ಲಿಯೇ ಎವರೆಸ್ಟ್‌ ಬೇಸ್‌ ಕ್ಯಾಂಪ್‌ ಹತ್ತುವ ಮೂಲಕ ಇತಿಹಾಸ ನಿರ್ಮಿಸಿದ್ದರು.

ಈ ಸಾಧನೆ ಗುರುತಿಸಿದ್ದ ಪ್ರಧಾನಿ ನರೇಂದ್ರ ಮೋದಿ, ತಮ್ಮ ಮನ್‌ಕಿ ಬಾತ್‌ನಲ್ಲಿ ಈಕೆಯ ಸಾಧನೆಯನ್ನು ಕೊಂಡಾಡಿದ್ದರು. 2021ರಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯನ್ನು ಕಾಮ್ಯ ಅವರು ಮುಡಿಗೇರಿಸಿಕೊಂಡಿದ್ದಾರೆ.

https://x.com/indiannavy/status/1793529331685396758

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

34 mins ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

9 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

9 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

9 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

12 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

12 hours ago